ಅರಮನೆ ಮೈದಾನದಲ್ಲಿ ಅಮಿತ್ ಶಾ ಕಾರ್ಯಕ್ರಮ: ಬೆಂಗಳೂರಲ್ಲಿ ವಾಹನ ಸಂಚಾರ ದಟ್ಟಣೆ
ಬೆಂಗಳೂರು, ಏ. 1: ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು, ರಾಜಧಾನಿಯ ಸಂಚಾರ ಪಥಗಳನ್ನು ಬದಲಿಸಲಾಗಿದೆ. ಯುಗಾದಿ ಹಬ್ಬಕ್ಕೆ ಊರುಗಳಿಗೆ ತೆರಳುತ್ತಿದ್ದ ಜನ ಸಾಮಾನ್ಯರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ.
ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರಣ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಮೈಸೂರು ರಸ್ತೆ ಕಡೆಯಿಂದ ಬರುವ ಬಸ್, ಟೆಂಪೋಗಳು ಮೈಸೂರು ರಸ್ತೆ, ನಾಯಂಡಹಳ್ಳಿ ಮಾರ್ಗದಲ್ಲಿ ಎಡ ತಿರುವು ಪಡೆದು ರಾಜಕುಮಾರ ಸಮಾಧಿ ರಸ್ತೆ ಮೂಲಕ ತುಮಕೂರು ರಸ್ತೆ ತಲುಪುವುದು. ಬಿಇಎಲ್ ವೃತ್ತದ ಮೂಲಕ ಹೆಬ್ಬಾಳ ಮೇಲ್ಸೇತುವೆ ಸಂಪರ್ಕಿಸಿ ಮೇಖ್ರಿ ವೃತ್ತದ ಮೂಲಕ ಜಯ ಮಹಲ್ ಮೂಲಕ ಅರಮನೆ ಮೈದಾನ ತಲುಪಲು ಅವಕಾಶ ಮಾಡಿಕೊಡಲಾಗಿದೆ.

ತುಮಕೂರು ರಸ್ತೆಯಿಂದ ಬರುವ ವಾಹನಗಳು ಗೊರಗುಂಟೆ ಪಾಳ್ಯ ಜಂಕ್ಷನ್ ಮೂಲಕ ಬಿಇಎಲ್ ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಮೇಖ್ರಿ ವೃತ್ತ ಸರ್ವೀಸ್ ರಸ್ತೆ ಮೂಲಕ ಜಯ ಮಹಲ್ ರಸ್ತೆ ತಲುಪಿ ಅರಮನೆ ಮೈದಾನ ತಲುಪಲು ವ್ಯವಸ್ಥೆ ಮಾಡಲಾಗಿದೆ.
ಕನಕಪುರ ರಸ್ತೆಯಿಂದ ಬರುವ ವಾಹನಗಳು ಬನಶಂಕರಿ ದೇವಸ್ತಾನ ನಿಲ್ದಾಣ ಮೂಲಕ ಜಯನಗರ ನಾಲ್ಕನೇ ಬ್ಲಾಕ್, ಜೆ.ಸಿ. ರಸ್ತೆ, ಟೌನ್ ಹಾಲ್, ಕೆ.ಜಿ. ರಸ್ತೆ, ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಲ ತಿರುವು ಪಡೆದು ಬಿಡಿಎ ಮೇಲ್ಸೇತುವೆ ರಸ್ತೆ ಮಾರ್ಗವಾಗಿ ಸಂಚರಿಸಿ ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆ ಮೂಲಕ ಅರಮನೆ ಮೈದಾನ ತಲುಪುವುದು.

ಬನ್ನೇರುಘಟ್ಟ ಮತ್ತು ಹೊಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮಡಿವಾಳ ಚೆಕ್ ಪೋಸ್ಟ್, ಡೈರಿ ವೃತ್ತ ಲಾಲ್ ಬಾಗ್ ಮುಖ್ಯ ದ್ವಾರ, ಪ್ಯಾಲೇಸ್ ರಸ್ತೆ, ಆರ್.ಪಿ. ರಸ್ತೆ ಮೂಲಕ ಬಿಡಿಎ ಮೇಲ್ಸೇತುವೆ ಮಾರ್ಗದಲ್ಲಿ ಅರಮನೆ ಮೈದಾನ ತಲುಪುವುದು.
ಹಳೇ ಮದ್ರಾಸು ರಸ್ತೆಯಿಂದ ಬರುವ ವಾಹನಗಳು ಹೆಣ್ಣೂರು ಜಂಕ್ಷನ್, ನಾಗವಾರ, ಹೆಬ್ಬಾಳ ಮೇಲ್ಸೇತವೆ ಮೂಲಕ. ಸರ್ಕಸ್ ಮೈದಾನದ ಆವರಣ ತಲುಪಲು ಸೂಚಿಸಲಾಗಿದೆ. ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳಿಗೂ ಚಿಕ್ಕಜಾಲ, ಕೊಡಿಗೇಹಳ್ಳಿ, ಹೆಬ್ಬಾಳ ಮೇಲು ಸೇತುವೆ, ಜಯಮಹಲ್ ಸರ್ಕಸ್ ರಸ್ತೆ ಆವರಣ ತಲುಪಲು ಅವಕಾಶ ಮಾಡಿಕೊಡಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ: ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಕಾರ್ ಮತ್ತು ದ್ವಿಚಕ್ರ ವಾಹನ: ದ್ವಿಚಕ್ರ ಮತ್ತು ಕಾರ್ ನಲ್ಲಿ ಬರುವರು ಜಯ ಮಹಲ್ ರಸ್ತೆ ಮೂಲಕ ಪ್ರವೇಶಿಸಿ ಮಾವಿನ ಕಾಯಿ ಮಂಡಿಯಲ್ಲಿ ವಾಃನ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಗಣ್ಯ ಮತ್ತು ಅತಿ ಗಣ್ಯರ ವಾಹನ: ಗಣ್ಯ ಮತ್ತು ಅತಿ ಗಣ್ಯ ವ್ಯಕ್ತಿಗಳ ವಾಹನಗಳು ಪ್ಯಾಲೇಸ್ ಮೈದಾನದ ಶಾರೂಖ್ ಖಾನ್ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.
ಪಾರ್ಕಿಂಗ್ ನಿಷೇಧ: ಅರಮನೆ ಮೈದಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಇಂದು ಈ ಕೆಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ರಮಣ ಮಹರ್ಷಿ ರಸ್ತೆ, ಸರ್. ಸಿವಿ. ರಾಮನ್ ರಸ್ತೆ, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲು ಸೇತುವೆ, ಮೇಖ್ರಿ ವೃತ್ತ, ಜಯಮಹಲ್ ರಸ್ತೆ, ತರಳಬಾಳು ರಸ್ತೆ, ಜಯಮಹಲ್ ರಸ್ತೆ, ಎಂ.ವಿ. ಜಯರಾಮನ್ ರಸ್ತೆ, ಪ್ಯಾಲೇಸ್ ರಸ್ತೆ, ಪ್ಯಾಲೇಸ್ ಕ್ರಾಸ್, ಟಿ. ಚೌಡಯ್ಯ ರಸ್ತೆ, ರೇಸ್ ಕೋರ್ಸ್, ಟೆಂಪಲ್ ಸ್ಟ್ರೀಟ್ ನಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.
ಪರ್ಯಾಯ ಮಾರ್ಗ: ಬೆಂಗಳೂರು ದಕ್ಷಿಣ ಮತ್ತು ಪಶ್ಚಿಮ ಭಾಗದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು ಬಸವೇಶ್ವರ ವೃತ್ತ, ಎಡ ತಿರುವು, ಚೌಡಯ್ಯ ರಸ್ತೆ, ವಿಂಡ್ಸರ್ ಮ್ಯಾನರ್ ರಸ್ತೆ, ಕಾವೇರಿ ಜಂಕ್ಷನ್ ಎಡ ತಿರುವು, ಭಾಷ್ಯಂ ವೃತ್ತ, ಜೀವ ರಾಜ್ ಆಳ್ವಾ ರಸ್ತೆ, ಸದಾಶಿವನಗರ ಪಿಎಸ್ ಜಂಕ್ಷನ್, ನ್ಯೂ ಬಿಇಎಲ್ ರಸ್ತೆ , ದೇವಸಂದ್ರ - ಹೆಬ್ಬಾಳ ರಸ್ತೆ ಮೂಲಕ ಸಾಗಲು ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರು ಪೂರ್ವ ಭಾಗದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳು ಎಂ.ಜಿ. ರಸ್ತೆ, ಥಾಮಸ್ ಕೆಫೆ, ವೀಲರ್ಸ್ ರಸ್ತೆ, ಬಾಣಸವಾಡಿ ಮುಖ್ಯ ರಸ್ತೆ, ಹೊರ ವರ್ತುಲ ರಸ್ತೆ, ಥಣಿಸಂದ್ರ ಮುಖ್ಯ ರಸ್ತೆ, ಹೆಗಡೆ ನಗರ, ಕಟ್ಟಿಗೆಹಳ್ಳಿ ಯಲ್ಲಿ ಎಡ ತಿರುವು ಪಡೆದು ಬಾಗಲೂರು ಕ್ರಾಸ್ ಮೂಲಕ ವಿಮಾನ ನಿಲ್ದಾಣಕ್ಕೆ ಸಾಗಬಹುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೂರ್ವ ವಿಭಾಗದ ಕಡೆ ಹೋಗುವ ವಾಹನಗಳೀಗೆ ಹೆಬ್ಬಾಳ ಮೇಲ್ಸೇತುವೆ ಕೆಳ ಭಾಗದಲ್ಲಿ ಎರಡ ತಿರುವು ಪಡೆದು ನಾಗವಾರ ಜಂಕ್ಷನ್, ಟ್ಯಾನರಿ ರಸ್ತೆ ಮೂಲಕ ಸಾಗಲು ಅವಕಾಶ ಮಾಡಿಕೊಡಲಾಗಿದೆ.
Recommended Video
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications