ಬೆಂಗಳೂರು: ಜಾತ್ರೆಯಲ್ಲಿ ಎಲ್ಲ ಧರ್ಮಿಯರಿಗೂ ಅವಕಾಶ: ಗರುಡಾಚಾರ್
ಬೆಂಗಳೂರು, ನವೆಂಬರ್ 28: ಹಿಂದುಯೇತರ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ಅನುಮತಿ ನೀಡಬಾರದು ಎಂಬ ಆಗ್ರಹ ಸರಿಯಲ್ಲ. ಇದೇ ವಿಷಯ ಇಟ್ಟುಕೊಂಡು ಜಾತ್ರೆಯಲ್ಲಿ ಗಲಾಟೆಗೆ ಯತ್ನಿಸಿದ್ದು ಕಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಎಚ್ಚರಿಕೆ ನೀಡಿದ್ದಾರೆ.
ಜಾತ್ರೆಯ ಮುನ್ನ ದಿನ ಸೋಮವಾರ ವಿವಿ ಪುರಂ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಜಾತ್ರಾ ಪೂರ್ವ ಸಿದ್ಧತೆ ಪರಿಶೀಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಗಳವಾರ ಸುಬ್ರಹ್ಮಣ್ಯ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ವ್ಯಾಪಾರಿಗಳಿಗೆ ಅವಕಾಶ ನೀಡುವ ವಿಚಾರದಲ್ಲಿ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನೇ ಮುಂದುವರೆಸಲಾಗುವುದು. ಹಿಂದೂಗಳು ಅಲ್ಲದವರಿಗೆ ವ್ಯಾಪಾರಕ್ಕೆ ಅನುಮತಿ ನೀಡಬಾರದು ಎನ್ನುವುದು ಸರಿಯಲ್ಲ. ಜಾತ್ರೆಯಲ್ಲಿ ಎಲ್ಲ ಧರ್ಮೀಯರಿಗೂ ಅವಕಾಶ ನೀಡಲಾಗುವುದು ಎಂದರು.
ಶಾಸಕರ ಮಾತಿನಂತೆ ಎಲ್ಲ ಧರ್ಮಿಯರು ವಿವಿ ಪುರಂ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಭಾರಿಯು ವ್ಯಾಪಾರ ವಹಿವಾಟು ನಡೆಸಲಿದ್ದಾರೆ. ಆದರೆ ಹಿಂದೂಯೇತರ ವರ್ತಕರ ಬಹಿಷ್ಕಾರ ವಿಚಾರ ಇಟ್ಟುಕೊಂಡು ಜಾತ್ರೆಯಲ್ಲಿ ಗದ್ದಲ, ಗಲಾಟೆ ಎಬ್ಬಿಸುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಎಲ್ಲಾ ಧರ್ಮದ ವರ್ತಕರಿಗೆ ಅವಕಾಶ ಕೊಡಬೇಕು. ಚುನಾಯಿತ ಪ್ರತಿನಿಧಿಗಳು, ಎಲ್ಲರ ಮತ ಪಡೆದೇ ಆಯ್ಕೆಯಾಗಿರುತ್ತೇವೆ. ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕಾರ ಮಾಡಿ ಶಾಸಕ ಸ್ಥಾನ ಅಲಂಕರಿಸಿದ್ದೇವೆ. ಈ ಸ್ಥಾನದಲ್ಲಿದ್ದಾಗ ಜಾತಿ, ಧರ್ಮದ ಬೇಧ ಭಾವ ಮಾಡಲು ಸಾಧ್ಯವಿಲ್ಲ. ನಾವು ಎಲ್ಲರನ್ನು ಸಮಾನರಾಗೇ ನೋಡುತ್ತೇವೆ.
ಸಾಮರಸ್ಯ, ಸಹಬಾಳ್ವೆಗೆ ಶಾಸಕರ ಸಲಹೆ
ದರ್ಗಾ, ಮಸೀದಿ ಮುಂದೆ ಹಿಂದೂಗಳ ವ್ಯಾಪಾರಕ್ಕೆ ಅವಕಾಶ ನೀಡದೆ ಇರುವ ಮಾಹಿತಿ ನನ್ನ ಗಮನಕ್ಕೆ ಬಂದಿಲ್ಲ. ನಾನು ಮನೆಯಲ್ಲಿ ಬ್ರಾಹ್ಮಣ, ಹೊರಗಡೆ ಬಂದಾಗ ವಿಶ್ವಮಾನವ. ಹಾಗೊಂದು ವೇಳೆ ಇಂತಹ ಘಟನೆ ನಡೆದಿದ್ದರೆ ಅದನ್ನು ಸರಿಪಡಿಸಲಾಗುತ್ತದೆ. ಸಾಮರಸ್ಯ ಸಹಬಾಳ್ವೆ ನಡೆಸಬೇಕು ಎಂದು ಸಲಹೆ ನೀಡಿದರು.
ಮಂಗಳವಾರ ಬೆಂಗಳೂರಿನ ವಿವಿಪುರಂನಲ್ಲಿರುವ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೆಗೆ ಅನ್ಯ ಧರ್ಮೀಯ ವರ್ತಕರಿಗೆ ಅವಕಾಶ ನೀಡದಂತೆ ಹಿಂದೂಪರ ಸಂಘಟನೆಗಳು ಮನವಿ ಮಾಡಿದ್ದವು. ಈ ಸಂಬಂಧ ಭಜರಂಗದಳ ಸೇರಿದಂತೆ ಕೆಲವು ಹಿಂದುಪರ ಸಂಘಟನೆಗಳು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದ್ದರು.

ಇನ್ನು ಸೈಲೆಂಟ್ ಸುನೀಲ್ ಬಗ್ಗೆ ನನಗೆ ಗೊತ್ತಿಲ್ಲ. ಆತ ಆಯೋಜನೆ ಮಾಡಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದು ನಿಜ. ಆದರೆ ಆತ ರೌಡಿ ಹಿನ್ನೆಲೆ ಹೊಂದಿದ ಬಗ್ಗೆ ಮಾಹಿತಿ ಇರಲಿಲ್ಲ. ಕ್ಷೇತ್ರದ ಶಾಸಕನಾಗಿ ಒಳ್ಳೆಯ ಕೆಲಸಕ್ಕೆ ಕರೆದಾಗ ಇಲ್ಲ ಎನ್ನಲು ಸಾಧ್ಯವಿಲ್ಲ. ಸಾಮಾಜಿಕ ಕಳಕಳಿ ಕಾರ್ಯಕ್ರಮ ಎನ್ನುವ ಕಾರಣಕ್ಕಾಗಿ ರಕ್ತದಾನ ಶಿಬಿರಕ್ಕೆ ಹೋಗಿದ್ದೆ. ರೌಡಿ ಶೀಟರ್ ಎನ್ನುವುದು ಗೊತ್ತಿದ್ದರೆ, ಹೋಗುತ್ತಲೇ ಇರಲಿಲ್ಲ ಎಂದು ಶಾಸಕರು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications