ಅಕ್ರಮ -ಸಕ್ರಮ ಯೋಜನೆಗೆ ಸುಪ್ರೀಂನಿಂದ ತಡೆಯಾಜ್ಞೆ
ಅಕ್ರಮ ಕಟ್ಟಡಗಳನ್ನು ಕಾನೂನುಬದ್ಧಗೊಳಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಲಾಗಿದೆ.
ನವದಹಲಿ/ಬೆಂಗಳೂರು, ಜನವರಿ 13: ಅಕ್ರಮ ಕಟ್ಟಡಗಳನ್ನು ಕಾನೂನುಬದ್ಧಗೊಳಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಲಾಗಿದೆ.
ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಈ ತಡೆಯಾಜ್ಞೆ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ಅಕ್ರಮ-ಸಕ್ರಮ ಯೋಜನೆಗೆ ನೀಡಿದ್ದ ತೀರ್ಪಿಗೆ ಮುಖ್ಯ ನ್ಯಾಯಮೂರ್ತಿ ಖೆಹರ್ ಸಿಂಗ್ ನೇತೃತ್ವದ ಪೀಠ ಶುಕ್ರವಾರ ತಡೆಯಾಜ್ಞೆ ನೀಡಿದೆ.[ಅಕ್ರಮ ಸಕ್ರಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್]
ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಬೆಂಗಳೂರು ಫೌಂಡೇಶನ್ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳ ಪೀಠ ತೀರ್ಪಿಗೆ ತಡೆಯಾಜ್ಞೆ ನೀಡಿ ಇಡೀ ಯೋಜನೆ ಕುರಿತು ಸುದೀರ್ಘ ವಿಚಾರಣೆ ನಡೆಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ತಡೆಯಾಜ್ಞೆ ಇರುವವರೆಗೂ ಅಕ್ರಮ-ಸಕ್ರಮ ಯೋಜನೆಯ ಯಾವುದೇ ಅರ್ಜಿಗಳನ್ನು ಸಾರ್ವಜನಿಕರಿಂದ ಯಾವುದೇ ರೀತಿಯ ಅರ್ಜಿಗಳನ್ನು ಸ್ವೀಕರಿಸಬಾರದೆಂದು ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.
ಈಗಾಗಲೇ ನಗರ ಪ್ರದೇಶಗಳಲ್ಲಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸುವ ಬದಲು ಪ್ರದೇಶವಾರು ಶುಲ್ಕ ವಿಧಿಸಿ ಕಾನೂನು ಬದ್ಧಗೊಳಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ನ್ಯಾಯಪೀಠಕ್ಕೆ ಸರ್ಕಾರದ ಪರ ಖ್ಯಾತ ವಕೀಲ ಬಸವ ಪ್ರಭುಪಾಟೀಲ್ ವಾದ ಮಂಡಿಸಿದರು.[ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?]
NBF welcomes SC stay. #AkramaSakrama shud be clubbed with penalizing erring builders & officials, who act on vested interest. @rajeev_mp
— NBF (@Namma_Bengaluru) January 13, 2017
ಸರ್ಕಾರದ ಈ ಯೋಜನೆ ಅವೈಜ್ಞಾನಿಕವಾಗಿದೆ. ಸರ್ಕಾರಿ ಭೂಮಿಯಲ್ಲಿ ಕಟ್ಟಡಗಳನ್ನು ನಿರ್ಮಿಸಿಕೊಳ್ಳುವುದೇ ಕಾನೂನು ಬಾಹಿರ.
ಕೇವಲ ದಂಡ ಪಾವತಿಸಿ ತಕ್ಷಣ ಸಕ್ರಮಗೊಳಿಸುವುದು ಸರಿಯಲ್ಲ. ಇದು ಸುದೀರ್ಘ ವಿಚಾರಣೆ ನಡೆಯಬೇಕೆಂದು ಅರ್ಜಿದಾರರ ಪರ ಖ್ಯಾತ ವಕೀಲ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸಿದರು. ಎರಡು ವಾದ ಪ್ರತಿವಾದ ಆಲಿಸಿದ ನ್ಯಾ ಖೇಹರ್ ಅವರಿದ್ದ ನ್ಯಾಯಪೀಠ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆಯಾಜ್ಞೆ ನೀಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ










Click it and Unblock the Notifications