ನೆಲಮಂಗಲ ನಗರಕ್ಕೆ ಕಡ್ಡಾಯವಾಗಿ ಹೋಗಲೇಬೇಕು: ಮಂಗಳೂರು, ತುಮಕೂರು ಮಾರ್ಗದ ಕೆಎಸ್ಆರ್ಟಿಸಿ ಬಸ್ಗಳಿಗೆ ಸೂಚನೆ
ಬೆಂಗಳೂರು, ಮೇ, 28: ಬೆಂಗಳೂರು-ತುಮಕೂರು ಮತ್ತು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಪ್ರಯಾಣಿಸುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳು ನೆಲಮಂಗಲ ನಗರಕ್ಕೆ ಕಡ್ಡಾಯವಾಗಿ ಪ್ರವೇಶಿಸಬೇಕು ಎಂದು ಕೆಎಸ್ಆರ್ಟಿಸಿ ಆದೇಶ ನೀಡಿದೆ.
ಸಾಮಾನ್ಯವಾಗಿ ಈ ಮಾರ್ಗದಲ್ಲಿ ಚಲಿಸುವ ಕೆಎಸ್ಆರ್ಟಿಸಿ ಬಸ್ಗಳು ಸೊಂಡೆಕೊಪ್ಪ ಬೈಪಾಸ್ನ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ-ಹತ್ತಿಸಿಕೊಳ್ಳುತ್ತಿದ್ದವು. ಆದರೆ ಇನ್ನು ಮುಂದೆ ಇಲ್ಲಿ ನಿಲ್ಲಿಸುವ ಬದಲು ಸಂಜೆ 6 ಗಂಟೆಯಿಂದ ಬೆಳಗ್ಗೆ 6-30 ರವರೆಗೆ ನೆಲಮಂಗಲ ನಗರದಲ್ಲಿರುವ ನಗರದ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ನೀಡಿದೆ.

ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳು ಸೊಂಡೆಕೊಪ್ಪ ಬೈಪಾಸ್ ಬಳಿ ಸಂಚಾರ ನಿಯಂತ್ರಣ ಕೇಂದ್ರದ ಸಮೀಪ ನಿಲ್ಲಿಸಿ ತೆರಳುತ್ತಿದ್ದವು. ನೆಲಲಂಗಲ ಬಗರದ ಬಸ್ ನಿಲ್ದಾಣ ಬೈಪಾಸ್ಗೆ ದೂರ ಇರುವ ಕಾರಣ ಸಂಜೆಯ ನಂತರ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಸಂಜೆಯ ನಂತರ ಆತಂಕದಲ್ಲೇ ಓಡಾಡುವಂತಾಗಿತ್ತು.
ಸಮಸ್ಯೆಯನ್ನು ಗಮನಿಸಿದ ರಾಷ್ಟ್ರೀಯ ಕಿಸಾನ್ ಸಂಘಟನೆ ಉಪಾಧ್ಯಕ್ಷ ಭೀಮಯ್ಯ ನೆಲಮಂಗಲ ನಗರಕ್ಕೆ ತೆರಳುವಂತೆ ಸಾರಿಗೆ ಸಂಸ್ಥೆಯ ಬಸ್ಗಳಿಗೆ ಆದೇಶ ನೀಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು. ಭೀಮಯ್ಯ ಅವರ ಮನವಿಗೆ ಸ್ಪಂದಿಸಿರುವ ಇಲಾಖೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಬಸ್ಗಳು ನಗರದ ಬಸ್ ನಿಲ್ದಾಣಕ್ಕೆ ತೆರಳುವಂತೆ ಆದೇಶಿಸಿದ್ದಾರೆ.
ಸುಳ್ಳು ಮಾಹಿತಿ ನೀಡುವ ಬಸ್ ನಿರ್ವಾಹಕರು
ಈ ಭಾಗದಲ್ಲಿ ಚಲಿಸುವ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರು ಇಲ್ಲಿನ ಪ್ರಯಾಣಿಕರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ನೆಲಮಂಗಲದಲ್ಲಿ ಸ್ಟಾಪ್ ಇಲ್ಲ ಎಂದು ಹೇಳುವ ಮೂಲಕ ಇಲ್ಲಿ ಬಸ್ ನಿಲ್ಲಿಸದೆ ಕೂಡ ಹೋಗುತ್ತಾರೆ. ಬಸ್ಗಳ ನಿರ್ವಾಹಕರು ಇದೇ ರೀತಿ ನಿರ್ಲಕ್ಷ್ಯ ತೋರಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಸರ್ಕಾರದ ಆದೇಶಕ್ಕೆ ಬೆಲೆ ಕೊಟ್ಟುಇನ್ನಾದರೂ ಈ ಮಾರ್ಗದಲ್ಲಿ ಚಲಿಸುವ ಕೆಎಸ್ಆರ್ ಟಿಸಿ ಬಸ್ಗಳು ನೆಲಮಂಗಲ ನಗರಕ್ಕೆ ಪ್ರವೇಶ ನೀಡಬೇಕು ಎಂದು ವಿದ್ಯಾರ್ಥಿಗಳು ಮತ್ತು ಮಹಿಳಾ ಪ್ರಯಾಣಿಕರ ಒತ್ತಾಯವಾಗಿದೆ.
ತುಮಕೂರು-ಬೆಂಗಳೂರು ಮಾರ್ಗದಲ್ಲಂತೂ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಬಸ್ ಚಾಲಕರು ಮತ್ತು ನಿರ್ವಾಹಕರು ನಿರ್ಲಕ್ಷ್ಯ ತೋರುತ್ತಾರೆ. ಈ ಬಗ್ಗೆ ಕೂಡ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಹೋಗುವಂತೆ ಸೂಚನೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications