ಹಜ್ಯಾತ್ರೆ: ಎಲ್ಲಿ ಒಳ್ಳೆತನವಿದೆ ಅಲ್ಲಿ ಭಗವಂತನಿರುತ್ತಾನೆ: ಸಿಎಂ ಬೊಮ್ಮಾಯಿ
ಬೆಂಗಳೂರು ಜೂನ್ 08: ಧಾರ್ಮಿಕ ಯುದ್ಧದಿಂದಾಗಿ ಸಮಾಜದಲ್ಲಿ ಶಾಂತಿ ಹದಗೆಡುವ ಪ್ರಯತ್ನಗಳ ವಿರುದ್ಧ ಸಿಎಂ ಕಿವಿ ಮಾತುಗಳನ್ನು ಹೇಳಿದ್ದಾರೆ. ಇಂದು ನಗರದ ಹಜ್ ಭವನದಲ್ಲಿ ಹಜ್ಯಾತ್ರೆ -2022 ರ ಮೊದಲ ವಿಮಾನಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮಾನವೀಯತೆಯನ್ನು ಸಾರುತ್ತವೆ ಎಂದಿದ್ದಾರೆ.
ಹಜ್ಗೆ ಹೋಗಿ ಬಂದ ನಂತರ ಹಾಜಿಯಾಗಿ ಕಟ್ಟುನಿಟ್ಟಿನ ಬದುಕು ನಡೆಸಬೇಕು. ಅತ್ಯಂತ ಶುದ್ಧ ಬದುಕನ್ನು ನಡೆಸಬೇಕು. ಆಗ ಅಲ್ಲಿಗೆ ಹೋಗಿ ಬಂದದ್ದು ಸಾರ್ಥಕವಾಗುತ್ತದೆ. ನಿಮ್ಮ ದುವಾ ಪೂರ್ಣವಾಗಬೇಕಾದರೆ ಒಳ್ಳೆತನದಿಂದ ನಡೆದುಕೊಳ್ಳುವುದು ಅಗತ್ಯ. ಕೆಲವರು ಮಾತ್ರ ಮನುಷ್ಯತ್ವದಿಂದ ನಡೆದುಕೊಂಡು ದೇವಮಾನವರಾಗುತ್ತಾರೆ. ಬದುಕಿನಲ್ಲಿ ಏನಾದರೂ ಪ್ರಾಪ್ತಿಯಾಗಬೇಕಾದರೆ ಒಳ್ಳೆಯ ಗುಣಗಳು ಮತ್ತು ಆಚಾರ ವಿಚಾರಗಳಿಂದ ಮಾತ್ರ ಸಾಧ್ಯ. ಎಲ್ಲಿ ಒಳ್ಳೆತನವಿದೆ ಅಲ್ಲಿ ಭಗವಂತನಿರುತ್ತಾನೆ ಎಂದರು.

ಪ್ರತಿ ಮನುಷ್ಯನಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ನಮ್ಮಲ್ಲಿರುವ ಯಾವ ಗುಣ ಅಂತಿಮವಾಗಿ ಜಯಶಾಲಿಯಾಗುತ್ತದೆ ಎನ್ನುವುದು ನಮ್ಮ ಇಚ್ಛಾಶಕ್ತಿಯನ್ನು ಅವಲಂಬಿಸಿದೆ. ಮಾನವೀಯತೆಯ ಆಧಾರದ ಮೇಲೆ ನಡೆದುಕೊಂಡಾಗ ಭಗವಂತನಿಗೆ ಅತ್ಯಂತ ಪ್ರಿಯವಾಗುತ್ತದೆ. ಭಗವಂತನಿಗೆ ಪ್ರೀತಿಯಾಗಿರುವ ಬದುಕನ್ನು ನಾವು ಬದುಕಬೇಕು. ಇದೇ ಎಲ್ಲಾ ಧರ್ಮಗಳ ಸಾರವಾಗಿದೆ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಿದಾಗ ಇದು ಸಾಧ್ಯವಾಗುತ್ತದೆ. ಯಾವ ಮಣ್ಣಿನಲ್ಲಿ ಹುಟ್ಟಿರುತ್ತೇವೋ ಆ ದೇಶದ ಮೇಲೆ ಪ್ರೀತಿ ಭಕ್ತಿ ಇರಬೇಕು ಎಂದರು.

ಹಜ್ ಗೆ ಹೋಗುವವರೆಲ್ಲರೂ ನಾಡು ಸುಭಿಕ್ಷವಾಗಲಿ, ಅಭಿವೃದ್ಧಿಶೀಲವಾಗಲಿ ಎಂದು ಪ್ರಾರ್ಥನೆ ಮಾಡಬೇಕೆಂದು ತಿಳಿಸಿದ ಮುಖ್ಯಮಂತ್ರಿಗಳು, ದೇಶದಲ್ಲಿಯೇ ಅತ್ಯುತ್ತಮವಾಗಿರುವ ಹಜ್ ಭವನ ಕರ್ನಾಟಕದಲ್ಲಿರುವುದು ಹೆಮ್ಮೆಯ ಸಂಗತಿ. ಸರ್ಕಾರ ಇದರ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದರು.

ಒಳ್ಳೆಯ ನಸೀಬ್ ಇರುವವರಿಗೆ ಹಜ್ ಯಾತ್ರೆ ಪ್ರಾಪ್ತಿಯಾಗುತ್ತದೆ. ಬಹಳಷ್ಟು ಜನರ ಪ್ರಯತ್ನಿಸುತ್ತಾರೆ. ಒಳ್ಳೆಯ ಕೆಲಸವನ್ನು, ವಿಚಾರವನ್ನು ಬದುಕಿನಲ್ಲಿ ಅಳವಡಿಸಿಕೊಂಡರಡ ಹಜ್ ಯಾತ್ರೆ ಸಿಗುತ್ತದೆ. ಹಜ್ ಗೆ ತೆರಳಲಿರುವ ಎಲ್ಲಾ ಯಾತ್ರಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದರು. ದೇವರ ದರ್ಶನ ಉತ್ತಮವಾಗಿ ಆಗಿ, ಮನೋಕಾಮನೆ ಪೂರ್ತಿಯಾಗಲಿ. ತಮ್ಮ ದುವಾ ಅಲ್ಲಾಹುವಿಗೆ ಮುಟ್ಟಿ ಇಡೀ ಭಾರತ, ವಿಶ್ವಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಒಟ್ಟು 450 ಜನ ನಾಳೆ ಮೊದಲ ವಿಮಾನದ ಮೂಲಕ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಪಿ ಸಾದಿ, ಹಜ್ ಕಮಿಟಿ ಅಧ್ಯಕ್ಷ ರವುಫ ಉದ್ದೀನ್ ಕಚೇರೆವಾಲೆ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್, ಸಂಸದ ನಾಸೀರ್ ಹುಸೇನ್ , ಮಾಜಿ ಸಚಿವರಾದ ಯು ಟಿ ಖಾದರ್ , ರೋಷನ್ ಬೇಗ್ ಹಜ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications