ಬೆಂಗಳೂರಿನಲ್ಲಿ ಕೊರೊನಾವೈರಸ್ ಹೆಚ್ಚಳ; ಮಾಸ್ಕ್ ಕಡ್ಡಾಯ
ಬೆಂಗಳೂರು, ಜೂನ್ 6: ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವುದರ ಹಿನ್ನೆಲೆ ನಗರದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಕೆ ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಪ್ರತಿನಿತ್ಯ 220ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ನಗರದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದರ ಬಗ್ಗೆ ನಿಗಾ ವಹಿಸುವಂತೆ ಮಾರ್ಷಲ್ ಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ. ಈ ಹಿಂದೆ ದಿನಕ್ಕೆ 16000 ಮಂದಿಗೆ ಕೋವಿಡ್-19 ಸೋಂಕು ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ದಿನವೊಂದಕ್ಕೆ ಕನಿಷ್ಠ 20,000 ಜನರಿಗೆ ಕೋವಿಡ್-19 ಸೋಂಕಿನ ಪರೀಕ್ಷೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಕೆ ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲೇ 291 ಮಂದಿಗೆ ಕೊರೊನಾವೈರಸ್:
ಕರ್ನಾಟಕದ ಇಡೀ ರಾಜ್ಯದಲ್ಲಿ 301 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪಕ್ಕಾ ಆಗಿದ್ದರೆ, ಅದರಲ್ಲಿ 291 ಮಂದಿ ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 291 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 17,88,895ಕ್ಕೆ ಏರಿಕೆಯಾಗಿದೆ. ಇದುವರೆಗೂ 17,69,636 ಸೋಂಕಿತರು ಗುಣಮುಖರಾಗಿದ್ದರೆ, 16,964 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ.
ಕರ್ನಾಟಕದಲ್ಲಿ ಕೊರೊನಾವೈರಸ್ ಲೆಕ್ಕ:
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 300 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 146 ಸೋಂಕಿತರು ಗುಣಮುಖರಾಗಿದ್ದು, ಒಬ್ಬರು ಮಹಾಮಾರಿಗೆ ಪ್ರಾಣ ಬಿಟ್ಟಿದ್ದಾರೆ.
ಭಾನುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 39,53,359 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 39,10,837 ಸೋಂಕಿತರು ಗುಣಮುಖರಾಗಿದ್ದು, 40,066 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 2414 ಸಕ್ರಿಯ ಪ್ರಕರಣಗಳಿವೆ.
Recommended Video
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications