TCS Bengaluru: ಕೆಲಸದಿಂದ ತೆಗೆದಿದ್ದಕ್ಕೆ ಕುಡಿದ ಮತ್ತಿನಲ್ಲಿ ಹುಸಿಬಾಂಬ್ ಕರೆ ಮಾಡಿದ ಯುವತಿ!
ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಥಿಂಕ್ ಕ್ಯಾಂಪಸ್ಗೆ ನಕಲಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಉದ್ಯೋಗಿಗಳಲ್ಲಿ ಭೀತಿಯನ್ನು ಉಂಟುಮಾಡಿತ್ತು.
ನ್ಯೂಸ್ 18 ವರದಿ ಮಾಡಿರುವ ಪ್ರಕಾರ, ಬಾಂಬ್ ಬೆದರಿಕೆ ಕರೆ ಬಂದ ವಿಷಯ ತಿಳಿಯುತ್ತಿದ್ದಂತೆ ಕಚೇರಿಯೊಳಗೆ ಕೆಲಸ ಮಾಡುತ್ತಿದ್ದ ನೌಕರರು ಆವರಣದಿಂದ ಹೊರ ಬಂದರು. ಮೂಲಗಳ ಪ್ರಕಾರ ಮಂಗಳವಾರ ಬೆಳಗ್ಗೆ ಕ್ಯಾಂಪಸ್ನ ಬಿ ಬ್ಲಾಕ್ಗೆ ಕರೆ ಬಂದಿತ್ತು ಎನ್ನಲಾಗಿದೆ.
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಭಾಗದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತಂಡ ಕ್ಯಾಂಪಸ್ಗೆ ಭೇಟಿ ನೀಡಿತ್ತು. ಬಾಂಬ್ ನಿಷ್ಕ್ರಿಯ ದಳ ಕೂಡ ಸ್ಥಳಕ್ಕೆ ಧಾವಿಸಿತ್ತು.

ಹುಸಿ ಬಾಂಬ್ ಬೆದರಿಕೆ
ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಅಧಿಕಾರಿಗಳು ಕಟ್ಟಡದ ಸಂಕೀರ್ಣದೊಳಗೆ ಸ್ಫೋಟಕಗಳಿಗಾಗಿ ಹುಡುಕಾಟ ಆರಂಭಿಸಿದರು. ಅದೃಷ್ಟವಶಾತ್, ಪರಿಶೀಲನೆಯ ನಂತರ ಕಟ್ಟಡದೊಳಗೆ ಅನುಮಾನಾಸ್ಪದ ಸ್ಫೋಟಕ ವಸ್ತುಗಳು ಕಂದು ಬಂದಿಲ್ಲ.
ಕರ್ನಾಟಕದ ಹುಬ್ಬಳ್ಳಿ ಜಿಲ್ಲೆಯ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ ಎಂದು ತನಿಖೆಗಳು ತಿಳಿದು ಬಂದಿದೆ ಎಂದು ವರದಿಯಾಗಿದೆ. ಕೆಲಸದಿಂದ ತೆಗೆದಿದ್ದಕ್ಕಾಗಿ ಕಂಪನಿಯ ಮೇಲಿನ ಕೋಪದಿಂದ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಕರೆ ಮಾಡಿದ ಮಹಿಳೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಇದೇ ಮೊದಲಿನ ಘಟನೆಯಲ್ಲ!
2023 ರಲ್ಲಿ ಟಿಸಿಎಸ್ ಕ್ಯಾಂಪಸ್ನಲ್ಲಿ ಹುಸಿ ಬಾಂಬ್ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಮೇ ತಿಂಗಳಲ್ಲಿ, ಹೈದರಾಬಾದ್ನ ಟಿಸಿಎಸ್ ಕ್ಯಾಂಪಸ್ಗೆ ನಕಲಿ ಬಾಂಬ್ ಕರೆ ಬಂದಿತ್ತು, ಇದರಿಂದಾಗಿ 1,500 ಉದ್ಯೋಗಿಗಳನ್ನು ಕ್ಯಾಂಪಸ್ನಿಂದ ಹೊರಕಳುಹಿಸಲಾಗಿತ್ತು.
ಹೈದರಾಬಾದ್ ಕ್ಯಾಂಪಸ್ನಲ್ಲಿನ ಕರೆ ಬೆಂಗಳೂರಿನ ಮಾಜಿ ಟಿಸಿಎಸ್ ಉದ್ಯೋಗಿಯಿಂದ ಬಂದಿದೆ ಎಂದು ಹೇಳಲಾಗಿದೆ, ಅವರು ಭದ್ರತಾ ವಿಭಾಗದಲ್ಲಿ ಉದ್ಯೋಗಿಯಾಗಿದ್ದರು ಮತ್ತು ನಂತರ ಕೆಲಸದಿಂದ ಅವರನ್ನು ವಜಾ ಮಾಡಲಾಗಿತ್ತು. ಈಗ ಬೆಂಗಳೂರಿನಲ್ಲಿ ವಜಾಗೊಂಡ ಮಹಿಳಾ ಉದ್ಯೋಗಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದು, ಮಹಿಳೆಗಾಗಿ ಹುಡುಕಾಟ ಆರಂಭಿಸಲಾಗಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಕಚೇರಿಗೆ ಕೆಲಸಕ್ಕೆ ಹೋಗಿದ್ದ ಉದ್ಯೋಗಿಗಳಿಗೆ ಬಾಂಬ್ ಬೆದರಿಕೆ ಕರೆ ಕ್ಷಣಕಾಲ ಆತಂಕ ಉಂಟು ಮಾಡಿದ್ದು ಸುಳ್ಳಲ್ಲ, ನಂತರ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸ್ಥಳಕ್ಕಾಗಮಿಸಿ ಇದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ ನಂತರ ಉದ್ಯೋಗಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications