Amit Shah Road Show In Bengaluru: ಈ ಮಾರ್ಗಗಳಲ್ಲಿ ಹೋದರೆ ಟ್ರಾಫಿಕ್ ಹೆಚ್ಚು: ಬದಲೀ ಮಾರ್ಗಗಳ ವಿವರ ಇಲ್ಲಿದೆ
ರಾಜ್ಯ ಚುನಾವಣಾ ಕಣ ರಂಗೇರಿದ್ದು ದೆಹಲಿ ನಾಯಕರು ರಾಜ್ಯದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ರಾಜಕೀಯ ಪಕ್ಷಗಳ ರೋಡ್ ಶೋಗಳಿಂದ ಜನ ಪರದಾಡುವಂತಾಗಿದೆ. ಮೇ 2 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನ ಆಡುಗೋಡಿ ಸಿಗ್ನಲ್ನಿಂದ ಹೊಸೂರು ರಸ್ತೆಯಲ್ಲಿರುವ ಟೋಟಲ್ ಮಾಲ್ವರೆಗೂ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ನಡೆಯುವ ಮಾರ್ಗದಲ್ಲಿ ಪೊಲೀಸರು ವಾಹನ ಸಂಚಾರವನ್ನು ನಿರ್ಬಂಧಿಸಲಿದ್ದು ಪರ್ಯಾಯ ಮಾರ್ಗವನ್ನು ಬಳಸುವಂತೆ ಮನವಿ ಮಾಡಿದ್ದಾರೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳ ವಿವರವನ್ನು ಬೆಂಗಳೂರು ಸಂಚಾರ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಡಾ. ಮರಿಗೌಡ ರಸ್ತೆಯಿಂದ ಮಡಿವಾಳ ಚೆಕ್ಪೋಸ್ಟ್ಗೆ ಕಡೆಗೆ ಬರುವ ವಾಹನಗಳು ಡೈರಿ ಸರ್ಕಲ್ನಲ್ಲಿ ಬಲತಿರುವು ಪಡೆದು ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಲು ಕೋರಲಾಗಿದೆ. ಎಲೆಕ್ಟ್ರಾನಿಕ್ಸಿಟಿಯಿಂದ ಬೆಂಗಳೂರು ನಗರದ ಕಡೆಗೆ ಚಲಿಸುವ ವಾಹನಗಳು ವೀರಸಂದ್ರ ಜಂಕ್ಷನ್ನಲ್ಲಿ ಎಡತಿರುವು ಪಡೆದು, ನೈಸ್ ರಸ್ತೆಯ ಮುಖಾಂತರ ಸಂಚರಿಸಿ ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಬಹುದಾಗಿದೆ.
ಹೊಸೂರು ಲಷ್ಕರ್ ರಸ್ತೆಯಿಂದ ಚೆಕ್ಪೋಸ್ಟ್ ಜಂಕ್ಷನ್ಗೆ ಬರುವ ವಾಹನಗಳು ಆನೆಪಾಳ್ಯ ಜಂಕ್ಷನ್ನಲ್ಲಿ ಬಲತಿರುವು ಪಡೆದು, ಡೈರಿ ಸರ್ಕಲ್ನಿಂದ ಬನ್ನೇರುಘಟ್ಟ ರಸ್ತೆ ಮುಖಾಂತರ ಚಲಿಸಲು ಸೂಚನೆ ನೀಡಿದ್ದಾರೆ.
ಹೊರವರ್ತುಲ ರಸ್ತೆ (ಔಟರ್ ರಿಂಗ್ ರೋಡ್) ಯಲ್ಲಿ ಮಾರತ್ ಹಳ್ಳಿ ಕಡೆಯಿಂದ ಬರುವವರು ಸಿಲ್ಕ್ ಬೋರ್ಡ್ ಮುಖಾಂತರ ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇ ಔಟ್ ಹಾಗೂ ಬನಶಂಕರಿ ಕಡೆಗೆ ಹೋಗುವ ವಾಹನಗಳು ಹೆಚ್ಎಸ್ಆರ್ ಲೇಔಟ್ 14ನೇ ಮೈನ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಸಂಚರಿಸಬಹುದಾಗಿದೆ.
ಹೆಚ್ಎಸ್ಆರ್ ಕಡೆಯಿಂದ ಬರುವ ವಾಹನಗಳಿಗೆ ಬಲ ತಿರುವು ಪಡೆಯುವುದನ್ನು ಮತ್ತು ಬಿಟಿಎಂ ಲೇಔಟ್ ಕಡೆಯಿಂದ ಬರುವ ವಾಹನಗಳಿಗೆ ಎಡ ತಿರುವು ಪಡೆಯುವುದನ್ನು ಸಿಲ್ಕ್ಬೋರ್ಡ್ ಜಂಕ್ಷನ್ನಲ್ಲಿ ರದ್ದು ಮಾಡಲಾಗಿದೆ. ಬದಲಾಗಿ ಹೆಚ್ಎಸ್ಆರ್ ಕಡೆಯಿಂದ ಬರುವ ವಾಹನಗಳು 14ನೇ ಮುಖ್ಯರಸ್ತೆ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಮುಂದೆ ಸಾಗಲು ತಿಳಿಸಲಾಗಿದೆ. ಬಿಟಿಎಂ ಲೇಔಟ್ ಕಡೆಯಿಂದ ಬರುವ ವಾಹನಗಳು ಜಯದೇವ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬನ್ನೇರುಘಟ್ಟ ರಸ್ತೆಯಲ್ಲಿ ಸಂಚರಿಸಬಹುದಾಗಿದೆ.
ಇನ್ನರ್ ರಿಂಗ್ ರಸ್ತೆಯಿಂದ ಬಂದು ಕೃಪಾನಿಧಿ ಜಂಕ್ಷನ್ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ಗೆ ಬರುವ ವಾಹನಗಳು ಸೋನಿವರ್ಲ್ಡ್ ಸಿಗ್ನಲ್ನಲ್ಲಿ ಹೆಚ್ಎಸ್ಆರ್ 14ನೇ ಮುಖ್ಯರಸ್ತೆ ಮುಖಾಂತರ ಸಂಚರಿಸಲು ತಿಳಿಸಲಾಗಿದೆ. ಬೇಗೂರು ರಸ್ತೆ ಮತ್ತು ಚಿಕ್ಕನಹಳ್ಳಿ ಕಡೆಯಿಂದ ಸಿಲ್ಕ್ಬೋರ್ಡ್ ಕಡೆಗೆ ಬರುವ ವಾಹಗಳು ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಬಲತಿರುವು ಪಡೆದಯ ಕೂಡ್ಲು ಗೇಟ್ ಜಂಕ್ಷನ್-ಹೆಚ್ಎಸ್ಆರ್ ಲೇಔಟ್ ಮೂಲಕ ಸಂಚರಿಸುವುಂತೆ ಸೂಚಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications