ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಕೈಜೋಡಿಸಿದ ಭಾರತೀಯ ವಿಜ್ಞಾನ ಸಂಸ್ಥೆ
ಬೆಂಗಳೂರು, ಅಕ್ಟೋಬರ್. 07 : ಭಾರತದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ಜಪಾನ್ ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಈ ಅಲ್ಫಾ ಟಿಕೆಜಿ ಸಂಸ್ಥೆಯೊಂದಿಗೆ ಕೈಜೋಡಿಸಿತು.
ಈ ಒಪ್ಪಂದದನ್ವಯ ಐಐಎಸ್ ಸಿ ಕ್ಯಾಂಪಸ್ ನಲ್ಲಿ ಅಲ್ಫಾ ಟಿಕೆಜಿ ಇಂಟರ್ ನೆಟ್ ಆಫ್ ಥಿಂಗ್ಸ್ (ಐಒಟಿ) ಇಂಡಿಯಾ ಡೆವಲಪ್ ಮೆಂಟ್ ಸೆಂಟರ್ ಅನ್ನು ಆರಂಭಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಮರ್ಥವಾಗಿ ತಂತ್ರಜ್ಞಾನವನ್ನು ಅಳವಡಿಸಲು ಈ ಒಪ್ಪಂದ ಮಹತ್ವದ ಮೈಲಿಗಲ್ಲನ್ನು ಹೊಂದಲಿದ್ದು, ರೈತರಿಗೆ ಬೆಳೆ ಬೆಳೆಯುವ ಬಗ್ಗೆ ಹಾಗೂ ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಲಿದೆ.

ಕೃಷಿಯಲ್ಲಿ ನೀರು ಕೊರತೆಯಾಗುವುದರಿಂದ ರೈತರು ನಷ್ಟ ಹೊಂದುತ್ತಿದ್ದಾರೆ. ಕೃಷಿಯಲ್ಲಿ ನೀರಿನ ಬಳಕೆ ಹೇಗೆ ಮಾಡಬೇಕೆಂದು ಕೇಂದ್ರದಲ್ಲಿ ತಿಳಿಸಲಾಗುತ್ತದೆ. ಕಡಿಮೆ ನೀರು ಬಳಕೆ ಮಾಡಿ ಉತ್ಪಾದನಾ ಹೆಚ್ಚಳವನ್ನು ಮಾಡುವ ತಂತ್ರಜ್ಞಾನ ಜಪಾನ್ ದೇಶದಲ್ಲಿ ಈಗಾಗಲೇ ಬಳಕೆಯಲ್ಲಿದೆ ಎಂದು ಅಲ್ಪಾ ಟಿಕೆಜಿ ನಿರ್ದೇಶಕ ಡಾ.ಪೆರಿಸ್ವಾಮಿ ತನಪಂಡಿ ಹೇಳಿದರು.

ಜಾಗತಿಕ ಸ್ಪರ್ಧೆಯನ್ನು ಎದುರಿಸುವುದಕ್ಕಾಗಿ ಉತ್ಪಾದನಾ ಕ್ಷೇತ್ರದಲ್ಲಿ ಸೂಕ್ತವಾದ ತಂತ್ರಜ್ಞಾನವನ್ನು ಅಳವಡಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದೆ.
"ಮೇಕ್ ಇನ್ ಇಂಡಿಯಾ" ಘೋಷಣೆ ದೇಶದ ಎಲ್ಲೆಡೆ ಮೊಳಗುತ್ತಿರುವ ಈ ದಿನಗಳಲ್ಲಿ ಭಾರತವು ಜಗತ್ತಿನ ಅತಿ ದೊಡ್ಡ ಕೈಗಾರಿಕಾ ಕೇಂದ್ರವಾಗಿ ಹೊರಹೊಮ್ಮುವುದಕ್ಕೆ ಎಲ್ಲ ರೀತಿಯಿಂದ ಸಜ್ಜಾಗಿದ್ದು ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯದ ತಾಂತ್ರಿಕ ಬೆಂಬಲ ನೀಡುವಲ್ಲಿ ಆಲ್ಫಾ ಟಿಕೆಜಿ ಸಂಸ್ಥೆ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ಡಾ ತೋಶಿಕೋ ಟಕಗಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಜಪಾನ್, ಅಮೆರಿಕ, ಸಿಂಗಾಪುರ, ಥಾಯ್ಲೆಂಡ್ ಮತ್ತು ಭಾರತದ ನಿಯೋಗಗಳು ಪಾಲ್ಗೊಂಡಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications