ಉಸಿರುಗಟ್ಟಿಸುವ ವಾತಾವರಣದಲ್ಲಿ ಬೆಂಗಳೂರು ವಿಲವಿಲ
ಬೆಂಗಳೂರು, ಏ. 29 : ಒಂದಾನೊಂದು ಕಾಲದಲ್ಲಿ ದಟ್ಟವಾದ ಗಿಡಮರಗಳಿಂದಾಗಿ ಉದ್ಯಾನ ನಗರಿ ಎಂದು ಹೆಸರು ಪಡೆದಿದ್ದ ಬೆಂಗಳೂರು, ಇಂದು ದಟ್ಟವಾದ ವಾಯುಮಾಲಿನ್ಯದಿಂದಾಗಿ ಉಸಿರಾಡಲು ಪರದಾಡುತ್ತಿದೆ. ನಗರದ ಕೆಲ ಭಾಗಗಳ ವಾಯುಮಾಲಿನ್ಯ ರಾಷ್ಟ್ರೀಯ ಮಿತಿಯನ್ನು ಮೀರಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿರುವ ಮಾಲಿನ್ಯದ ದತ್ತಾಂಶ ದಂಗುಬಡಿಸುವಂತಿದೆ. ತಮಗೆ ಅರಿವಿಲ್ಲದಂತೆಯೆ ಬೆಂಗಳೂರಿನ ಜನತೆ ಇದೇ ವಾಯುವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಇದೊಂದು ರೀತಿ ನಿಧಾನ ವಿಷಪ್ರಾಶನವಿದ್ದಂತೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ವರ್ತೂರಿನಲ್ಲಿ ವಿಷಾನಿಲದಿಂದ ಕೂಡಿರುವ ಚರಂಡಿ ನೀರು ಹೊರಹೊಮ್ಮಿಸುತ್ತಿರುವ ನೊರೆಯಿಂದಾಗಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ವಾಹನದಟ್ಟಣೆಯಿಂದ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಮಿತಿಮೀರಿರುವ ಅವುಗಳ ಪ್ರಮಾಣದ ಬಗ್ಗೆ ಮತ್ತೊಮ್ಮೆ ಚರ್ಚಿಸುವಂತಾಗಿದೆ.

ವೈಟ್ ಫೀಲ್ಡ್ ಮತ್ತು ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ ಅತಿಹೆಚ್ಚು ಮಾಲಿನ್ಯದಿಂದ ಕೂಡಿವೆ. ಹೆಚ್ಚುತ್ತಿರುವ ವಾಹನಗಳು, ವಿರಳವಾಗುತ್ತಿರುವ ಹಸಿರು, ನಿಯಂತ್ರಣ ಕಳೆದುಕೊಳ್ಳುತ್ತಿರುವ ಸಂಚಾರ ವ್ಯವಸ್ಥೆಗಳು ಬೆಂಗಳೂರಿಗೆ ಈ ದುರವಸ್ಥೆಯನ್ನು ತಂದೊಡ್ಡಿವೆ.
ವೈಟ್ ಫೀಲ್ಡ್ನ ಆರ್ಎಸ್ಪಿಎಂ (Respirable Suspended Particulate Matter) ಮಟ್ಟ ರಾಷ್ಟ್ರೀಯ ಮಟ್ಟಕ್ಕಿಂತ ಶೇ.155ರಷ್ಟು ಹೆಚ್ಚಿದ್ದರೆ, ಹೊಸೂರು ರಸ್ತೆಯ ವಾಯುಮಾಲಿನ್ಯದ ಮಟ್ಟ ಶೇ.202ರಷ್ಟು ಅಧಿಕವಾಗಿದೆ. ಪ್ರತಿವಾರ ವಾಯುಮಾಲಿನ್ಯದ ಮಟ್ಟವನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಳೆಯುತ್ತಿರುತ್ತದೆ.
ಇವೆರಡು ಪ್ರದೇಶಗಳಲ್ಲದೆ ಯಶವಂತಪುರ, ಪೀಣ್ಯ ಔದ್ಯೋಗಿಕ ಪ್ರದೇಶ, ಮೈಸೂರು ರಸ್ತೆ, ವಿಕ್ಟೋರಿಯಾ ರಸ್ತೆ, ವಿಕ್ಟೋರಿಯಾ ಆಸ್ಪತ್ರೆ, ನಿಮ್ಹಾನ್ಸ್, ದೊಮ್ಮಲೂರು ಪ್ರದೇಶಗಳಲ್ಲಿನ ವಾಯುಮಾಲಿನ್ಯ ಆತಂಕಕಾರಿಯಾಗಿ ಬೆಳೆಯುತ್ತಿದೆ. ಮಾಲಿನ್ಯವನ್ನು ನಿಯಂತ್ರಣದಲ್ಲಿಡುವುದು ಹೇಗೆ? ಯಾರು?
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications