ಬಿಂಗಿಪುರ ಕೆರೆ ಪುನರುಜ್ಜೀವನ, 4 ಗ್ರಾಮಗಳ 5500 ಜನರಿಗೆ ನೆರವು
ಬೆಂಗಳೂರು, ಆಗಸ್ಟ್ 25: AbbVie ಕಂಪನಿಯ ಸಮೂಹ ಸಂಸ್ಥೆಯಾಗಿರುವ ಅಲ್ಲೆರ್ಗನ್ ತನ್ನ ಸಿಎಸ್ಆರ್ ಬದ್ಧತೆಯ ಭಾಗವಾಗಿ ಗ್ರೀನ್ ಯಾತ್ರ ಟ್ರಸ್ಟ್ ಮತ್ತು ಆನಂದ್ ಮಲ್ಲಿಗವಾಡ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೆಂಗಳೂರಿನ 28.1 ಎಕರೆ ವಿಸ್ತೀರ್ಣದ ಬಿಂಗಿಪುರ ಕೆರೆಯನ್ನು ಪುನರುಜ್ಜೀವನಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪೂರ್ಣಗೊಳಿಸಿದೆ. ಈ ಮೂಲಕ ಕೆರೆಯ ನೀರನ್ನು ವರ್ಷವಿಡೀ ಬಹುಪಯೋಗಕ್ಕೆ ಬಳಸಿಕೊಳ್ಳುವುದನ್ನು ಖಾತರಿಪಡಿಸಿದೆ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಕೃಷ್ಣಪ್ಪ, ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಮಲ್ಲೇಶ್, ಗ್ರಾಮಪಂಚಾಯ್ತಿ ಅಧ್ಯಕ್ಷ ದಿನೇಶ್ ಮತ್ತು ಸಾದಿಕ್ ಪಾಶ ಸೇರಿದಂತೆ ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು, ಐಕೇರ್ ಬ್ರಿಗೇಡ್ ತಂಡ ಮತ್ತು ಬಿಂಗಿಪುರ ಗ್ರಾಮಸ್ಥರ ಸಮ್ಮುಖದಲ್ಲಿ ಪುನರುಜ್ಜೀವನಗೊಂಡ ಕೆರೆಯನ್ನು ಲೋಕಾರ್ಪಣೆ ಮಾಡಲಾಯಿತು.
ಈ ಯೋಜನೆಯಡಿ ಕೆರೆಯ ನೀರಿನಲ್ಲಿರುವ ಮಲಿನವನ್ನು ತೆಗೆದುಹಾಕುವುದು, ಹೂಳು ತೆಗೆಯುವುದು ಮತ್ತು ಸ್ಟ್ರೀಂಗಳನ್ನು ಸ್ವಚ್ಛಗೊಳಿಸುವ ಮೂಲಕ ಕೆರೆಗೆ ಸರಾಗವಾಗಿ ನೀರು ಹರಿಯುವಂತೆ ಮಾಡಲಾಗಿದೆ. ಇದರಿಂದಾಗಿ ಮಳೆನೀರು ಸಮರ್ಪಕವಾಗಿ ಕೆರೆಯಲ್ಲಿ ಸಂಗ್ರಹವಾಗುತ್ತದೆ. ಇದಲ್ಲದೇ, ಹೂಳನ್ನು ಶಕ್ತಿಯುತವಾದ ಬಂಡುಗಳನ್ನು ನಿರ್ಮಾಣ ಮಾಡಲು ಬಳಸಲಾಗಿದ್ದು, ಸುತ್ತಮುತ್ತಲಿನ ನಾಗರಿಕರಿಗೆ ಒಂದು ಉತ್ತಮವಾದ ವಾಕಿಂಗ್ ಪಥ ನಿರ್ಮಾಣವಾಗುವ ಜತೆಗೆ ಒತ್ತುವರಿ ತಪ್ಪಿದಂತಾಗಿದೆ. ಇದೀಗ ಕೆರೆಯು ಅತ್ಯಂತ ಸುರಕ್ಷಿತವಾಗಿದೆ ಮತ್ತು ಮಕ್ಕಳು ಹಾಗೂ ಸಾಕು ಪ್ರಾಣಿಗಳಿಗೆ ಸೂಕ್ತವಾದ ತಾಣವಾಗಿದೆ. ಏಕೆಂದರೆ, ಇದರ ಆಳವಿಲ್ಲದ ಮಟ್ಟದಿಂದಾಗಿ ಸುತ್ತಮುತ್ತಲಿನ ಸಮುದಾಯದ ದಿನಚರಿಗೆ ಯಾವುದೇ ಅಡ್ಡಿ ಉಂಟಾಗುವುದಿಲ್ಲ.
ಗ್ರೀನ್ ಯಾತ್ರದ ಸಂಸ್ಥಾಪಕ ಪ್ರದೀಪ್ ತ್ರಿಪಾಠಿ ಅವರು ಮಾತನಾಡಿ, ''ವಿಶ್ವಭೂ ದಿನವಾದ 22 ಏಪ್ರಿಲ್ 2021 ರಂದು ಬಿಂಗಿಪುರ ಕೆರೆ ಪುನರುಜ್ಜೀವನ ಯೋಜನೆಗೆ ಚಾಲನೆ ನೀಡಿದೆವು. ಈ ಯೋಜನೆ ಕೈಗೆತ್ತಿಕೊಳ್ಳುವುದು ಅಷ್ಟೊಂದು ಸುಲಭವಾಗಿರಲಿಲ್ಲ ಮತ್ತು ನಾವು ಅನೇಕ ಸವಾಲುಗಳನ್ನು ಎದುರಿಸಬೇಕಾಯಿತು, ನಿಗದಿಯಂತೆ ಯೋಜನೆ ಪೂರ್ಣಗೊಳಿಸಲಾಗಿದೆ" ಎಂದರು.

ಅಲ್ಲರ್ಗನ್ನ ವ್ಯವಸ್ಥಾಪಕ ನಿರ್ದೇಶಕ
ಈ ಉಪಕ್ರಮದ ಬಗ್ಗೆ ಮಾತನಾಡಿದ AbbVie ಕಂಪನಿಯ ಅಲ್ಲರ್ಗನ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಪ್ರಧಾನ ವ್ಯವಸ್ಥಾಪಕ ಸುರೇಶ್ ಪಟ್ಟಥಿಲ್ ಅವರು, ''ಅಲರ್ಗನ್ ನಾವು ಪರಿಸರದ ಸುಸ್ಥಿರತೆ ಮತ್ತು ರಕ್ಷಣೆಗೆ ಬದ್ಧರಾಗಿದ್ದೇವೆ. ನಾವು ಬಿಂಗಿಪುರ ಕೆರೆ ಪುನರುಜ್ಜೀವನ ಉಪಕ್ರಮಕ್ಕಾಗಿ ಗ್ರೀನ್ ಯಾತ್ರ ಟ್ರಸ್ಟ್ ಗೆ ಬೆಂಬಲವಾಗಿ ನಿಂತಿದ್ದೇವೆ. ನಮ್ಮ ಸಿಎಸ್ಆರ್ ಪ್ರಯತ್ನಗಳು ನಾವು ವಾಸ ಮಾಡುತ್ತಿರುವ ಮತ್ತು ಕೆಲಸ ಮಾಡುವ ಸಮುದಾಯಗಳಿಗೆ ಪ್ರಯೋಜನವನ್ನು ನೀಡಲು ಮತ್ತು ಸುಸ್ಥಿರತೆ ಹಾಗೂ ಸಂಪನ್ಮೂಲ ಸಂರಕ್ಷಣೆಯನ್ನು ಉತ್ತೇಜಿಸಲು ಬಯಸುತ್ತೇವೆ'' ಎಂದರು.

300 ಬೋರ್ ವೆಲ್ಗಳ ಅಂತರ್ಜಲ ಮಟ್ಟ ಸುಧಾರಣೆ
ಕೆರೆಯು 4.5 ಲಕ್ಷದಿಂದ 4.75 ಲಕ್ಷ ಕ್ಯೂಬಿಕ್ ಮೀಟರ್ನಷ್ಟು ನೀರು ಶೇಖರಣೆ ಸಾಮರ್ಥ್ಯವನ್ನು ಹೊಂದಿದೆ. ಇದರ ಪುನರುಜ್ಜೀವನದ ನಂತರ 4 ರಿಂದ 5 ಕಿಲೋಮೀಟರ್ ಸುತ್ತಮುತ್ತ ಇರುವ 200 ರಿಂದ 300 ಬೋರ್ ವೆಲ್ಗಳ ಅಂತರ್ಜಲ ಮಟ್ಟ ಸುಧಾರಣೆಯಾಗಲಿದೆ. ನಾಲ್ಕು ಗ್ರಾಮಗಳ 5500 ಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ ಮತ್ತು ಅವರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರು ಲಭ್ಯವಾಗಲಿದೆ. ಸಂಸ್ಕರಿತ ತ್ಯಾಜ್ಯ ನೀರನ್ನು ಕೆರೆಯಿಂದ ಹೊರ ಬಿಡಲಿದ್ದು, ಇದರಿಂದ 50 ರಿಂದ 75 ಎಕರೆಯಲ್ಲಿ ಕೃಷಿ ಬಳಕೆ ಮಾಡಿಕೊಳ್ಳಬಹುದಾಗಿದೆ.

ಪರಿಸರಸ್ನೇಹಿಯಾಗಿ ಪುನರುಜ್ಜೀವನಗೊಳಿಸಲಾಗುತ್ತಿದೆ
ವಿಶೇಷವೆಂದರೆ, ಬಿಂಗಿಪುರ ಕೆರೆಯನ್ನು ಸುಸ್ಥಿರವಾದ ತಾಂತ್ರಿಕತೆಗಳನ್ನು ಬಳಸಿಕೊಂಡು ಪರಿಸರಸ್ನೇಹಿಯಾಗಿ ಪುನರುಜ್ಜೀವನಗೊಳಿಸಲಾಗುತ್ತಿದೆ. ಇದರೊಂದಿಗೆ ಅತ್ಯಾಧುನಿಕ ಪ್ರಾಕೃತಿಕ ತ್ಯಾಜ್ಯ ಸಂಸ್ಕರಣೆ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತಿದೆ. ಇಲ್ಲಿ ಯಾವುದೇ ಕಲ್ಲು ಕಟ್ಟುವುದಾಗಲೀ, ಕಾಂಕ್ರೀಟ್, ಸ್ಟೀಲ್ ಅಥವಾ ಯಾವುದೇ ಆಧುನಿಕ ಉತ್ಪನ್ನಗಳನ್ನು ಬಳಕೆ ಮಾಡಲಾಗುತ್ತಿಲ್ಲ. ಅದೇ ರೀತಿ, ಈ ಕಾಮಗಾರಿಗಾಗಿ ವಿದ್ಯುತ್, ರಾಸಾಯನಿಕಗಳು ಅಥವಾ ಯಂತ್ರೋಪಕರಣಗಳನ್ನು ಬಳಕೆ ಮಾಡುತ್ತಿಲ್ಲ. ಇದರಿಂದ ಕಾರ್ಬನ್ ಪ್ರಮಾಣವು ಕಡಿಮೆಯಾಗಲಿದೆ ಮತ್ತು ಕೆರೆಯನ್ನು ಸಂಪೂರ್ಣವಾಗಿ ಪರಿಸರಸ್ನೇಹಿ ತಂತ್ರಗಳ ಮೂಲಕ ಪುನರುಜ್ಜೀವನಗೊಳಿಸಲಾಗುತ್ತಿದೆ ಹಾಗೂ ಕೆರೆಯ ಮೂಲವನ್ನು ಕಾಪಾಡಿಕೊಳ್ಳಲಾಗುತ್ತಿದೆ.

ಯೋಜನೆ ಉಸ್ತುವಾರಿ ಆನಂದ್ ಮಲ್ಲಿಗವಾಡ್
ಈ ಯೋಜನೆ ಬಗ್ಗೆ ಮಾತನಾಡಿದ ಕೆರೆ ಸಂರಕ್ಷಣಾಗಾರ ಮತ್ತು ಯೋಜನೆ ಉಸ್ತುವಾರಿ ಆನಂದ್ ಮಲ್ಲಿಗವಾಡ್ ಅವರು, ''ಸಂರಕ್ಷಣಾ ಯೋಜನೆಗಳಿಗೆ ಉತ್ಸಾಹ, ಆಸಕ್ತಿ ಮತ್ತು ಬದ್ಧತೆಯ ಅಗತ್ಯವಿರುತ್ತದೆ. ಪ್ರಕೃತಿಯ ಕಡೆಗೆ ನಮ್ಮ ದೊಡ್ಡ ಜವಾಬ್ದಾರಿ ಇದೆ, ನಮಗಾಗಿ ಮಾತ್ರವಲ್ಲದೇ ನಮ್ಮನ್ನು ಅನುಸರಿಸುವ ಮುಂದಿನ ತಲೆಮಾರುಗಳಿಗೆ ಇದು ಮಾರ್ಗದರ್ಶನವಾಗಲಿದೆ. ಇದು ನನ್ನ ಹತ್ತನೇ ಕೆರೆ ಪುನರುಜ್ಜೀವನ ಯೋಜನೆಯಾಗಿದ್ದು, ಈ ಕೆರೆಯನ್ನು ಕೇವಲ 72 ದಿನಗಳಲ್ಲಿ ಪುನರುಜ್ಜೀವನಗೊಳಿಸಲಾಗಿದೆ. ಈ ಯೋಜನೆಯಲ್ಲಿ ನಮ್ಮ ಪಾಲುದಾರರಾದ AbbVie ಕಂಪನಿ ಮತ್ತು ಗ್ರೀನ್ ಯಾತ್ರ ಜತೆಗೆ ಕೈಜೋಡಿಸಿರುವುದಕ್ಕೆ ನನಗೆ ಸಂತಸವೆನಿಸುತ್ತಿದೆ. ನನ್ನ ಈ ಪ್ರಯತ್ನಕ್ಕೆ ಬೆಂಬಲ ನೀಡಿದ ಹುಲಿಮಂಗಲ ಗ್ರಾಮ ಮತ್ತು ಮತ್ತು ಅದರ ಗ್ರಾಮಸ್ಥರಿಗೆ ನಾನು ಕೃತಜ್ಞನಾಗಿದ್ದೇನೆ'' ಎಂದು ತಿಳಿಸಿದರು.
Recommended Video

ಬೇಸಿಗೆಕಾಲದಲ್ಲಿ ಶೇ.50 ರಷ್ಟು ನೀರು ಸಂಗ್ರಹ
''ಕೊಳಗಳ ಸೃಷ್ಟಿ ಮತ್ತು ವಿವಿಧ ರೀತಿಯ ಸಸ್ಯಗಳ ಬಳಕೆ ಮತ್ತು ತೇಲುವ ದ್ವೀಪಗಳಂತಹ ನೈಸರ್ಗಿಕ ವಿಧಾನಗಳು ಕೆರೆಗೆ ಸೇರುವ ಮುನ್ನ ಕೊಳಚೆ ಮತ್ತು ಕಲುಷಿತ ನೀರನ್ನು ಸಂಸ್ಕರಿಸಲಾಗುತ್ತದೆ. ಈಗ ಈ ಕೆರೆಯು ಸ್ವಯಂಸ್ವಚ್ಛಗೊಳಿಸುವ ಮತ್ತು ಸ್ವಯಂಸಮರ್ಥನೀಯವಾದ ಕೆರೆಯಾಗಿದೆ'' ಎಂದು ಹೇಳಿದರು.
ಈ ಕೆರೆಯ ಕಾಯಕಲ್ಪದ ನಂತರ, ಮಳೆನೀರು ಮತ್ತು ಕೊಳಚೆ ನೀರು ಮಿಶ್ರಣವಾಗುವುದಿಲ್ಲ. ಮಳೆಗಾಲದಲ್ಲಿ ತುಂಬುವ ಕೆರೆಯಲ್ಲಿ ಚಳಿಗಾಲದಲ್ಲಿ ಶೇ.70 ರಷ್ಟು ಮತ್ತು ಬೇಸಿಗೆಕಾಲದಲ್ಲಿ ಶೇ.50 ರಷ್ಟು ನೀರು ಸಂಗ್ರಹವಾಗಿರುತ್ತದೆ. ಇದರ ಜತೆಗೆ ಕೆರೆಯ ಸುತ್ತಮುತ್ತ 1000 ಕ್ಕೂ ಅಧಿಕ ವಿವಿಧ ಜಾತಿಯ ಸಸ್ಯಗಳನ್ನು ನೆಡುವ ಮೂಲಕ ಕೆರೆಯ ಸೌಂದರ್ಯ ಹೆಚ್ಚಾಗುವಂತೆ ಮತ್ತು ಅದರ ಮೂಲ ಸ್ವರೂಪವನ್ನು ಕಾಯ್ದುಕೊಳ್ಳುವಂತೆ ಮಾಡಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ










Click it and Unblock the Notifications