ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವರ್ಗಾವಣೆ
ಬೆಂಗಳೂರು, ಜೂ. 12 : ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ['ಅಲೋಕ್ ಅವರೇ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ']

ಅಲೋಕ್ ಕುಮಾರ್ ಅವರ ಅಮಾನತು ಆದೇಶ ಮುಂದುವರೆಯಲಿದ್ದು, ಅವರ ಅಮಾನತು ರದ್ದಾದರೆ ಅಧಿಕಾರ ಸ್ವೀಕರಿಸಲಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. [ಅಲೋಕ್ ಕುಮಾರ್ ಅಮಾನತು]
ಅಮಾನತು ಮಾಡಲಾಗಿತ್ತು : ಅಲೋಕ್ ಕುಮಾರ್ ಅವರು ಒಂದಂಕಿ ಲಾಟರಿ ಹಗರಣದ ಕಿಂಗ್ ಪಿನ್ ಪಾರಿರಾಜನ್ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಸಿಐಡಿ ತನ್ನ ವರದಿಯಲ್ಲಿ ಹೇಳಿತ್ತು. ಆದ್ದರಿಂದ ಸರ್ಕಾರ ಅವರನ್ನು ಅಮಾನತು ಮಾಡಿತ್ತು. [ಲಾಟರಿ ಹಗರಣ : ಸರ್ಕಾರ ಸಿಬಿಐಗೆ ಬರೆದ ಪತ್ರದಲ್ಲೇನಿದೆ?]
ಮೇ 23ರಂದು ಅಲೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಪ್ರತಿಪಕ್ಷಗಳ ಒತ್ತಾಯದ ಹಿನ್ನಲೆಯಲ್ಲಿ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.












Click it and Unblock the Notifications