ವಿಶೇಷ: ಗಾಂಧಿ ದನಿ ದರ್ಪಣ - ಅಮರ ಬಾಪು ಚಿಂತನ
ಮಹಾತ್ಮ ಗಾಂಧಿ ಒಂದು ವಿಸ್ಮಯ. ಅವರು ಅಪ್ರಸ್ತುತರು ಎಂದು ಹೇಳುತ್ತಿರುವಾಗಲೇ ಅವರು ಹೆಚ್ಚು ಪ್ರಸ್ತುತರಾಗಿ ಪ್ರಕಟವಾಗಿ ಬಿಡುತ್ತಾರೆ. ಗಾಂಧಿ ವಿಚಾರಧಾರೆ ಅರ್ಥಮಾಡಿಕೊಳ್ಳತ್ತಲೇ ನಾವು ಅವರ ಮಾತಿನ ಆಳ ಅರಿಯದೆ ಗೊಂದಲಕ್ಕೆ ನಿಲುಕುವುದು ಉಂಟು.
ಜಗತ್ತು ಕಂಡ ಶ್ರೇಷ್ಟ ಚಿಂತಕ, ನುಡಿದಂತೆ ನಡೆದು ವಿಶ್ವಕ್ಕೆ ಆದರ್ಶಪ್ರಾಯರಾದ ಅಪರೂಪದ ವ್ಯಕ್ತಿ ಮೋಹನದಾಸ ಕರಮಚಂದ ಗಾಂಧಿ . ಈಗಿನ ತಾಂತ್ರಿಕ ಯುಗದಲ್ಲಿ ಗಾಂಧಿ ಅದೆಷ್ಟು ಪ್ರಸ್ತುತವೆಂಬ ಪ್ರಶ್ನೆಗಳಿಗೆ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಾದ ಸ್ಟೀವ್ ಜಾಬ್ಸ್ ಮುಂತಾದವರು ಉತ್ತರಿಸಿಬಿಟ್ಟಿದ್ದಾರೆ. ನಾವು ಗಾಂಧಿ ವಿಚಾರಧಾರೆಗಳಿಂದ ಸ್ಫೂರ್ತಿ ಪಡೆದಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ರಾಜಕೀಯ ರಂಗದಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರಂತೂ ಸದಾ ಜಪಿಸುವುದು ಗಾಂಧಿ ಮಂತ್ರ . ಗಾಂಧಿ ಸ್ವಾತಂತ್ರ್ಯ ಚಳುವಳಿಯ ಮಾರ್ಗದರ್ಶನವನ್ನು ಪತ್ರಿಕೆಗಳ ಮೂಲಕ ನೀಡಿದ್ದು ಈಗ ಇತಿಹಾಸ.
ಅದೇ ರೀತಿ ಮಾಧ್ಯಮಗಳ ಮುಖಾಂತರ ಗಾಂಧಿ ವಿಚಾರಧಾರೆಯ ಹರಿಯಬಿಡಲಿಕ್ಕೆ ಕನ್ನಡದಲ್ಲೊಂದು ಪತ್ರಿಕೆ ಇದೆ ಎಂದರೆ ನಿಮಗೆ ಅಚ್ಚರಿಯೆನಿಸಬಹುದು. ಹೌದು, ಸದ್ದಿಲ್ಲದೆ ಎಲೆಮರೆಕಾಯಿಯಂತೆ ಗಾಂಧಿ ತತ್ವ ಆದರ್ಶಗಳನ್ನು ಸರಳ ಸುಂದರ ನಿರೂಪಣೆಯೊಂದಿಗೆ ತಿಳಿಗನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ದ್ವೈಮಾಸಿಕವಾಗಿ ಪ್ರಕಟವಾಗುತ್ತಿರುವ 'ಅಮರ ಬಾಪು ಚಿಂತನ 'ವು ಈಗ ಐದನೇ ವಸಂತದಲ್ಲಿದೆ.

ಸತ್ಯಪಥದ ನಿತ್ಯ ಸಂತ ಗಾಂಧಿ
ಸತ್ಯಪಥದ ನಿತ್ಯಸಂತ ಗಾಂಧಿ ಕುರಿತು ಅಸಂಖ್ಯಾತ ಕೃತಿಗಳಿವೆ. ದೇಶವಿದೇಶಗಳ ಲೇಖಕರು- ಚಿಂತಕರು ಗಾಂಧಿ ವಿಚಾರಧಾರೆಯನ್ನಷ್ಟೆ ಅಲ್ಲ, ಬಾಪು ನಡೆನುಡಿಯನ್ನು ವಿಶ್ಲೇಷಿಸಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿನ ಯುವ ಸಮುದಾಯಕ್ಕೆ ಪ್ರಸ್ತುತದಲ್ಲಿ ಪ್ರಾಯೋಗಿಕವಾದ ಗಾಂಧಿವಾಣಿಯನ್ನು ತಲುಪಿಸುವ ಉದ್ದೇಶದಿಂದ ಈ ಪ್ರಕಟಣಾ ಕಾರ್ಯ ಪ್ರಾರಂಭಿಸಲಾಯಿತು ಎಂದು ಸಂಪಾದಕರಾದ ಜೀರಿಗೆ ಲೋಕೇಶ್ ತಿಳಿಸುತ್ತಾರೆ.

ಅಮರ ಬಾಪು ಚಿಂತನ ಮಾಸಿಕ
2013 ರ ಗಣರಾಜ್ಯೋತ್ಸವದಂದು ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ರಿಂದ ಲೋಕಾರ್ಪಣೆಗೊಂಡ ಈ ಮಾಸಿಕದಲ್ಲಿ ಗಾಂಧಿ ಮತ್ತು ಸ್ತ್ರೀ ಜಾಗೃತಿ, ಖಾದಿ ಗ್ರಾಮೋದ್ಯೋಗ, ಗ್ರಾಮ ಸ್ವರಾಜ್ಯ, ಗಾಂಧೀಜಿ ಆರ್ಥಿಕ ಚಿಂತನೆ, ಸ್ವಚ್ಛ ಭಾರತ ಮುಂತಾದ ಲೇಖನಗಳು ಗಾಂಧಿ ಚಿಂತನಗಳ ಬಗ್ಗೆ ವಿಶೇಷ ಬೆಳಕು ಚೆಲ್ಲುತ್ತದೆ.
ಒಟ್ಟಿನಲ್ಲಿ ಅಮರ ಬಾಪು ಚಿಂತನ ಮಾಸಿಕವು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುವ, ದೇಶ ಪ್ರೇಮ ಹುಟ್ಟಿಸುವ ನಿಟ್ಟಿನಲ್ಲಿ ಮೂಡಿ ಬಂದಿದೆ ಎಂಬುದು ಗಣ್ಯ ಓದುಗರಾದ ನಾಡೋಜ ಪಾಟೀಲ ಪುಟ್ಟಪ್ಪ , ಹಿರಿಯ ಮುತ್ಸದ್ಧಿ ಎಂ.ವಿ ರಾಜಶೇಖರನ್ ರವರ ಅಭಿಪ್ರಾಯವಾಗಿದೆ.

ನನ್ನ ಜೀವನವೇ ನನ್ನ ಸಂದೇಶ
ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಎಂತಹ ಜಟಿಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಪ್ರಪಂಚಕ್ಕೆ ಮನನ ಮಾಡಿಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧೀಜಿ. " ನನ್ನ ಜೀವನವೇ ನನ್ನ ಸಂದೇಶ " ಎಂದು ಹೇಳಿದ್ದ ಭಾರತೀಯರೆಲ್ಲರ ಅಕ್ಕರೆಯ 'ಬಾಪು' ಜನಿಸಿ 150 ವರ್ಷಗಳು ಆಗುತ್ತಾ ಬಂದರೂ ಅವರ ಚಿಂತನೆಗಳು ಇಂದಿಗೂ ಆದರಣೀಯ ಮತ್ತು ಅನುಕರಣಿಯ ಎಂಬುದು ಖ್ಯಾತ ಚಿಂತಕ ಪ್ರೊ ಮಲ್ಲೇಪುಂ ಜಿ ವೆಂಕಟೇಶರವರ ಅಭಿಮತ .

ಕರ್ನಾಟಕಕ್ಕೆ ಗಾಂಧೀಜಿ ಭೇಟಿಗೆ 100
ಕರ್ನಾಟಕಕ್ಕೆ ಗಾಂಧೀಜಿರವರು ಮೊದಲ ಬಾರಿ ಭೇಟಿ ಮಾಡಿದ ಶತಮಾನೋತ್ಸವ ವರ್ಷಾಚರಣೆ ಇದಾಗಿದ್ದು (1915-2015) ಹಲವಾರು ಮೌಲಿಕ ವಿಚಾರಗಳಿಂದ ಕೂಡಿದ ಅಮರ ಬಾಪು ಚಿಂತನ- 'ಗಾಂಧಿ ಜಯಂತಿ' ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು " ಕಲುಷಿತವಾದ ಇಂದಿನ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿರುವ ಚಾರಿತ್ರ್ಯ ನಿರ್ಮಾಣದ ದಿಸೆಯಲ್ಲಿ ಈ ಪತ್ರಿಕೆ ಸಹಕಾರಿಯಾಗಿದೆ " ಎಂದು ಮುಕ್ತಕಂಠದಿಂದ ಶ್ಲಾಘಿಸಿರುವರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications