ಉಸಿರುಗಟ್ಟಿಸುವ ವಾತಾವರಣದಲ್ಲಿ ಬೆಂಗಳೂರು ವಿಲವಿಲ
ಬೆಂಗಳೂರು, ಏ. 29 : ಒಂದಾನೊಂದು ಕಾಲದಲ್ಲಿ ದಟ್ಟವಾದ ಗಿಡಮರಗಳಿಂದಾಗಿ ಉದ್ಯಾನ ನಗರಿ ಎಂದು ಹೆಸರು ಪಡೆದಿದ್ದ ಬೆಂಗಳೂರು, ಇಂದು ದಟ್ಟವಾದ ವಾಯುಮಾಲಿನ್ಯದಿಂದಾಗಿ ಉಸಿರಾಡಲು ಪರದಾಡುತ್ತಿದೆ. ನಗರದ ಕೆಲ ಭಾಗಗಳ ವಾಯುಮಾಲಿನ್ಯ ರಾಷ್ಟ್ರೀಯ ಮಿತಿಯನ್ನು ಮೀರಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಮಾಲಿನ್ಯದ ದತ್ತಾಂಶ ದಂಗುಬಡಿಸುವಂತಿದೆ. ತಮಗೆ ಅರಿವಿಲ್ಲದಂತೆಯೆ ಬೆಂಗಳೂರಿನ ಜನತೆ ಇದೇ ವಾಯುವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಇದೊಂದು ರೀತಿ ನಿಧಾನ ವಿಷಪ್ರಾಶನವಿದ್ದಂತೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ವರ್ತೂರಿನಲ್ಲಿ ವಿಷಾನಿಲದಿಂದ ಕೂಡಿರುವ ಚರಂಡಿ ನೀರು ಹೊರಹೊಮ್ಮಿಸುತ್ತಿರುವ ನೊರೆಯಿಂದಾಗಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ವಾಹನದಟ್ಟಣೆಯಿಂದ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಮಿತಿಮೀರಿರುವ ಅವುಗಳ ಪ್ರಮಾಣದ ಬಗ್ಗೆ ಮತ್ತೊಮ್ಮೆ ಚರ್ಚಿಸುವಂತಾಗಿದೆ.

ವೈಟ್ ಫೀಲ್ಡ್ ಮತ್ತು ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ ಅತಿಹೆಚ್ಚು ಮಾಲಿನ್ಯದಿಂದ ಕೂಡಿವೆ. ಹೆಚ್ಚುತ್ತಿರುವ ವಾಹನಗಳು, ವಿರಳವಾಗುತ್ತಿರುವ ಹಸಿರು, ನಿಯಂತ್ರಣ ಕಳೆದುಕೊಳ್ಳುತ್ತಿರುವ ಸಂಚಾರ ವ್ಯವಸ್ಥೆಗಳು ಬೆಂಗಳೂರಿಗೆ ಈ ದುರವಸ್ಥೆಯನ್ನು ತಂದೊಡ್ಡಿವೆ.
ವೈಟ್ ಫೀಲ್ಡ್ನ ಆರ್ಎಸ್ಪಿಎಂ (Respirable Suspended Particulate Matter) ಮಟ್ಟ ರಾಷ್ಟ್ರೀಯ ಮಟ್ಟಕ್ಕಿಂತ ಶೇ.155ರಷ್ಟು ಹೆಚ್ಚಿದ್ದರೆ, ಹೊಸೂರು ರಸ್ತೆಯ ವಾಯುಮಾಲಿನ್ಯದ ಮಟ್ಟ ಶೇ.202ರಷ್ಟು ಅಧಿಕವಾಗಿದೆ. ಪ್ರತಿವಾರ ವಾಯುಮಾಲಿನ್ಯದ ಮಟ್ಟವನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಳೆಯುತ್ತಿರುತ್ತದೆ.
ಇವೆರಡು ಪ್ರದೇಶಗಳಲ್ಲದೆ ಯಶವಂತಪುರ, ಪೀಣ್ಯ ಔದ್ಯೋಗಿಕ ಪ್ರದೇಶ, ಮೈಸೂರು ರಸ್ತೆ, ವಿಕ್ಟೋರಿಯಾ ರಸ್ತೆ, ವಿಕ್ಟೋರಿಯಾ ಆಸ್ಪತ್ರೆ, ನಿಮ್ಹಾನ್ಸ್, ದೊಮ್ಮಲೂರು ಪ್ರದೇಶಗಳಲ್ಲಿನ ವಾಯುಮಾಲಿನ್ಯ ಆತಂಕಕಾರಿಯಾಗಿ ಬೆಳೆಯುತ್ತಿದೆ. ಮಾಲಿನ್ಯವನ್ನು ನಿಯಂತ್ರಣದಲ್ಲಿಡುವುದು ಹೇಗೆ? ಯಾರು?
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications