ಶಾಲೆ ಆರಂಭದ ಬೆನ್ನಲ್ಲೇ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟವೂ ರೆಡಿ!
ಬೆಂಗಳೂರು, ಮೇ 16: 35 ದಿನಗಳ ಬೇಸಿಗೆಯ ರಜೆಯ ನಂತರ ಶಾಲೆಗಳು ಪುನರಾರಂಭಗೊಂಡಿದ್ದು, ಪ್ರಸಕ್ತ 2022-23 ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳು ಮರಳಿ ಶಾಲೆಗೆ ಬಂದಿದ್ದಾರೆ. ಈ ನಿಟ್ಟಿನಲ್ಲಿ, ಅಕ್ಷಯ ಪಾತ್ರೆ ಪ್ರತಿಷ್ಠಾನ ಬೆಂಗಳೂರಿನ ಸುತ್ತಮುತ್ತಲಿನ 1200 ಶಾಲೆಗಳಲ್ಲಿ ಓದುತ್ತಿರುವ 1,50,000 ಮಕ್ಕಳಿಗೆ, ರಾಜಾಜಿನಗರ, ಗುಣಿ ಅಗ್ರಹಾರ ಹಾಗೂ ಜಿಗಣಿಯಲ್ಲಿರುವ ಕೇಂದ್ರೀಕೃತ ಪಾಕಶಾಲೆಗಳ ಮೂಲಕ ಬಿಸಿಯೂಟವನ್ನು ಇಂದಿನಿಂದ 16ನೇ ಮೇ-2022 ನಿಂದ ನೀಡಲಿದೆ. ಪ್ರತಿಷ್ಠಾನದ ಬಿಸಿಯೂಟ ಯೋಜನೆ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ಪ್ರಯೋಜನವಾಗಲಿದೆ.
ಮದ್ಯಾಹ್ನ ಬಿಸಿಯೂಟ ಕಾರ್ಯಕ್ರಮ ಪುನರಾರಂಭಗೊಂಡಿರುವ ಬೆನ್ನಲ್ಲೇ, ಇದರ ಅನುಷ್ಠಾನದಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಪೌಷ್ಟಿಕ ಆಹಾರ ಪೂರೈಕೆ ಹಾಗೂ ಕೋವಿಡ್ ಶಿಷ್ಟಾಚಾರ ನಿಯಮಾವಳಿಗಳನ್ನು ಪಾಲಿಸಲು ನಮ್ಮ ಸಿಬ್ಬಂದಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡಲಾಗಿದೆ. ಬಿಸಿಯೂಟದ ತಯಾರಿ, ಪ್ಯಾಕೇಜಿಂಗ್ ಹಾಗೂ ಪೂರೈಕೆಯಾಗುವವರೆಗೂ ಕಟ್ಟುನಿಟ್ಟಿನ ಕೋವಿಡ್ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗುತ್ತದೆ.

ಸೊಪ್ಪಿನ ಸಾಂಬಾರ್ ಹಾಗೂ ಅನ್ನ
35 ದಿನಗಳ ಬೇಸಿಗೆ ರಜೆಯ ನಂತರ ಪುನರಾರಂಭಗೊಂಡಿರುವ ಶಾಲೆಗಳ ಫಲಾನುಭವಿ ಮಕ್ಕಳಿಗೆ ವಿಶೇಷವಾದ ಖಾದ್ಯಪಟ್ಟಿಯನ್ನು ಪ್ರತಿಷ್ಠಾನವು ತಯಾರಿಸಿದ್ದು, ಅದರಲ್ಲಿ: ಪುಷ್ಟೀಕರಿಸಿದ ಅನ್ನ (ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಬೇಕಾಗಿರುವ ಪೋಷಕಾಂಶಗಳನ್ನು ಸೇರಿಸುವುದು), ಸೊಪ್ಪಿನ ಸಾಂಬಾರ್, ಹೆಸರು ಬೇಳೆ ಪಾಯಸವನ್ನು ನೀಡಲಾಗುತ್ತದೆ.
Recommended Video

ಈ ಯೋಜನೆ ಪುನರ್ ಆರಂಭ
ಕೋವಿಡ್ -19 ಸಾಂಕ್ರಾಮಿಕದ ದೆಸೆಯಿಂದ ಶಾಲೆಗಳು ಮುಚ್ಚಿದ್ದರಿಂದ ಕಲಿಕೆ ಜೊತೆಗೆ ಪೌಷ್ಟಿಕ ಆಹಾರದ ಕೊರತೆಯನ್ನು ಅನೇಕ ಮಕ್ಕಳು ಎದುರಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿ 2021 ಅಕ್ಟೋಬರ್ ತಿಂಗಳಿನಿಂದ ಈ ಯೋಜನೆ ಪುನರ್ ಆರಂಭಿಸಲಾಯಿತು. ಇದರಿಂದ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಯೋಜನ ಪಡೆದುಕೊಂಡಿವೆ.

ಪ್ರೌಢಶಿಕ್ಷಣ ಇಲಾಖೆಯಿಂದ ಸೂಚನೆ
''18 ತಿಂಗಳ ನಂತರ ಶಾಲೆಗಳನ್ನು ಪುನರಾರಂಭಿಸಿದ ನಂತರ, ಬೀನ್ಸ್, ಕ್ಯಾರೆಟ್, ಕ್ಯಾಪ್ಸಿಕಂ, ಆಲೂಗಡ್ಡೆ ಮತ್ತು ಎಲೆಕೋಸು ತುಂಬಿದ ವೆಜ್ ಬಿರಿಯಾನಿ ಮತ್ತು ಮೂಂಗ್ ದಾಲ್ ಪಾಯಸಂ ರೂಪದಲ್ಲಿ ಸಿಹಿ ಹೀಗೆ ನಾವು ಫಲಾನುಭವಿಗಳಿಗೆ ವಿಶೇಷ ಮೆನುವನ್ನು ತಯಾರಿಸಿದ್ದೇವೆ," ಎಂದು ಅಕ್ಷಯಪಾತ್ರ ಸಂಸ್ಥೆಯ ಪ್ರತಿನಿಧಿ ತಿಳಿಸಿದರು. ಉಪ್ಪು, ಎಣ್ಣೆ ಮತ್ತು ಬೇಳೆ ಸಂಗ್ರಹಿಸಿ ವಿತರಿಸಲು ಕರ್ನಾಟಕ ಆಹಾರ ನಿಗಮಕ್ಕೆ ನಿರ್ದೇಶನ ನೀಡಲಾಗಿದೆ. ಶಾಲೆಗಳು ಆರಂಭವಾಗಿ ಅಲ್ಲಿಯೇ ಅಡುಗೆ ಮಾಡುವ ವ್ಯವಸ್ಥೆ ಮತ್ತೆ ಜಾರಿಗೆ ಬರುವವರೆಗೆ ಈ ವ್ಯವಸ್ಥೆ ಮುಂದುವರೆಸಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶದ ಕೊರತೆ
ಶಿಕ್ಷಣ ತಜ್ಞರು, ಆರೋಗ್ಯ ತಜ್ಞರು, ಶಾಲಾ ಅಭಿವೃದ್ಧಿ ಮತ್ತು ಸಲಹಾ ಸಮಿತಿಯ ಸದಸ್ಯರು ಮತ್ತು ಶಿಕ್ಷಕರು ಆರನೇ ತರಗತಿಗಿಂತ ಕಡಿಮೆ ತರಗತಿಗಳನ್ನು ಮುಚ್ಚುವಂತೆ ಸಲಹೆಗಳನ್ನು ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶದ ಕೊರತೆ ಎದುರಾಗುತ್ತಿದೆ ಎಂದು ಸಮಿತಿ ಕಳವಳ ವ್ಯಕ್ತಪಡಿಸಿದ್ದಾರೆ. ಅಂಗನವಾಡಿಗಳೂ ಬಂದ್ ಆಗಿದ್ದು, ಮಕ್ಕಳಲ್ಲಿ ಅಪೌಷ್ಟಿಕತೆ ಎದುರಾಗುತ್ತಿದೆ. ಸರ್ಕಾರ ಕೂಡಲೇ ಬಿಸಿಯೂಟ ಕಾರ್ಯಕ್ರಮ ಆರಂಭಿಸಬೇಕಿದೆ ಎಂದು ಆರೋಗ್ಯ ತಜ್ಞ ಡಾ.ಬೆವಿಂಜೆ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications