ಆಂಬಿಡೆಂಟ್ ಪ್ರಕರಣದ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ವರ್ಗಾವಣೆ
ಬೆಂಗಳೂರು, ನವೆಂಬರ್ 20: ಆಂಬಿಡೆಂಟ್ ಚಿಟ್ ಫಂಡ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ಅವರನ್ನು ಪ್ರಕರಣ ಚಾಲ್ತಿಯಲ್ಲಿ ಇರುವಾಗಲೇ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಅಪರಾಧ ದಳದ ಎಸಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಪ್ರಸನ್ನ ಅವರನ್ನು ನಗರ ಅಪರಾಧ ದಾಖಲೆಗಳ ದಳಕ್ಕೆ (ಸಿಸಿಆರ್ಬಿ) ವರ್ಗಾಯಿಸಲಾಗಿದೆ.
ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಜಾಮೀನು ಪಡೆದ ಬಳಿಕ ನವೆಂಬರ್ 15ರಂದು ಆಂಬಿಡೆಂಟ್ ಪ್ರಕರಣದ ತನಿಖಾ ತಂಡದಲ್ಲಿದ್ದ ಸಿಸಿಬಿಯ ಎಸಿಪಿಗಳಾದ ಪಿ.ಟಿ. ಸುಬ್ರಮಣ್ಯ, ಎಂಎಚ್ ಮಂಜುನಾಥ ಚೌಧರಿ ಮತ್ತು ಮರಿಯಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು.

ಸುಮಾರು 600 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ವಂಚನೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೆಸರೂ ತಳಕು ಹಾಕಿಕೊಂಡಿತ್ತು. ಮಾತ್ರವಲ್ಲದೆ, ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ವೆಂಕಟೇಶ್ ಪ್ರಸನ್ನ ನಡೆಸುತ್ತಿದ್ದರು.
ಐದು ದಿನಗಳ ಹಿಂದೆ ತನಿಖಾ ತಂಡದ ಮೂವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಈಗ ಇದ್ದಕ್ಕಿದ್ದಂತೆ ಪ್ರಮುಖ ತನಿಖಾಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮೆಹಫೂಜ್ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಜನಾರ್ದನ ರೆಡ್ಡಿ ಆಪ್ತ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
ಬೆಂಗಳೂರಿನ 61ನೇ ಸಿಟಿ ಸಿವಿಲ್ ಕೋರ್ಟ್ ಮಂಗಳವಾರ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಇದರಿಂದಾಗಿ ಅಲಿಖಾನ್ ಅವರನ್ನು ವಿಚಾರಣೆಗಾಗಿ ಸಿಸಿಬಿ ಬಂಧಿಸುವ ಸಾಧ್ಯತೆ ಇತ್ತು. ಆದರೆ, ಅವರು ನ್ಯಾಯಾಲಯದ ಮುಂದೆ ಶರಣಾದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications