ಬಿಬಿಎಂಪಿ ಕಣದಲ್ಲಿ ಜೆಡಿಎಸ್ಸಿನ ಅಶ್ವಿನಿ ಎಂಕಾಂ ವಿದ್ಯಾರ್ಥಿನಿ
ಬೆಂಗಳೂರು, ಆಗಸ್ಟ್, 14 : ಚುನಾವಣೆ ಎಂದರೆ ಸಾಕು ಯುವಜನಾಂಗದವರು ಮೂಗು ಮುರಿಯುವುದೇ ಹೆಚ್ಚು. ಅಂತಹದ್ದರಲ್ಲಿ ಯುವತಿಯೊಬ್ಬಳು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಲ್ಲರಿಗೂ ಮಾದರಿಯಾಗಿದ್ದಾಳೆ.
ಒಂದು ಓಟು ಹಾಕಿ ಎಂದು ಜನರ ಬಳಿ ತೆರಳುವ ಅಶ್ವಿನಿ.ಟಿ ಕೇವಲ 22ರ ಹರೆಯದ ಯುವತಿ . ಈ ವರ್ಷದ ಬಿಬಿಎಂಪಿ ಚುನಾವಣೆಯ ಅತ್ಯಂತ ಕಿರಿಯ ಅಭ್ಯರ್ಥಿ ಎಂಬ ಖ್ಯಾತಿಯೂ ಇವರ ಪಾಲಿಗಿದೆ.[ಬೆಂಗಳೂರು ನಗರವನ್ನು ಹಾಂಕಾಂಗ್ ನಂತೆ ಮಾಡ್ತೇವೆ: ಜೆಡಿಎಸ್]

ಅಶ್ವಿನಿ ಎಂ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ದೀಪಂಜಲಿ ನಗರ (ವಾರ್ಡ್ ನಂ.158) ದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಯಾವುದೇ ರಾಜಕೀಯ ಹಿನ್ನೆಲೆ ಹೊಂದಿರದ ಈಕೆ ಸ್ವಯಂಪ್ರೇರಿತರಾಗಿ ರಾಜಕೀಯ ಅಂಗಳದಲ್ಲಿ ಪಾದಾರ್ಪಣೆ ಮಾಡಿದ್ದಾರೆ.
ತಮ್ಮ ವಾರ್ಡಿನಲ್ಲಿನ ತೊಂದರೆ, ಜನರ ಯೋಚನಾ ಲಹರಿ ಅದರಲ್ಲೂ ಯುವಜನಾಂಗದವರು ರಾಜಕೀಯ ಬಗ್ಗೆ ತೋರಿರುವ ಅಸಡ್ಡೆ ಮನೋಭಾವವನ್ನು ಬದಲಿಸಬೇಕಿದೆ. ಯುವಜನಾಂಗ ಸ್ವಯಂಪ್ರೇರಣೆಯಿಂದ ರಾಜಕೀಯ ಪ್ರವೇಶ ಮಾಡುವಂತೆ ಮಾಡಬೇಕು.
ರಾಜಕಾರಣಿಗಳ ಕುರಿತಾಗಿ ತೋರಿರುವ ನಿರ್ಲಕ್ಷ ಭಾವವನ್ನು ತೊಲಗಿಸಬೇಕು. ರಾಜಕಾರಣಿಗಳಲ್ಲಿ ಎಲ್ಲರೂ ಭ್ರಷ್ಟರಲ್ಲ, ರಾಜಕೀಯ
ನೀಚರ ಪ್ರಪಂಚವಲ್ಲ ಎಂದು ತೋರಿಸಿಕೊಡಬೇಕು. ಪ್ರತಿನಿತ್ಯ ಚರ್ಚೆಯಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯ ಮಾಡಲಿದ್ದೇನೆ ಎಂದರು.
ರಾಜಕೀಯ ಪಯಣಕ್ಕೆ ಬಹಳ ಸಂತೋಷದಿಂದ ನನ್ನ ಸ್ನೇಹಿತರು, ಉಪನ್ಯಾಸಕರು ಬೆಂಬಲ ತೋರಿದ್ದು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿ ಯುವಜನಾಂಗಕ್ಕೆ ಮಾದರಿಯಾಗುವಂತೆ ಸಲಹೆ ನೀಡಿದ್ದಾರೆ.
ನನ್ನ ಬೆಂಬಲಿಸಿದವರೆಲ್ಲರ ಆಶಯದಂತೆ ಕಾರ್ಯೋನ್ಮುಖರಾಗುತ್ತೇನೆ. ಅಕಸ್ಮಾತ್ ಈ ಚುನಾವಣೆಯಲ್ಲಿ ಗೆದ್ದರೆ ನನ್ನ ವಿದ್ಯಾಭ್ಯಾಸ ಸ್ಥಗಿತಗೊಳಿಸಿ ರಾಜಕೀಯದಲ್ಲಿಯೇ ಮುಂದುವರೆಯಲು ಇಚ್ಛಿಸಿದ್ದೇನೆ ಎಂದು ಅಶ್ವಿನಿ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications