ಅಲ್ಲೋಲಕಲ್ಲೋಲ ಎಬ್ಬಿಸಿರುವ ಅಲೋಕ್ ವಾಟ್ಸಾಪ್ ಸಂದೇಶ
ಬೆಂಗಳೂರು, ಜೂ. 09 : ಲಾಟರಿ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಅಮಾನತಾಗಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು, ತಾನು ಅಮಾಯಕನಾಗಿದ್ದು, ಯಶಸ್ಸು ಸಹಿಸದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ವಿರುದ್ಧ ಸಂಚು ಹೂಡಿ ಈ ಕೂಪದಲ್ಲಿ ಸಿಲುಕಿಸಿದ್ದಾರೆ ಎಂದು ವಾಟ್ಸಾಪ್ ಸಂದೇಶವನ್ನು ಕಳಿಸಿ ಪೊಲೀಸ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.
ಈ ಸಂದೇಶ ಒಬ್ಬರಿಂದೊಬ್ಬರಿಗೆ ಹರಿದಾಡುತ್ತ ಪೊಲೀಸ್ ಇಲಾಖೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದ್ದು, ಸಂಚಿನಲ್ಲಿ ಭಾಗಿಯಾದ ಆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಯಾರು ಎಂಬ ಬಗ್ಗೆ ಚರ್ಚೆಗಳಿಗೆ ನಾಂದಿ ಹಾಡಿದೆ. ಈ ಹಗರಣದಲ್ಲಿ ತನ್ನನ್ನು ಸಿಲುಕಿಸಿ ಬಲಿಪಶು ಮಾಡಲಾಗಿದೆ ಎಂದು 1994 ಬ್ಯಾಚ್ನ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಕಳುಹಿಸಿದ ವಾಟ್ಸಾಪ್ ಸಂದೇಶದಲ್ಲಿ ಅಲೋಕ್ ಕುಮಾರ್ ದೂರಿದ್ದಾರೆ.

ಆ ಸಂದೇಶ ಹೀಗಿದೆ : "ರಾಜ್ಯ ಸರಕಾರದಿಂದ ನಾನು ಅಮಾನತಾಗಿರುವುದು ನಿಮಗೆಲ್ಲ ಗೊತ್ತಿದೆ. ನನ್ನಲ್ಲಿ ನಂಬಿಕೆ ಇಡಿರೆಂದು ಕೇಳಿಕೊಳ್ಳುತ್ತೇನೆ. ನನ್ನ ಬ್ಯಾಚ್ ಮೇಟ್ ಸೇರಿದಂತೆ ಇಬ್ಬರು ಹಿರಿಯ ಅಧಿಕಾರಿಗಳು ಎರಡು ವರ್ಷಗಳಿಂದ ನನ್ನ ಏಳಿಗೆ, ಜನಪ್ರಿಯತೆ ಸಹಿಸಿಕೊಳ್ಳುತ್ತಿಲ್ಲ. ಬೆಂಗಳೂರಿನಲ್ಲಿ ಮೂರು ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ ಮತ್ತು ಕರ್ನಾಟಕದಲ್ಲಿ ಸಾಕಷ್ಟು ಹೆಸರು ಗಳಿಸಿದ್ದೇನೆ."
"ಎರಡು ವರ್ಷಗಳ ಹಿಂದೆ ಹೆಚ್ಚುವರಿ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆಗಿ ಅಧಿಕಾರ ವಹಿಸಿಕೊಂಡಾಗಲೂ ಒಂದೇ ತಿಂಗಳಲ್ಲಿ ನನ್ನನ್ನು ಹೊರದಬ್ಬಲು ಸಂಚು ಹೂಡಿದ್ದರು. ಟಿವಿ ಚಾನಲ್ ನಡೆಸಿದ ಸ್ಟಿಂಗ್ ಆಪರೇಷನ್ ನಲ್ಲಿ ನನ್ನ ಹೆಸರು ಕೇಳಿಬಂದಿದ್ದರ ದುರ್ಲಾಭ ಪಡೆದು ಮುಖ್ಯಮಂತ್ರಿಗೆ ಕಿವಿಯೂದಿದ್ದಾರೆ. ಪಾರಿ ರಾಜನ್ ಜೊತೆ ನನಗೆ ಸಂಪರ್ಕವಿತ್ತು. ಆದರೆ, ಅಕ್ರಮ ಲಾಟರಿ ದಂಧೆ ಜೊತೆ ಆತನ ಸಂಪರ್ಕವಿದೆಯೆಂದು ನನಗೆ ತಿಳಿದಿರಲಿಲ್ಲ" ಎಂದು ವಾಟ್ಸಾಪ್ ಸಂದೇಶದಲ್ಲಿ ಹೇಳಿದ್ದಾರೆ.
ರಾಜ್ಯ ಸರಕಾರ ಆದೇಶಿಸಿರುವ ಸಿಐಡಿ ತನಿಖೆ ಕೇವಲ ಕಣ್ಣು ಒರೆಸುವ ತಂತ್ರವಾಗಿದ್ದು, ಪಾರಿ ರಾಜನ್ ಹೇಳಿಕೆ ಮತ್ತು ಮೊಬೈಲ್ ಕರೆಗಳ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ. ತಮ್ಮ ಕಥೆಯನ್ನು ಸಂಪೂರ್ಣವಾಗಿ ಅರುಹಿಕೊಳ್ಳಲು ಸರಿಯಾದ ಅವಕಾಶ ನೀಡಲಾಗಿಲ್ಲ ಎಂದು ಅವರು ದೂರಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications