ಬ್ರಾಹ್ಮಣ ಮಹಾಸಭಾ ಚುನಾವಣೆ: ನಿವೃತ್ತ ನ್ಯಾ.ಕುಮಾರ್ ಬೆಂಬಲ ಯಾರಿಗೆ?
ಬೆಂಗಳೂರು, ನವೆಂಬರ್ 9: 'ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕರ್ನಾಟಕ ರಾಜ್ಯದ 44 ಲಕ್ಷಕ್ಕೂ ಹೆಚ್ಚಿನ ಬ್ರಾಹ್ಮಣರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕಿಗೆ ವಂಚಿಸಿದವರಿಗೆ ರಕ್ಷಣೆ ನೀಡುತ್ತಿರುವವರನ್ನು ಈ ಸಂಸ್ಥೆಯಿಂದ ದೂರ ಇರಿಸುವ ಅಗತ್ಯ ಇದೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್ ಅಭಿಪ್ರಾಯಪಟ್ಟರು.
ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್.ರಘುನಾಥ್ ಅವರ ಕತ್ರಿಗುಪ್ಪೆ ಅಶೋಕನಗರದಲ್ಲಿರುವ ಚುನಾವಣಾ ಕಚೇರಿಯಲ್ಲಿ ಗಣೇಶ ಪೂಜೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಗ್ರ ಕರ್ನಾಟಕವನ್ನು ಪ್ರತಿನಿಧಿಸುವಂತಹ ಸಂಸ್ಥೆಯಾಗಿ ಹೊರಹೊಮ್ಮಲು ಅತ್ಯುತ್ತಮ ಅಧ್ಯಕ್ಷರ ಆಯ್ಕೆಯ ಅಗತ್ಯವಿದೆ. ರಘುನಾಥ್ ಅವರು ಆಯ್ಕೆಯಾದರೆ ಸಂಸ್ಥೆ ಸಮರ್ಥವಾಗಿ ಮುನ್ನಡೆದು, ಬ್ರಾಹ್ಮಣ ಸಮುದಾಯಕ್ಕೂ ಉಪಯೋಗವಾಗುವ ವಿಶ್ವಾಸ ಇದೆ ಎಂದರು.
'ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕಿಗೆ ವಂಚಿಸಿದವರಿಗೆ ರಕ್ಷಣೆ ನೀಡುತ್ತಿರುವವರಿಗೆ ಅಧಿಕಾರ ನೀಡಿದರೆ ಬ್ರಾಹ್ಮಣರಿಗೆ ಮತ್ತಷ್ಟು ಅನ್ಯಾಯ ಆಗುವ ಸಾಧ್ಯತೆ ಇದೆ. ಈ ಬ್ಯಾಂಕಿನಲ್ಲಿ ಹಣವಿಟ್ಟು ಕಳೆದುಕೊಂಡ 93 ಮಂದಿ ಈಗಾಗಲೇ ಜೀವ ಕಳೆದುಕೊಂಡಿದ್ದಾರೆ. ಇದುವರೆಗೆ ಮಹಾಸಭಾ ವಂಚಕರ ವಿರುದ್ಧ ಒಂದು ಮಾತನ್ನೂ ಆಡಿಲ್ಲ' ಎಂದು ಅವರು ದೂರಿದರು.

'ಪ್ರಸ್ತುತ ಸ್ಪರ್ಧೆಗೆ ಅಪೇಕ್ಷೆಪಟ್ಟ ಕೆಲವರನ್ನು ನೋಡಿದರೆ ಹಣ ಕಳೆದುಕೊಂಡವರ ಪರವಾಗಿ ಇರಬೇಕಾದ ವ್ಯಕ್ತಿಗಳು ಹಣ ದೋಚಿದವರ ಪರವಾಗಿ ಇರುವುದು ಕಂಡುಬರುತ್ತಿದೆ. ಇದು ನಾಚಿಕೆಗೇಡಿನ ಸಂಗತಿ' ಎಂದು ಹೇಳಿದರು.
'ಈ ಬ್ಯಾಂಕಿಗೆ ಒಂದಲ್ಲಾ ಒಂದು ರೀತಿಯಲ್ಲಿ ಸಂಬಂಧ ಇರುವವರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗುತ್ತಿರುವುದು ಶೋಚನೀಯ. ನಿಜಕ್ಕೂ ಬ್ರಾಹ್ಮಣ ಸಮಾಜ ಎತ್ತ ಸಾಗುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿರುವ ಬ್ರಾಹ್ಮಣರ ಸಲಹಾ ಸಮಿತಿಯನ್ನು ರಚಿಸಿ, ಆ ಮೂಲಕ ಸಮಗ್ರ ಅಭಿವೃದ್ಧಿಗೆ ಮುಂದಾಗುವಂತಹ ಅಲ್ಲದೆ ರಾಜಕೀಯ ಶಕ್ತಿಯನ್ನು ಪ್ರಬಲಗೊಳಿಸುವ ಅಧ್ಯಕ್ಷರ ಆಯ್ಕೆಯ ಅಗತ್ಯವಿದೆ. ಪೂರ್ಣ ಸಮಯ ನೀಡುವ, ಮಹಾಸಭಾದಿಂದ ಯಾವುದೇ ಅಪೇಕ್ಷೆಪಡದ ಅಭ್ಯರ್ಥಿ ಬೇಕಾಗಿದೆ. ಎಸ್.ರಘುನಾಥ್ ಅವರು ಈ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಬಲ್ಲರು ಎಂಬ ವಿಶ್ವಾಸ ಇದೆ' ಎಂದು ನ್ಯಾಯಮೂರ್ತಿ ಕುಮಾರ್ ಹೇಳಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದಮೂರ್ತಿ ಮಾತನಾಡಿ, ''ಕೋವಿಡ್ನ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಮಂಡಳಿಯಿಂದ ಮಾಡಿರುವ ಸಹಾಯ ಮತ್ತು ನೆರವಿನ ಬಗ್ಗೆ ಹಾಗೂ ಸಾಂದೀಪಿನಿ ಶಿಕ್ಷಣ ವೇತನ ಸೇರಿದಂತೆ ಹತ್ತಾರು ಯೋಜನೆಗಳ ಜಾರಿಗೊಳಿಸಿರುವುದನ್ನು ವಿವರಿಸಿದರು. ಈ ಯಾವುದೇ ಕಾರ್ಯಗಳಿಗೆ ಮಹಾಸಭಾ ಸಹಕರಿಸಿಲ್ಲ. ಕೇವಲ ದೋಷಾರೋಪ ಮಾಡುವುದರಲ್ಲಿಯೇ ಸಮಯ ಹಾಳು ಮಾಡಿದೆ. ಇಂತಹವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ,'' ಎಂದು ಹೇಳಿದರು.
Recommended Video
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಸ್.ರಘುನಾಥ್ ಮಾತನಾಡಿ, ಮಹಾಸಭಾಕ್ಕೆ ಬದಲಾವಣೆಯ ಅಗತ್ಯವಿದೆ. ಎಲ್ಲರ ಸಹಕಾರದಿಂದ ಬದಲಾವಣೆ ತಂದು ಅತ್ಯುತ್ತಮ ಆಡಳಿತ ನೀಡುವುದರೊಂದಿಗೆ ಇಡೀ ರಾಜ್ಯದಾದ್ಯಂತ ಬ್ರಾಹ್ಮಣರ ಸಂಘಟನೆ ಮತ್ತು ಅಭ್ಯುದಯಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದರು. ದಾಸಸಾಹಿತ್ಯದ ಅರಳುಮಲ್ಲಿಗೆ ಪಾರ್ಥಸಾರಥಿ, ಖ್ಯಾತ ಗಾಯಕ ಶಶಿಧರ ಕೋಟೆ, ಸಿರಿನಾಡು ಮಹಾಸಭಾದ ಸುದರ್ಶನ್, ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ, ವೈ.ಎನ್.ಶರ್ಮಾ, ವತ್ಸಲಾ ನಾಗೇಶ್ ಇತರರು ಇದ್ದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications