ಅಂಬೇಡ್ಕರ್ ಮೊಮ್ಮಗ- ಎಚ್ ಡಿಡಿ ಭೇಟಿ, ಬಿಜೆಪಿ ವಿರುದ್ಧ ವಾಗ್ದಾಳಿ
ಬೆಂಗಳೂರು, ನವೆಂಬರ್ 24: ಭಾರತ ಜಾತ್ಯತೀತ ರಾಷ್ಟ್ರ. ಇಲ್ಲಿ ಸಂವಿಧಾನದ ಆಶಯಕ್ಕೆ ವಿರುದ್ಧವಾದ ಧರ್ಮ ರಾಜಕಾರಣವನ್ನು ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ದೇಶವು ಈಗ ಅಪಾಯದ ಸ್ಥಿತಿಯನ್ನು ಎದುರಿಸುತ್ತಿದೆ ಎಂದು ಸಂಸದ ಹಾಗೂ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಯಶ್ವಂತ್ ಶುಕ್ರವಾರ ಅಭಿಪ್ರಾಯ ಪಟ್ಟರು.
ಇಲ್ಲಿನ ಪದ್ಮನಾಭನಗರದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಮಾತುಕತೆ ನಡೆಸಿದರು. ಈ ವೇಳೆ ಶಾಸಕ ಮಧು ಬಂಗಾರಪ್ಪ ಕೂಡ ಇದ್ದರು. ಈ ಭೇಟಿಯ ನಂತರ ಸುದ್ದಿಗೋಷ್ಠಿ ನಡೆಯಿತು.
ದೇವೇಗೌಡರು ಮಾತನಾಡಿ, ದಿವಂಗತ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಜನ್ಮದಿನದ ಕಾರ್ಯಕ್ರಮಕ್ಕಾಗಿ ಪ್ರಕಾಶ್ ಯಶ್ವಂತ್ ಅವರು ಬಂದಿದ್ದರು. ಇದೇ ವೇಳೆ ಕುಮಾರಸ್ವಾಮಿ ಅವರ ಆರೋಗ್ಯ ಕೂಡ ವಿಚಾರಿಸಿದರು. ನಮ್ಮ ಭೇಟಿಗೆ ರಾಜಕೀಯ ಉದ್ದೇಶಗಳಿರಲಿಲ್ಲ ಎಂದು ಅವರು ಹೇಳಿದರು.

ಪ್ರಕಾಶ್ ಯಶ್ವಂತ್ ಅಂಬೇಡ್ಕರ್ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕಿಂತ ಕೆಟ್ಟ ಆಡಳಿತ ನೀಡುತ್ತಿದೆ ಎನ್ ಡಿಎ. ಮೂರು ವರ್ಷದ ಹಿಂದೆ ಆರ್ಥಿಕ ಸ್ಥಿತಿಗಿಂತ ಈಗಿನ ಪರಿಸ್ಥಿತಿ ಕೆಟ್ಟದಾಗಿದೆ. ಈಗ ಪ್ರಾದೇಶಿಕ ಪಕ್ಷಗಳಿಗಿಂತ ಕೆಟ್ಟ ಕೆಳ ಮಟ್ಟದಲ್ಲಿದೆ ಕಾಂಗ್ರೆಸ್ ನ ಸ್ಥಿತಿ. ರಾಷ್ಟ್ರೀಯ ಪಕ್ಷ ಅಂತ ಇರುವುದು ಬಿಜೆಪಿ ಮಾತ್ರ ಎಂದರು.
ಈ ಸಲ ಗುಜರಾತ್ ನ ವಿಧಾನಸಭಾ ಚುನಾವಣೆ ಬಿಜೆಪಿಗೆ ಸಲೀಸಲ್ಲ. ಅಲ್ಲಿನ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಕೈಮರದಂತೆ ಎಂದು ಅಭಿಪ್ರಾಯಪಟ್ಟರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications