Get Updates
Get notified of breaking news, exclusive insights, and must-see stories!

'ಸಂಘರ್ಷ'ದಿಂದ ಎಲ್ಲ ಧರ್ಮಗಳು ಹುಟ್ಟಿವೆ, 'ಸಂಸ್ಕಾರ'ದಿಂದ ಹಿಂದೂ ಧರ್ಮ ಹುಟ್ಟಿದೆ: ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 15: ಎಲ್ಲ ಧರ್ಮಗಳು ಸಂಘರ್ಷದಿಂದ ಹುಟ್ಡಿಕೊಂಡಿವೆ. ಆದರೆ, ಹಿಂದೂ ಧರ್ಮ ಮಾತ್ರ ಸಂಸ್ಕಾರದಿಂದ ಹುಟ್ಟಿಕೊಂಡಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಾತಂತ್ರ್ಯೋತ್ವವದ ಅಂಗವಾಗಿ ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದವೇ ಬಲು ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ, ಅಪ್ಪ ಅಮ್ಮನಿಂದ ಸ್ವತಂತ್ರ ‌ಪಡೆಯಲು ಬಯಸುತ್ತಾರೆ. ತೆರಿಗೆದಾರರು ಸರ್ಕಾರದಿಂದ ಸ್ವಾತಂತ್ರ್ಯ ಪಡೆಯಲು ಬಯಸುತ್ತಾರೆ. ಆದರೆ, ನಾವು ಸರ್ವ ಸ್ವತಂತ್ರ ವಾಗಿ ಬದುಕಲು ಸಾಧ್ಯವಿಲ್ಲ ಎಂದರು.

hinduism-is-born-out-of-sanskara-says-basavaraj-bommai

ಎಲ್ಲ ಧರ್ಮಗಳು ಸಂಘರ್ಷದಿಂದ ಹುಟ್ಡಿಕೊಂಡಿವೆ. ಆದರೆ ಹಿಂದೂ ಧರ್ಮ ಮಾತ್ರ ಸಂಸ್ಕಾರದಿಂದ ಹುಟ್ಟಿಕೊಂಡಿದೆ.

ನಮ್ಮ ಇತಿಹಾಸದಲ್ಲಿ ಅನೇಕ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರು ಇದ್ದಾರೆ. ರಾಣಿ ಚೆನ್ನಮ್ಮ, ರಾಯಣ್ಣ, ಬಾಲಬಂಗಾಧರ ತಿಲಕ, ಭಗತ್ ಸಿಂಗ್, ರಾಜಗುರು, ಇವರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ.

ಮನುಷ್ಯ ಸಂಘ ಜಿವಿ, ಮನೆ, ಊರು, ರಾಜ್ಯ ದೇಶ ಅಂತ ಕಟ್ಟಿಕೊಂಡಿದ್ದೇವೆ. ಎಲ್ಲರೂ ನಮ್ಮ ದೇಶದ ಮೇಲೆ ಯಾಕೆ ದಾಳಿ ಮಾಡುತ್ತಾರೆ ಎಂದರೆ, ಭಾರತ ಸಮೃದ್ಧವಾಗಿದೆ. ಹೀಗಾಗಿ ಮುಸ್ಲೀಮರು ಹಾಗೂ ಬ್ರಿಟೀಷರು 900 ವರ್ಷ ಆಳಿದರು ಎಂದು ಅವರು ಅಭಿಪ್ರಾಯ ಪಟ್ಟರು.

'ಭಾರತ ಜೋಡೊ' ಯಾತ್ರೆ ವಿಪರ್ಯಾಸ

ನೇತಾಜಿ ಸುಭಾಶ್ಚಂದ್ರ ಬೋಸ್ ಕಾಂಗ್ರೆಸ್ ನವರಾಗಿದ್ದರೂ ಪಕ್ಷ ತೊರೆದು ಹೋರಾಟ ನಡೆಸಿದರು. ಅನೇಕ ಅನಾಮಧೆಯರಿದ್ದಾರೆ. ಇತಿಹಾಸದ ಸತ್ಯವನ್ನು ಹೇಳಲು ಮುಂದೆ ಬಂದಿಲ್ಲ. ಬ್ರಿಟಿಷರು ಭಾರತವನ್ನು ವಿಭಜಿಸಿದರು, ಕಾಂಗ್ರೆಸ್ ನವರು ಅಧಿಕಾರದ ಆಸೆಗೆ ದೇಶ ವಿಭಜನೆಗೆ ಒಪ್ಪಿಕೊಂಡರು. 'ಭಾರತ ಥೊಡೊ' ಆಗಿನಿಂದಲೇ ಆರಂಭವಾಗಿದೆ. ಈಗ 'ಭಾರತ ಜೋಡೊ' ಯಾತ್ರೆ ಮಾಡುತ್ತಾರೆ ಇದು ವಿಪರ್ಯಾಸ ಎಂದು ಅವರು ಲೇವಡಿ ಮಾಡಿದರು.

hinduism-is-born-out-of-sanskara-says-basavaraj-bommai

ಭಾರತ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರು ಪ್ರಾಣ‌ ಕಳೆದುಕೊಂಡರು. ಅನೇಕ ಮಕ್ಕಳು ಅನಾಥರಾದರು. ಇಡಿ ಜಗತ್ತಿನಲ್ಲಿ ಅತ್ಯಂತ ಕರಾಳ ಇತಿಹಾಸ ಬೇರೆ ಯಾವ ದೇಶದಲ್ಲಿಯೂ ಇಲ್ಲ. ಒಂದೇ ದಿನ ಸ್ವಾತಂತ್ರ್ಯ ಮತ್ತು ಒಂದೇ ದಿನ ವಿಭಜನೆ ಯಾವ ದೇಶದಲ್ಲಿಯೂ ಇಲ್ಲ.

ಇಲ್ಲಿಯವರು ವಿದೇಶಕ್ಕೆ ಹೋಗಿ ಭಾರತವನ್ನು ತೆಗಳುತ್ತಾರೆ

ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ 9 ವರ್ಷಗಳಿಂದ ಸಕಾರಾತ್ಮಕ ಆಡಳಿತ ದೊರೆಯುತ್ತಿದೆ. ಕಾಶ್ಮೀರದಲ್ಲಿ 370 ರದ್ದು ಮಾಡಿದ್ದಾರೆ. ವಿಜ್ಞಾನ ತಂತ್ರಜ್ಞಾನ, ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನಾಯಕತ್ವವನ್ನು ನಮ್ಮ ವಿರೋಧಿ ದೇಶಗಳೆ ಮೆಚ್ಚಿಕೊಳ್ಳುತ್ತಿವೆ. ಆದರೆ, ನಮ್ಮ ದೇಶದ ಕೆಲವು ನಾಯಕರು ವಿದೇಶಗಳಲ್ಲಿ ಹೋಗಿ ಭಾರತವನ್ನು ದ್ವೇಷಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭಾರತದಲ್ಲಿ ಅಲ್ಪ ಸಂಖ್ಯಾತರು ಸುರಕ್ಷಿತರಾಗಿಲ್ಲ ಎಂದು ಹೇಳುತ್ತಾರೆ. ಆದರೆ, ಮುಸ್ಲೀಮರೇ ಬಹುಸಂಖ್ಯಾತರಾಗಿರುವ ದೇಶಗಳಲ್ಲಿ ಅವರ ಪರಸ್ಥಿತಿ ಏನಿದೆ ಎನ್ನುವುದನ್ನು ನೋಡಬೇಕು. ಸಮರ್ಥ ಭಾರತ ನಿರ್ಮಾಣ ಮಾಡುವ ಪ್ರಯತ್ನ ಒಂದೆಡೆ ನಡೆಯುತ್ತಿದ್ದರೆ, ಇಸ್ಲಾಂ ರಾಷ್ಟ್ರ ಮಾಡುವ ಪ್ರಯತ್ನ ನಡೆಯುತ್ತಿದೆ. ಭಾರತಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅಗತ್ಯವಿದೆ. ಅವರ ಜೊತೆಗೆ ನಾವೂ ದೇಶದ ಭವಿಷ್ಯಕ್ಕಾಗಿ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತಿತರರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+