ಅರಮನೆ ಮೈದಾನದಲ್ಲಿ ಅಮಿತ್ ಶಾ ಕಾರ್ಯಕ್ರಮ: ಬೆಂಗಳೂರಲ್ಲಿ ವಾಹನ ಸಂಚಾರ ದಟ್ಟಣೆ
ಬೆಂಗಳೂರು, ಏ. 1: ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು, ರಾಜಧಾನಿಯ ಸಂಚಾರ ಪಥಗಳನ್ನು ಬದಲಿಸಲಾಗಿದೆ. ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುತ್ತಿದ್ದ ಜನ ಸಾಮಾನ್ಯರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.
ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರಣ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಮೈಸೂರು ರಸ್ತೆ ಕಡೆಯಿಂದ ಬರುವ ಬಸ್, ಟೆಂಪೋಗಳು ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗದಲ್ಲಿ ಎಡ ತಿರುವು ಪಡೆದು ರಾಜಕುಮಾರ ಸಮಾಧಿ ರಸ್ತೆ ಮೂಲಕ ತುಮಕೂರು ರಸ್ತೆ ತಲುಪುವುದು. ಬಿಇಎಲ್ ವೃತ್ತದ ಮೂಲಕ ಹೆಬ್ಬಾಳ ಮೇಲ್ಸೇತುವೆ ಸಂಪರ್ಕಿಸಿ ಮೇಖ್ರಿ ವೃತ್ತದ ಮೂಲಕ ಜಯ ಮಹಲ್ ಮೂಲಕ ಅರಮನೆ ಮೈದಾನ ತಲುಪಲು ಅವಕಾಶ ಮಾಡಿಕೊಡಲಾಗಿದೆ.

ತುಮಕೂರು ರಸ್ತೆಯಿಂದ ಬರುವ ವಾಹನಗಳು ಗೊರಗುಂಟೆ ಪಾಳ್ಯ ಜಂಕ್ಷನ್ ಮೂಲಕ ಬಿಇಎಲ್ ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಮೇಖ್ರಿ ವೃತ್ತ ಸರ್ವೀಸ್ ರಸ್ತೆ ಮೂಲಕ ಜಯ ಮಹಲ್ ರಸ್ತೆ ತಲುಪಿ ಅರಮನೆ ಮೈದಾನ ತಲುಪಲು ವ್ಯವಸ್ಥೆ ಮಾಡಲಾಗಿದೆ.
ಕನಕಪುರ ರಸ್ತೆಯಿಂದ ಬರುವ ವಾಹನಗಳು ಬನಶಂಕರಿ ದೇವಸ್ತಾನ ನಿಲ್ದಾಣ ಮೂಲಕ ಜಯನಗರ ನಾಲ್ಕನೇ ಬ್ಲಾಕ್, ಜೆ.ಸಿ. ರಸ್ತೆ, ಟೌನ್ ಹಾಲ್, ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಲ ತಿರುವು ಪಡೆದು ಬಿಡಿಎ ಮೇಲ್ಸೇತುವೆ ರಸ್ತೆ ಮಾರ್ಗವಾಗಿ ಸಂಚರಿಸಿ ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆ ಮೂಲಕ ಅರಮನೆ ಮೈದಾನ ತಲುಪುವುದು.

ಬನ್ನೇರುಘಟ್ಟ ಮತ್ತು ಹೊಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮಡಿವಾಳ ಚೆಕ್ ಪೋಸ್ಟ್, ಡೈರಿ ವೃತ್ತ ಲಾಲ್ ಬಾಗ್ ಮುಖ್ಯ ದ್ವಾರ, ಪ್ಯಾಲೇಸ್ ರಸ್ತೆ, ಆರ್.ಪಿ. ರಸ್ತೆ ಮೂಲಕ ಬಿಡಿಎ ಮೇಲ್ಸೇತುವೆ ಮಾರ್ಗದಲ್ಲಿ ಅರಮನೆ ಮೈದಾನ ತಲುಪುವುದು.
ಹಳೇ ಮದ್ರಾಸು ರಸ್ತೆಯಿಂದ ಬರುವ ವಾಹನಗಳು ಹೆಣ್ಣೂರು ಜಂಕ್ಷನ್, ನಾಗವಾರ, ಹೆಬ್ಬಾಳ ಮೇಲ್ಸೇತವೆ ಮೂಲಕ. ಸರ್ಕಸ್ ಮೈದಾನದ ಆವರಣ ತಲುಪಲು ಸೂಚಿಸಲಾಗಿದೆ. ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳಿಗೂ ಚಿಕ್ಕಜಾಲ, ಕೊಡಿಗೇಹಳ್ಳಿ, ಹೆಬ್ಬಾಳ ಮೇಲು ಸೇತುವೆ, ಜಯಮಹಲ್ ಸರ್ಕಸ್ ರಸ್ತೆ ಆವರಣ ತಲುಪಲು ಅವಕಾಶ ಮಾಡಿಕೊಡಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ: ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಕಾರ್ ಮತ್ತು ದ್ವಿಚಕ್ರ ವಾಹನ: ದ್ವಿಚಕ್ರ ಮತ್ತು ಕಾರ್ ನಲ್ಲಿ ಬರುವರು ಜಯ ಮಹಲ್ ರಸ್ತೆ ಮೂಲಕ ಪ್ರವೇಶಿಸಿ ಮಾವಿನ ಕಾಯಿ ಮಂಡಿಯಲ್ಲಿ ವಾಃನ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಗಣ್ಯ ಮತ್ತು ಅತಿ ಗಣ್ಯರ ವಾಹನ: ಗಣ್ಯ ಮತ್ತು ಅತಿ ಗಣ್ಯ ವ್ಯಕ್ತಿಗಳ ವಾಹನಗಳು ಪ್ಯಾಲೇಸ್ ಮೈದಾನದ ಶಾರೂಖ್ ಖಾನ್ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.
ಪಾರ್ಕಿಂಗ್ ನಿಷೇಧ: ಅರಮನೆ ಮೈದಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂದು ಈ ಕೆಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ರಮಣ ಮಹರ್ಷಿ ರಸ್ತೆ, ಸರ್. ಸಿವಿ. ರಾಮನ್ ರಸ್ತೆ, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲು ಸೇತುವೆ, ಮೇಖ್ರಿ ವೃತ್ತ, ಜಯಮಹಲ್ ರಸ್ತೆ, ತರಳಬಾಳು ರಸ್ತೆ, ಜಯಮಹಲ್ ರಸ್ತೆ, ಎಂ.ವಿ. ಜಯರಾಮನ್ ರಸ್ತೆ, ಪ್ಯಾಲೇಸ್ ರಸ್ತೆ, ಪ್ಯಾಲೇಸ್ ಕ್ರಾಸ್, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್, ಟೆಂಪಲ್ ಸ್ಟ್ರೀಟ್ ನಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
ಪರ್ಯಾಯ ಮಾರ್ಗ: ಬೆಂಗಳೂರು ದಕ್ಷಿಣ ಮತ್ತು ಪಶ್ಚಿಮ ಭಾಗದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು ಬಸವೇಶ್ವರ ವೃತ್ತ, ಎಡ ತಿರುವು, ಚೌಡಯ್ಯ ರಸ್ತೆ, ವಿಂಡ್ಸರ್ ಮ್ಯಾನರ್ ರಸ್ತೆ, ಕಾವೇರಿ ಜಂಕ್ಷನ್ ಎಡ ತಿರುವು, ಭಾಷ್ಯಂ ವೃತ್ತ, ಜೀವ ರಾಜ್ ಆಳ್ವಾ ರಸ್ತೆ, ಸದಾಶಿವನಗರ ಪಿಎಸ್ ಜಂಕ್ಷನ್, ನ್ಯೂ ಬಿಇಎಲ್ ರಸ್ತೆ , ದೇವಸಂದ್ರ - ಹೆಬ್ಬಾಳ ರಸ್ತೆ ಮೂಲಕ ಸಾಗಲು ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರು ಪೂರ್ವ ಭಾಗದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳು ಎಂ.ಜಿ. ರಸ್ತೆ, ಥಾಮಸ್ ಕೆಫೆ, ವೀಲರ್ಸ್ ರಸ್ತೆ, ಬಾಣಸವಾಡಿ ಮುಖ್ಯ ರಸ್ತೆ, ಹೊರ ವರ್ತುಲ ರಸ್ತೆ, ಥಣಿಸಂದ್ರ ಮುಖ್ಯ ರಸ್ತೆ, ಹೆಗಡೆ ನಗರ, ಕಟ್ಟಿಗೆಹಳ್ಳಿ ಯಲ್ಲಿ ಎಡ ತಿರುವು ಪಡೆದು ಬಾಗಲೂರು ಕ್ರಾಸ್ ಮೂಲಕ ವಿಮಾನ ನಿಲ್ದಾಣಕ್ಕೆ ಸಾಗಬಹುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೂರ್ವ ವಿಭಾಗದ ಕಡೆ ಹೋಗುವ ವಾಹನಗಳೀಗೆ ಹೆಬ್ಬಾಳ ಮೇಲ್ಸೇತುವೆ ಕೆಳ ಭಾಗದಲ್ಲಿ ಎರಡ ತಿರುವು ಪಡೆದು ನಾಗವಾರ ಜಂಕ್ಷನ್, ಟ್ಯಾನರಿ ರಸ್ತೆ ಮೂಲಕ ಸಾಗಲು ಅವಕಾಶ ಮಾಡಿಕೊಡಲಾಗಿದೆ.
Recommended Video
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications