'ಲಿಂಗಪತ್ತೆ ಕಡ್ಡಾಯ' ಹೆಣ್ಣು ಮಕ್ಕಳ ಪಾಲಿಗೆ ಮರಣಶಾಸನ
ಬೆಂಗಳೂರು, ಫೆಬ್ರವರಿ,04: ಹೆಣ್ಣುಮಕ್ಕಳ ಜೀವಕ್ಕೆ ಕುತ್ತು ತರಲು ಹೊರಟಿರುವ ಲಿಂಗ ಪತ್ತೆ ಕಡ್ಡಾಯಕ್ಕೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿಯವರ ಪ್ರಸ್ತಾಪವನ್ನು ಅಲ್ಲಗಳೆದಿದೆ.
ಲಿಂಗ ಆಯ್ಕೆ ತಡೆಯಲು ಲಿಂಗಪತ್ತೆಯನ್ನು ಕಡ್ಡಾಯಗೊಳಿಸುವುದು ಮತ್ತಷ್ಟು ಹೆಣ್ಣುಭ್ರೂಣ ಹತ್ಯೆಗೆ ಅವಕಾಶ ಮಾಡಿಕೊಡುತ್ತದೆ. ಸತತವಾಗಿ ಲಿಂಗಾನುಪಾತ ಕುಸಿಯುತ್ತಿರುವ ಪ್ರಸಕ್ತ ಸಂದರ್ಭದಲ್ಲಿ ಹೆಣ್ಣು ಮಕ್ಕಳ ಪಾಲಿಗೆ ಇದು ಮರಣಶಾಸನವೇ ಆಗಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮನೇಕಾ ಗಾಂಧಿಯವರ ಮೇಲೆ ಕಿಡಿಕಾರಿದೆ.[ಭ್ರೂಣ ಲಿಂಗ ಪತ್ತೆ ಪರೀಕ್ಷೆ ಮೇಲಿನ ನಿಷೇಧ ತೆರವು]

ಆರಂಭದಲ್ಲೇ ಲಿಂಗಪತ್ತೆ ಮಾಡಿ, ಹೆಣ್ಣುಭ್ರೂಣ ಹತ್ಯೆಯಾಗದಂತೆ ನಿಗಾವಹಿಸಬಹುದೆಂಬ ಕೇಂದ್ರ ಸಚಿವರ ಪ್ರಸ್ತಾಪ, ಅನಧಿಕೃತ, ಅಕ್ರಮ, ಹೆಣ್ಣು ಭ್ರೂಣ ಹತ್ಯೆಗೆ ಆಸ್ಪದ ಮಾಡಿಕೊಡಲಿದೆ. ಲಿಂಗಪತ್ತೆ ಮಾಡುವುದರಿಂದ ಗರ್ಭಿಣಿಯ ಮೇಲೆ ಕುಟುಂಬದ ಒತ್ತಡ, ಹಿಂಸೆ ಹೆಚ್ಚಾಗಲಿದ್ದೂ ಆಕೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದರು.[ಗರ್ಭಾವಸ್ಥೆಯಲ್ಲಿ ಕಾಡುವ ಸಮಸ್ಯೆಗೆ, ಒಂದಿಷ್ಟು ಸಲಹೆ]
ಪಿಸಿ ಅಂಡ್ ಪಿಎನ್ ಡಿಟಿ (Pre-Conception and Pre Natal Diagnostic Techniques Act-1994) ಕಾನೂನನ್ನು ಉಲ್ಲಂಘಿಸುತ್ತಿರುವ ಮತ್ತು ಪ್ರತಿರೋಧ ಒಡ್ಡುತ್ತಿರುವ ಖಾಸಗೀ ಕಾರ್ಪೋರೇಟ್ ಪ್ರೇರಿತ ಈ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಕೂಡಲೇ ಕೈ ಬಿಡಬೇಕು, ಪಿ.ಸಿ ಅಂಡ್ ಪಿಎನ್ ಡಿಟಿ ಕಾನೂನನ್ನು ಬಲಪಡಿಸಿ ಸಮರ್ಪಕ ಜಾರಿಗಾಗಿ ಕ್ರಮಕೈಗೊಳ್ಳಬೇಕು.
"ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ" ಎನ್ನುವ ಘೋಷಣೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಹೆಣ್ಣು ಮಕ್ಕಳನ್ನೇ ಇಲ್ಲವಾಗಿಸಲು ಹೊರಟಿರುವುದನ್ನು ಅಮಾನವೀಯ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.[ಗರ್ಭಿಣಿಯರ ಆರೋಗ್ಯಕ್ಕೆ ಬೇಕು, ಒಂದಿಷ್ಟು ಖರ್ಜೂರ...]
ಪಿಸಿ ಆಂಡ್ ಪಿಎನ್ ಡಿಟಿ ಕಾಯ್ದೆ -1994
ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯಲು ಇರುವಂತಹ ಕಾಯ್ದೆ. ಇದರ ಪ್ರಕಾರ ಹೆಣ್ಣು ಭ್ರೂಣ ಹತ್ಯೆ ಮಾಡಿದವರನ್ನು ಬಂಧಿಸಲಾಗುತ್ತದೆ. ಈ ಕಾಯ್ದೆಯು ಲಿಂಗ ಪತ್ತೆ ಪರೀಕ್ಷೆಯನ್ನು ನಿಷೇಧಿಸುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications