ಗುತ್ತಿಗೆದಾರರಿಗೆ ವಂಚನೆ ಆರೋಪ: ಬಿಜೆಪಿ ಮಾಜಿ ಸಚಿವರ ಗನ್ಮ್ಯಾನ್ ವಿರುದ್ಧ ಎಫ್ಐಆರ್
ಬೆಂಗಳೂರು, ಸೆಪ್ಟೆಂಬರ್ 2: ವಂಚನೆ ಆರೋಪದಡಿ ಮಾಜಿ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರ ಗನ್ಮ್ಯಾನ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗುತ್ತಿಗೆ ನೀಡಿಸುವುದಾಗಿ ಭರವಸೆ ನೀಡಿ ಗನ್ ಮ್ಯಾನ್ 10 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ದಾವಣಗೆರೆ ಮೂಲದ ಗುತ್ತಿಗೆದಾರರೊಬ್ಬರು ಆರೋಪಿಸಿದ್ದಾರೆ.

2021ರಲ್ಲಿ ವಿಧಾನಸೌಧದಲ್ಲಿ ಹಾಲಪ್ಪ ಆಚಾರ್ ಅವರ ಗನ್ಮ್ಯಾನ್ ಆಗಿದ್ದ ರಾಘವೇಂದ್ರ ಎಂಬುವರನ್ನು ಭೇಟಿಯಾಗಿದ್ದಾಗಿ ಹೆಚ್ ರಾಜು ನಾಯ್ಕ್ ಎಂಬ ಗುತ್ತಿಗೆದಾರ ಹೇಳಿಕೊಂಡಿದ್ದಾರೆ. ಮಾಯಕೊಂಡ ಕ್ಷೇತ್ರದಲ್ಲಿ 30 ಕೋಟಿ ರೂ. ಗುತ್ತಿಗೆ ನೀಡುವುದಾಗಿ ರಾಘವೇಂದ್ರ ಭರವಸೆ ನೀಡಿದ್ದರು. ಅದಕ್ಕೆ ಶೇ. 12 ಕಮಿಷನ್ಗೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರರು ಆರೋಪ ಮಾಡಿದ್ದಾರೆ.
ಗುತ್ತಿಗೆ ಪಡೆಯಲು ಗನ್ಮ್ಯಾನ್ಗೆ 10 ಲಕ್ಷ ಮುಂಗಡ ನೀಡಿರುವುದಾಗಿ ರಾಜು ನಾಯ್ಕ್ ಹೇಳಿಕೊಂಡಿದ್ದಾರೆ. 2021ರ ಅಕ್ಟೋಬರ್ನಲ್ಲಿ ಎರಡು ಕಂತುಗಳಲ್ಲಿ ಹಣವನ್ನು ರಾಘವೇಂದ್ರ ಅವರಿಗೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಹಣ ನೀಡಿದರೂ ರಾಘವೇಂದ್ರ ಅವರಿಗೆ ಗುತ್ತಿಗೆ ನೀಡಿರಲಿಲ್ಲ ಎಂದು ದೂರುದಾರರು ದೂರಿದ್ದಾರೆ. ಗುತ್ತಿಗೆ ನೀಡದಿರುವ ಬಗ್ಗೆ ಪದೇ ಪದೇ ಕೇಳಿದ ನಂತರ, ಗನ್ಮ್ಯಾನ್ ರೂ 4 ಲಕ್ಷವನ್ನು ಹಿಂದಿರುಗಿಸಿದ್ದನು. ಆದರೆ ಉಳಿದ ರೂ 6 ಲಕ್ಷವನ್ನು ಹಿಂದಿರುಗಿಸುತ್ತಿಲ್ಲ ಎಂದು ಗುತ್ತಿಗೆದಾರರ ರಾಜುನಾಯ್ಕ್ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 420 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ












Click it and Unblock the Notifications