ಕನ್ನಡ ಕಲಿಯಲೇಬೇಕ್ : ಶ್ರೀವತ್ಸ ಕೃಷ್ಣಗೆ ಸಿದ್ದು ಟಾಂಗ್
ಕಲಬುರಗಿ, ಮಾರ್ಚ್ 18 : ಕರ್ನಾಟಕದ ಎಲ್ಲ ಅಧಿಕಾರಿಗಳು ಕನ್ನಡ ಕಲಿಯಲೇಬೇಕು, ಕನ್ನಡದಲ್ಲೇ ಮಾತಾಡಬೇಕು, ಎಲ್ಲ ವ್ಯವಹಾರಗಳಲ್ಲಿ ಕನ್ನಡವನ್ನೇ ಬಳಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.
ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿಯೇ ಇದ್ದು ಕಾವೇರಿ ನೀರನ್ನು ಕುಡಿದು 'ಖಡಕ್' ಮಾತುಗಳ ಐಎಎಸ್ ಅಧಿಕಾರಿ ಶ್ರೀವತ್ಸ ಕೃಷ್ಣ ಅವರು ಕನ್ನಡವನ್ನು ಅತೀ ಹೀನಾಯವಾಗಿ ಕಾಣುತ್ತಿದ್ದಾರೆ ಎಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮೇಲಿನಂತೆ ಹೇಳಿಕೆ ನೀಡಿದ್ದಾರೆ. [ಕನ್ನಡ ವಿರೋಧಿ ಐಎಎಸ್ ಅಧಿಕಾರಿಯ ಬಣ್ಣ ಪಬ್ಲಿಕ್ ಆಯ್ತು]
ಕನ್ನಡವೇ ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿದ್ದು ಎಲ್ಲ ಐಎಎಸ್ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಇದನ್ನು ಜಾರಿಗೆ ತರಲು ವಿಫಲರಾದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿದ್ದರಾಮಯ್ಯ ಕಲಬುರಗಿಯಲ್ಲಿ ಶನಿವಾರ ಹೇಳಿದರು.

ಸಾರ್ವಜನಿಕ ಉದ್ಯಮಿಗಳ ಕಾರ್ಯದರ್ಶಿಯಾಗಿರುವ ಶ್ರೀವತ್ಸ ಕೃಷ್ಣ ಅವರಿಗೆ ಕನ್ನಡ, ಕನ್ನಡಿಗರೆಂದರೆ ತಾತ್ಸಾರ, ಕನ್ನಡದಲ್ಲೇ ಇರಬೇಕಾಗಿದ್ದ ಕಡತಗಳನ್ನೆಲ್ಲ ಇಂಗ್ಲಿಷಿನಲ್ಲೇ ತರಬೇಕೆಂದು ಕೆಳ ಅಧಿಕಾರಿಗಳಿಗೆ ತಾಕೀತು ಮಾಡುತ್ತಾರೆಂದು ಅವರ ಮೇಲೆ ಆರೋಪವಿದೆ.
ದೆಹಲಿ ಮೂಲದ ಐಎಎಸ್ ಅಧಿಕಾರಿ ಶ್ರೀವತ್ಸ ಕೃಷ್ಣಗೆ ಕನ್ನಡ ಬರುವುದಿಲ್ಲವೆಂದಲ್ಲ, ಹರಕುಮುರುಕು ಕನ್ನಡ ಮಾತನಾಡುತ್ತಾರೆ. ಆದರೆ, ಮೊದಲಿನಿಂದಲೂ ಕನ್ನಡದ ಬಗ್ಗೆ ಅಸಡ್ಡೆ. ಹೀಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅವರಿಗೆ ನೋಟೀಸ್ ಜಾರಿ ಮಾಡಿತ್ತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯನವರು, ಇಂಥವರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಅವರಿಗೆ ಬುದ್ಧಿ ಬರುವುದಿಲ್ಲ. ತಿದ್ದಿಕೊಳ್ಳದಿದ್ದರೆ ಅವರನ್ನು ಕೆಲಸದಿಂದ ತೆಗೆದುಹಾಕಬೇಕೆಂದು ಶಿಫಾರಸು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ರಾಜ್ಯದಲ್ಲಿರುವ ಎಲ್ಲ ಸರಕಾರಿ ಅಧಿಕಾರಿಗಳು ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡವನ್ನೇ ಮಾತನಾಡಬೇಕು ಎಂದು ಹೇಳಿದ್ದಾರೆ. ಈ ಮಾತನ್ನು ಶ್ರೀವತ್ಸ ಕೃಷ್ಣ ಕಿವಿಗೆ ಹಾಕಿಕೊಳ್ಳುತ್ತಾರಾ?
-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ











Click it and Unblock the Notifications