ಆಂಬಿಡೆಂಟ್ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು, ಡಿಸೆಂಬರ್ 22: ಆಂಬಿಡೆಂಟ್ ಕಂಪನಿ 950 ಕೋಟಿ ಚಿಟ್ ಫಂಡ್ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶುಕ್ರವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆಂಬಿಡೆಂಟ್ ಕೇಸ್ : ಅಲಿಖಾನ್ ಜಾಮೀನು ಅರ್ಜಿ ವಜಾ, ಕೋರ್ಟ್ಗೆ ಶರಣು
ಪ್ರಕರಣದ ಮೂರನೇ ಆರೋಪಿಯಾಗಿರುವ ಇರ್ಫಾನ್ ಮಿರ್ಜಾ ಬಂಧಿತ. ಆಂಬಿಡೆಂಟ್ ಕಂಪನಿಯಲ್ಲಿ ನಿರ್ದೇಶಕನಾಗಿದ್ದ ಇರ್ಫಾ್ ಸಿಸಿಬಿ ಠಾಣೆಯಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಇರ್ಫಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ವಿಚಾರಣೆಗೊಳಪಡಿಸಿದ್ದು, ಈತನಿಂದ ಕೆಲ ಮಹತ್ವದ ಮಾಹಿತಿ ಕಲೆ ಹಾಕಬೇಕಿದೆ.
ಜನಾರ್ದನ ರೆಡ್ಡಿಗೆ ಇನ್ನೂ ಒಂದು ದಿನ ಜೈಲೇ ಗತಿ
ಆಂಬಿಡೆಂಟ್ ಕಂಪನಿ ಹೂಡಿಕೆದಾರರಿಗೆ ಕೋಟ್ಯಂತರ ರೂ ವಂಚಿಸಿದ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ಆಂಬಿಡೆಂಟ್ ಕಂಪನಿ ಮೈಸೂರಿನಲ್ಲಿ 1500ಕ್ಕೂ ಹೆಚ್ಚು ಹೂಡಿಕೆದಾರರಿಗೆ ಅಂದಾಜು 100 ಕೋಟಿಯಷ್ಟು ವಂಚಿಸಿದೆ.
ಅಶ್ರಫ್ ಅಲಿಖಾನ್ ಎಂಬಾತನಿಂದ 5 ಕೋಟಿ, ವಹಾಬ್ ನಿಂದ 3.6 ಕೋಟಿ, ಅಲಿಖಾನ್ನಿಂದ 20 ಕೋಟಿ. ವಿಜಯ್ತಾತಾನಿಂದ 5 ಕೋಟಿ ಬರಬೇಕಿದೆ. ಎಲ್ಲರಿಗೂ ನೋಟಿಸ್ ನೀಡಲಾಗಿದೆ.