ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಕೈಜೋಡಿಸಿದ ಭಾರತೀಯ ವಿಜ್ಞಾನ ಸಂಸ್ಥೆ
ಬೆಂಗಳೂರು, ಅಕ್ಟೋಬರ್. 07 : ಭಾರತದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ಜಪಾನ್ ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಈ ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಕೈಜೋಡಿಸಿತು.
ಈ ಒಪ್ಪಂದದನ್ವಯ ಐಐಎಸ್ ಸಿ ಕ್ಯಾಂಪಸ್ ನಲ್ಲಿ ಅಲ್ಫಾ ಟಿಕೆಜಿ ಇಂಟರ್ ನೆಟ್ ಆಫ್ ಥಿಂಗ್ಸ್ (ಐಒಟಿ) ಇಂಡಿಯಾ ಡೆವಲಪ್ ಮೆಂಟ್ ಸೆಂಟರ್ ಅನ್ನು ಆರಂಭಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಮರ್ಥವಾಗಿ ತಂತ್ರಜ್ಞಾನವನ್ನು ಅಳವಡಿಸಲು ಈ ಒಪ್ಪಂದ ಮಹತ್ವದ ಮೈಲಿಗಲ್ಲನ್ನು ಹೊಂದಲಿದ್ದು, ರೈತರಿಗೆ ಬೆಳೆ ಬೆಳೆಯುವ ಬಗ್ಗೆ ಹಾಗೂ ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಲಿದೆ.

ಕೃಷಿಯಲ್ಲಿ ನೀರು ಕೊರತೆಯಾಗುವುದರಿಂದ ರೈತರು ನಷ್ಟ ಹೊಂದುತ್ತಿದ್ದಾರೆ. ಕೃಷಿಯಲ್ಲಿ ನೀರಿನ ಬಳಕೆ ಹೇಗೆ ಮಾಡಬೇಕೆಂದು ಕೇಂದ್ರದಲ್ಲಿ ತಿಳಿಸಲಾಗುತ್ತದೆ. ಕಡಿಮೆ ನೀರು ಬಳಕೆ ಮಾಡಿ ಉತ್ಪಾದನಾ ಹೆಚ್ಚಳವನ್ನು ಮಾಡುವ ತಂತ್ರಜ್ಞಾನ ಜಪಾನ್ ದೇಶದಲ್ಲಿ ಈಗಾಗಲೇ ಬಳಕೆಯಲ್ಲಿದೆ ಎಂದು ಅಲ್ಪಾ ಟಿಕೆಜಿ ನಿರ್ದೇಶಕ ಡಾ.ಪೆರಿಸ್ವಾಮಿ ತನಪಂಡಿ ಹೇಳಿದರು.

ಜಾಗತಿಕ ಸ್ಪರ್ಧೆಯನ್ನು ಎದುರಿಸುವುದಕ್ಕಾಗಿ ಉತ್ಪಾದನಾ ಕ್ಷೇತ್ರದಲ್ಲಿ ಸೂಕ್ತವಾದ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದೆ.
"ಮೇಕ್ ಇನ್ ಇಂಡಿಯಾ" ಘೋಷಣೆ ದೇಶದ ಎಲ್ಲೆಡೆ ಮೊಳಗುತ್ತಿರುವ ಈ ದಿನಗಳಲ್ಲಿ ಭಾರತವು ಜಗತ್ತಿನ ಅತಿ ದೊಡ್ಡ ಕೈಗಾರಿಕಾ ಕೇಂದ್ರವಾಗಿ ಹೊರಹೊಮ್ಮುವುದಕ್ಕೆ ಎಲ್ಲ ರೀತಿಯಿಂದ ಸಜ್ಜಾಗಿದ್ದು ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯದ ತಾಂತ್ರಿಕ ಬೆಂಬಲ ನೀಡುವಲ್ಲಿ ಆಲ್ಫಾ ಟಿಕೆಜಿ ಸಂಸ್ಥೆ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ಡಾ ತೋಶಿಕೋ ಟಕಗಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಜಪಾನ್, ಅಮೆರಿಕ, ಸಿಂಗಾಪುರ, ಥಾಯ್ಲೆಂಡ್ ಮತ್ತು ಭಾರತದ ನಿಯೋಗಗಳು ಪಾಲ್ಗೊಂಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications