ಸ್ವಸಹಾಯ ಸಂಘಗಳ ಉತ್ಪನ್ನಕ್ಕೆ ಜಾಗತಿಕ ಮಾರುಕಟ್ಟೆ: ಅಮೆಜಾನ್ ಭರವಸೆ
ಬೆಂಗಳೂರು, ಅ. 07: ರಾಜ್ಯದಲ್ಲಿ ಸ್ವಸಹಾಯ ಗುಂಪುಗಳು ಉತ್ಪಾದಿಸುತ್ತಿರುವ ಉತ್ಪನ್ನಗಳ ಇ-ಮಾರಾಟಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಅಮೆಜಾನ್ ಕಂಪನಿ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದೆ. ಅಮೆಜಾನ್ ಕಂಪನಿಯ ಜೊತೆಗೆ ಒಪ್ಪಂದ ಮಾಡಿಕೊಂಡಲ್ಲಿ ರಾಜ್ಯದ ಗ್ರಾಮೀಣ ಭಾಗದ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಲಭ್ಯವಾಗಲಿದೆ.
ಅಮೆಜಾನ್ ಕಂಪನಿಯ ಸಾರ್ವಜನಿಕ ಕಾರ್ಯನೀತಿ ವಿಭಾಗದ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ ಅವರು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರ ಮನವಿಗೆ ಸ್ಪಂಧಿಸಿದ ಚೇತನ್ ಕೃಷ್ಣಸ್ವಾಮಿ ಅವರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸ್ವಸಹಾಯ ಗುಂಪುಗಳಿಗೆ ಅಮೆಜಾನ್, ಇ- ಮಾರುಕಟ್ಟೆ ವೇದಿಕೆಯನ್ನು ಒದಗಿಸಲಿದೆ. ಈ ಕುರಿತು ಸರ್ಕಾರದ ಜತೆ ಮಾತುಕತೆ ನಡೆಸಲಾಗುವುದು ಎಂದರು.

ಸ್ವಸಹಾಯ ಗುಂಪುಗಳಿಗೆ ಸಹಾಯ
ರಾಜ್ಯದಲ್ಲಿ ಸುಮಾರು 1.5 ಲಕ್ಷ ಸ್ವಸಹಾಯ ಗುಂಪುಗಳು ಇವೆ. ಇವುಗಳು ವಿವಿಧ ಉತ್ಪನ್ನಗಳ ತಯಾರಿಕೆ, ಸಿದ್ಧಪಡಿಸುವಿಕೆ ಹಾಗೂ ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಈ ಉತ್ಪನ್ನಗಳಿಗೆ ಎಲೆಕ್ಟ್ರಾನಿಕ್ ವ್ಯಾಪಾರ ವೇದಿಕೆಗಳ ಮೂಲಕ ಮಾರಾಟಕ್ಕೆ ಅನುವು ಮಾಡಿಕೊಡುವುದು ಸೂಕ್ತ ಎಂದು ಅಶ್ವಥ್ ನಾರಾಯಣ ಅವರು ವಿಚಾರ ಪ್ರಸ್ತಾಪ ಮಾಡಿದ್ದರು.

ಭಾರತದಲ್ಲಿ ವಹಿವಾಟು ವಿಸ್ತರಣೆ
ಅಮೆಜಾನ್ ಕಂಪನಿಯ ಚೇತನ್ ಕೃಷ್ಣಸ್ವಾಮಿ ಅವರು ಮಾತನಾಡಿ, ಅಮೆಜಾನ್ ಕಂಪನಿಯು ಭಾರತದಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ವಿಸ್ತರಿಸುವ ಯೋಜನೆಗಳನ್ನು ಹೊಂದಿರುವುದಾಗಿ ತಿಳಿಸಿದರು. ಪೂರೈಕೆ ಸರಪಳಿ, ದಾಸ್ತಾನು ಘಟಕ ಮತ್ತಿತರ ವಿಭಾಗಗಳಲ್ಲಿ ಗ್ರಾಮೀಣ ಹಾಗೂ ಸ್ಥಳೀಯ ಯುವ ಜನತೆಗೆ ಹೆಚ್ಚಿನ ಉದ್ಯೋಗ ನೀಡುವ ಉದ್ದೇಶ ಹೊಂದಿದೆ. ಜೊತೆಗೆ ಸಂಸ್ಥೆಯ ಸಿಬ್ಬಂದಿಗೆ ಕಾಲಕಾಲಕ್ಕೆ ಕೌಶಲಾಭಿವೃದ್ಧಿ ತರಬೇತಿ ನೀಡಲು ಒತ್ತು ಕೊಡಲಾಗುತ್ತದೆ ಎಂದರು.

ಜಾಗತಿಕ ಮಾರುಕಟ್ಟೆ
ನಾವೀನ್ಯತೆಯನ್ನು ಪೋಷಿಸುವ, ಉದ್ಯೋಗಗಳನ್ನು ಸೃಷ್ಟಿಸುವ ಹಾಗೂ ಭಾರತದ ವ್ಯಾಪಾರಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವ ಗುರಿಯನ್ನು ಅಮೆಜಾನ್ ಕಂಪನಿ ಹೊಂದಿದೆ. 10 ಲಕ್ಷ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳನ್ನು ಡಿಜಿಟಲೀಕರಣಗೊಳಿಸುವ ಗುರಿಯನ್ನೂ ಹೊಂದಲಾಗಿದೆ. ಇದರಿಂದ 10 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಜೊತೆಗೆ, ಭಾರತದ ಇ-ವಾಣಿಜ್ಯ ರಫ್ತು ಮೊತ್ತವು 2025 ರ ವೇಳೆಗೆ ಸುಮಾರು 75,000 ಕೋಟಿ ರೂಪಾಯಿಗಳಾಗಲಿದೆ ಎಂದು ತಿಳಿಸಿದರು.
Recommended Video

ಡಿಸಿಎಂ ಜೊತೆ ಮತ್ತೆ ಶೀಘ್ರ ಸಭೆ
ಮುಂದಿನ ಹಂತದಲ್ಲಿ ಆನ್ ಲೈನ್ ಮೂಲಕ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರ ಜೊತೆ ಬೇರೆ ಬೇರೆ ರಾಷ್ಟ್ರಗಳಲ್ಲಿ ಇರುವ ಅಮೆಜಾನ್ ಕಂಪನಿಯ ಪ್ರಮುಖ ಅಧಿಕಾರಿಗಳ ಸಭೆ ನಡೆಸುವ ಉದ್ದೇಶ ಹೊಂದಿರುವುದಾಗಿಯೂ ಚೇತನ್ ಕೃಷ್ಣಸ್ವಾಮಿ ತಿಳಿಸಿದರು.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು












Click it and Unblock the Notifications