ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲು ನಿಲ್ದಾಣಗಳಲ್ಲೂ ವೈ-ಫೈ
ಬೆಂಗಳೂರು, ಮಾರ್ಚ್ 4: ಬೆಂಗಳೂರು ಹಾಗೂ ಮೈಸೂರಿನ ಎಲ್ಲಾ ರೈಲು ನಿಲ್ದಾಣಗಳಲ್ಲೂ ವೈ-ಫೈ ಸೌಲಭ್ಯ ಲಭ್ಯವಾಗುತ್ತಿದೆ.
ಈ ಹಿಂದೆಯೇ ಈ ಯೋಜನೆ ಹಾಕಿಕೊಳ್ಳಲಾಗಿತ್ತು ಆದರೆ ಕಾರಣಾಂತರಗಳಿಂದ ಯೋಜನೆ ತಡವಾಗಿತ್ತು ಈಗ ಮತ್ತೊಮ್ಮೆ ವೈಫೈ ಯೋಜನೆ ಆರಂಭಿಸಲಾಗಿದೆ.
ಬೆಂಗಳೂರು-ಮೈಸೂರು ರೈಲು ಮಾರ್ಗದ 17 ನಿಲ್ದಾಣಗಳಲ್ಲೂ ಉಚಿತ ವೈಫೈ ಸೇವೆ ಆರಂಭವಾಗಿದೆ. ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ರೈಲ್ವೆ ಇಲಾಖೆ ಎಲ್ಲಾ ನಿಲ್ದಾಣಗಳಿಗೆ ಉಚಿತ ವೈಫೈ ನೀಡುತ್ತಿದೆ.
ಬೆಂಗಳೂರಲ್ಲಿ ಮೊದಲ ಹಂತದಲ್ಲಿ ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಕೆಲ ನಿಲ್ದಾಣಗಳಲ್ಲಿ ಸೌಲಭ್ಯ ನೀಲಡಾಗಿತ್ತು. ಈಗ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮೈಸೂರು, ನಾಯಂಡಹಳ್ಳಿ, ಹೆಜ್ಜಾಲ, ಪಾಂಡವ[ಉರ, ನಾಗೇನಹಳ್ಳಿ ನಿಲ್ದಾಣಗಳಲ್ಲೂ ವೈಫೈ ಲಭ್ಯವಾಗಿದೆ.

ಒಟ್ಟು 138 ಕಿ.ಮೀ ರೈಲು ಮಾರ್ಗ
ಒಟ್ಟು 138 ಕಿ.ಮೀ ಉದ್ದದ ರೈಲು ಮಾರ್ಗದ ಎಲ್ಲಾ ನಿಲ್ದಾಣಗಳೂ ವೈ-ಫೈ ಸೌಲಭ್ಯ ಪಡೆದಿದೆ. ಈ ಕುರಿತು ಮಾಹಿತಿ ನೀಡಿದ ವೈಫೈ ಸೇವೆ ನೀಡುವ ರೇಲ್ಟೆ್ ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಪುಈತ ಚಾವ್ಲಾ, ದೇಶದ 831 ನಿಲ್ದಾಭಗಳಿಗೆ ವೈಫೈ ಸೇವೆ ನೀಡಲಾಗಿದೆ. ಪ್ರತಿ ತಿಂಗಳು 80 ಲಕ್ಷ ಪ್ರಯಾಣಿಕರು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಇನ್ನು ಹತ್ತೇ ದಿನಗಳಲ್ಲಿ 1 ಸಾವಿರ ರೈಲ್ವೆ ನಿಲ್ದಾಣಗಳು ವೈಫೈ ಸೌಲಭ್ಯ ಪಡೆಯಲಿವೆ.

ಒಮ್ಮೆ ಲಾಗಿನ್ ಆದರೆ 30 ನಿಮಿಷ ಮಾತ್ರ ವೇಗವಾದ ಇಂಟರ್ನೆಟ್ ಪಡೆಯಬಹುದು
ಒಮ್ಮೆ ಲಾಗಿನ್ ಆದರೆ 30 ನಿಮಿಷಗಳು ಮಾತ್ರ ವೇಗವಾದ ಇಂಟರ್ನೆಟ್ ಸೌಲಭ್ಯ ಪಡೆಯಬಹುದು. ಒಂದು ಎಂಬಿಪಿಎಸ್ ಅಪ್ಲೋಡ್ ಹಾಗೂ 3 ಎಂಬಿಪಿಎಸ್ ಡೌನ್ಲೋಡ್ ವೇಗ ಇರಲಿದೆ. ಬಳಿಕ 64 ಕೆಬಿಪಿಎಸ್ ಗೆ ಇಳಿಕೆಯಾಗಲಿದೆ.

ವೈಫೈ ಬಳಕೆ ಹೇಗೆ ಮಾಡಬೇಕು
ನಿಲ್ದಾಭದ ಒಳಗೆ ಮಾತ್ರ ಈ ವೈಫೈ ಸೇವೆ ದೊರೆಯಲಿದೆ. ಪ್ರಯಾಣಿಕರು ನಿಲ್ದಾಣದ ಒಳಗೆ ಹೋದಾಗ ಸ್ಮಾರ್ಟ್ ಫೋನ್ನಲ್ಲಿ ವೈಫೈ ಆನ್ ಮಾಡಬೇಕು. ಆಗ ರೈಲ್ವಯರ್ ಎಂಬ ವೈಫೈ ಸೇವೆ ಇರುವುದು ಕಂಡುಬರುತ್ತದೆ. ಇದನ್ನು ಆಯ್ಕೆ ಮಾಡಿಕೊಂಡರೆ ರೈಲ್ ವಯರ್ನ ಪುಟ ತೆರೆದುಕೊಳ್ಳುತ್ತದೆ. ಇದರಲ್ಲಿ ಮೊಬೈಲ್ ಸಂಖ್ಯೆಯನ್ನು ಟೈಪ್ ಮಾಡಿ ಸಬ್ಮಿಟ್ ಬಟನ್ ಒತ್ತಬೇಕು.

1.09 ಲಕ್ಷ ಜಿಬಿ ಬಳಕೆದಾರರು
2019ರ ಜನವರಿಯಲ್ಲಿ ಬೆಂಗಳೂರು-ಮೈಸೂರು ಮಾರ್ಗದಲ್ಲಿ ವೈಫೈ ಲಭ್ಯವಿದ್ದ ಕೆಲ ನಿಲ್ದಾಣಗಳಲ್ಲಿ 3,16,157, ಪ್ರಯಾಣಿಕರು ಸೇವೆ ಪಡೆದುಕೊಂಡಿದ್ದಾರೆ. ಇಷ್ಟು ಪ್ರಯಾಣಿಕರು 1.09 ಲಕ್ಷ ಜಿಬಿ ಪ್ರಮಾಣದಷ್ಟು ವೈಫೈ ಬಳಸಿದ್ದಾರೆ
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications