ಡಿಆರ್ ಡಿಒನ ಸತೀಶ್ ರೆಡ್ಡಿ ಅವರಿಗೆ ಅಮೆರಿಕದ ಕ್ಷಿಪಣಿ ಪ್ರಶಸ್ತಿ
ಬೆಂಗಳೂರು, ಮಾರ್ಚ್ 4: ಡಿಫೆನ್ಸ್ ರೀಸರ್ಚ್ ಅಂಡ್ ಡೆವಲಪ್ ಮೆಂಟ್ ಆರ್ಗನೈಸೇಷನ್ (ಡಿಆರ್ ಡಿಒ) ಅಧ್ಯಕ್ಷ ಜಿ.ಸತೀಶ್ ರೆಡ್ಡಿ ಅವರಿಗೆ ಅಮೆರಿಕನ್ ಇನ್ ಸ್ಟಿಟ್ಯೂಟ್ ಆಫ್ ಏರೋನಾಟಿಕ್ಸ್ ಹಾಗೂ ಅಸ್ಟ್ರೋನಾಟಿಕ್ಸ್ ಅವರ ಪ್ರಶಸ್ತಿ ಲಭಿಸಿದೆ. ಕ್ಷಿಪಣಿ ವ್ಯವಸ್ಥೆಯಲ್ಲಿ 2019ರ ಸಾಲಿನ ಜಂಟಿ ಪ್ರಶಸ್ತಿ ವಿಜೇತರಾಗಿದ್ದಾರೆ ಸತೀಶ್ ರೆಡ್ಡಿ.
ಭಾರತದ ಸ್ವದೇಶಿ ನಿರ್ಮಿತ ಕ್ಷಿಪಣಿ ವ್ಯವಸ್ಥೆಯ ವಿನ್ಯಾಸ, ಅಭಿವೃದ್ಧಿ, ನಿಯೋಜನೆಗೆ ಮೂರು ದಶಕಗಳಿಂದ ಸತೀಶ್ ರೆಡ್ಡಿ ನೀಡಿದ ಕೊಡುಗೆಯನ್ನು ಪರಿಗಣಿಸಲಾಗಿದೆ. ನಿರ್ದೇಶಿತ ಶಸ್ತ್ರಾಸ್ತ್ರ, ಅತ್ಯಾಧುನಿಕ ಏವಿಯೋನಿಕ್ಸ್ ಮತ್ತು ಭಾರತದ ನೇವಿಗೇಷನ್ ತಂತ್ರಜ್ಞಾನಕ್ಕೆ ರೆಡ್ಡಿ ಅವರು ನೀಡಿದ ಕೊಡುಗೆಯನ್ನು ಕೂಡ ಪರಿಗಣಿಸಲಾಗಿದೆ ಎಂದು ಅಮೆರಿಕದ ವರ್ಜಿನೀಯಾ ಮೂಲದ ವೈಮಾಂತರಿಕ್ಷ (ಏರೋಸ್ಪೇಸ್) ತಾಂತ್ರಿಕ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.
ಐವತ್ತೈದು ವರ್ಷದ ರೆಡ್ಡಿ ಅವರು ರಕ್ಷಣಾ ಕಾರ್ಯದರ್ಶಿ ಮತ್ತು ಬೆಂಗಳೂರಿನಲ್ಲಿರುವ ಡಿಆರ್ ಡಿಒ ಮತ್ತೊಂದು ಅಂಗ ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯ ನಿರ್ದೇಶಕರಾಗಿದ್ದಾರೆ. ಅಗ್ನಿ- 5 ಕ್ಷಿಪಣಿಗೆ ರೆಡ್ಡಿ ಅವರ ಕೊಡುಗೆ ಇದೆ. ಇದೇ ಕ್ಷಿಪಣಿ ಪ್ರಶಸ್ತಿಯ ಮತ್ತೊಬ್ಬ ವಿಜೇತರು ಅರಿಜೋನಾದ ಟಕ್ಸನ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪಾಂಶುಪಾಲರು.

ಮೇ ಏಳರಿಂದ ಒಂಬತ್ತರವರೆಗೆ ಅಮೆರಿಕದಲ್ಲಿ ನಡೆಯುವ ರಕ್ಷಣಾ ಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯುತ್ತದಾದರೂ ಸತೀಶ್ ರೆಡ್ಡಿ ಅವರಿಗೆ ಭಾರತದಲ್ಲಿಯೇ ಪ್ರದಾನ ಮಾಡಲಾಗುವುದು. "ಕ್ಷಿಪಣಿ ವ್ಯವಸ್ಥೆ ತಂತ್ರಜ್ಞಾನ ಅಭಿವೃದ್ಧಿ ಹಾಗೂ ಜಾರಿಯಲ್ಲಿ ಅದ್ಭುತ ಸಾಧನೆ ಮಾಡಿದವರನ್ನು ಗುರುತಿಸಲು ಹಾಗೂ ಕ್ಷಿಪಣಿ ವ್ಯವಸ್ಥೆಯಲ್ಲಿ ಸ್ಫೂರ್ತಿದಾಯಕ ನಾಯಕತ್ವ ಪ್ರದರ್ಶಿಸಿದವರಿಗೂ ಈ ಪ್ರಶಸ್ತಿ ನೀಡಲಾಗುವುದು" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
1986ರಲ್ಲಿ ಸತೀಶ್ ರೆಡ್ಡಿ ಅವರು ಹೈದರಾಬಾದ್ ನಲ್ಲಿರುವ ಡಿಅರ್ ಡಿಎಲ್ (ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ ಮೆಂಟ್ ಲ್ಯಾಬೋರೇಟರಿ) ಸೇರಿದ್ದಾರೆ. ಆ ನಂತರ ರೀಸರ್ಚ್ ಸೆಂಟರ್ ಇಮಾರತ್ ಸೇರಿದ್ದಾರೆ. ಜವಾಹರ್ ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಮಾಡಿರುವ ಅವರು, ಎಂ.ಎಸ್., ಹಾಗೂ ಪಿಎಚ್.ಡಿ., ಕೂಡ ಪೂರ್ಣಗೊಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications