ಬೆಂಗಳೂರು; ಒನ್ ವೇನಲ್ಲಿ ಬಂದ ಆಂಬ್ಯುಲೆನ್ಸ್ ಡಿಕ್ಕಿ, 2 ಸಾವು
ಬೆಂಗಳೂರು, ಜನವರಿ 09 : ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಬೈಕ್ಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಪಟ್ಟವರನ್ನು ಮುರುಗೇಶಪಾಳ್ಯ ನಿವಾಸಿಗಳಾದ ಮೊಹಮ್ಮದ್ ಮನ್ಸೂರ್ (28), ಮೈಸೂರಿನ ನಿವಾಸಿ ಇಬ್ರಾಹಿಂ ಖಲೀಲ್ (29) ಎಂದು ಗುರುತಿಸಲಾಗಿದೆ. ವಿವೇಕನಗರ ಸಮೀಪದ ಶ್ರೀನಿವಾಗಿಲು ಜಂಕ್ಷನ್ ಬಳಿ ಈ ಅಪಘಾತ ನಡೆದಿದೆ.
ಜನವರಿ 7ರ ಸಂಜೆ ಮಣಿಪಾಲ್ ಆಸ್ಪತ್ರೆಯಿಂದ ಅಭಿಷೇಕ್ ಎಂಬ ಆಂಬ್ಯುಲೆನ್ಸ್ ಡ್ರೈವರ್ ಸೆಂಟ್ ಜಾನ್ಸ್ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ. ಶ್ರೀನಿವಾಗಿಲು ಜಂಕ್ಷನ್ ಬಳಿ ಒನ್ ವೇನಲ್ಲಿ ವೇಗವಾಗಿ ಬಂದ ಆಂಬ್ಯುಲೆನ್ಸ್ ಬೈಕ್ಗೆ ಡಿಕ್ಕಿ ಹೊಡೆದಿದೆ.

ಕೆಲಸ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಮೊಹಮ್ಮದ್ ಮನ್ಸೂರ್ ಮತ್ತು ಇಬ್ರಾಹಿಂ ಖಲೀಲ್ ಬೈಕ್ನಲ್ಲಿದ್ದರು. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಇಬ್ಬರು ಮೃತಪಟ್ಟಿದ್ದಾರೆ.
ಮೃತರಿಬ್ಬರೂ ಸುಲ್ತಾನ್ ಜ್ಯುವೆಲರ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಆಂಬ್ಯುಲೆನ್ಸ್ ವೇಗವಾಗಿ ಬಂದಿದ್ದೆ ಘಟನೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸಂಚಾರ ನಿಯಮ ಉಲ್ಲಂಘನೆ ಮಾಡಿ ಒನ್ ವೇನಲ್ಲಿ ಸಂಚಾರ ನಡೆಸಲು ಅವಕಾಶವಿದೆ. ಆದರೆ, ಆಂಬ್ಯುಲೆನ್ಸ್ ಚಾಲಕರು ಸಹ ಎಚ್ಚರಿಕೆಯಿಂದ ಇರಬೇಕು. ಬೇರೆಯವರ ಜೀವಕ್ಕೆ ಹಾನಿಯಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಅವಕಾವೂ ಇದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications