ಚಿದಾನಂದಮೂರ್ತಿ, ಸಿದ್ದಲಿಂಗಯ್ಯರ ಭೇಟಿ ಮಾಡಿದ ಅಮಿತ್ ಶಾ
ಬೆಂಗಳೂರು, ಏಪ್ರಿಲ್ 18: ಬಸವ ಜಯಂತಿಯಂದು ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಿಜೆಪಿಯ ಅಮಿತ್ ಶಾ ಅವರು ಸಂಶೋಧಕ ಚಿದಾನಂದ ಮೂರ್ತಿ ಮತ್ತು ಬಂಡಾಯ ಸಾಹಿತಿ ಸಿದ್ದಲಿಂಗಯ್ಯ ಅವರನ್ನು ಭೇಟಿ ಮಾಡಿದರು.
ಇಬ್ಬರೂ ಹಿರಿಯ ಚಿಂತಕರ ಸ್ವಗೃಹಕ್ಕೆ ತೆರಳಿ ಭೇಟಿ ಮಾಡಿದ ಅಮಿತ್ ಶಾ, ಯಡಿಯೂರಪ್ಪ ಹಾಗೂ ಇತರ ಬಿಜೆಪಿ ಮುಖಂಡರು ಕೆಲ ಕಾಲ ಅವರೊಂದಿಗೆ ಚರ್ಚೆ ನಡೆಸಿ ಉಪಯುಕ್ತ ಸಲಹೆಗಳನ್ನು ಪಡೆದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು, 'ಲಿಂಗಾಯತ ಪ್ರತ್ಯೇಕ ಧರ್ಮ ಮಾಡುವುದಕ್ಕೆ ಬಿಡಬೇಡಿ' ಎಂದು ಅಮಿತ್ ಶಾ ಅವರಲ್ಲಿ ಮನವಿ ಮಾಡಿದರು. ಆದರೆ ಇದಕ್ಕೆ ಶಾ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ. ಜೊತೆಗೆ ಗೋ ರಕ್ಷಣೆ ಕುರಿತು ವಿಶೇಷ ಕಾನೂನು ರಚಿಸುವಂತೆಯೂ ಚಿದಾನಂದಮೂರ್ತಿ ಅವರು ಶಾ ಅವರಲ್ಲಿ ಮನವಿ ಮಾಡಿದ್ದಾರೆ.
In Pics: ಬಿಜೆಪಿಯ ಬಸವ ಜಯಂತಿ, ಚಿಂತಕರೊಂದಿಗೆ ಚರ್ಚೆ ಮಾಡಿದ ಶಾ
ನಂತರ ದಲಿತ ಸಾಹಿತಿ ಸಿದ್ದಲಿಂಗಯ್ಯ ಅವರ ಮನೆಗೆ ತೆರಳಿದ ಬಿಜೆಪಿ ಪಟಾಲಂ ಅಲ್ಲಿಯೂ ಕೆಲ ಕಾಲ ಚರ್ಚೆ ನಡೆಸಿದರು. ಈ ಸಮಯ ಮಾತನಾಡಿದ ಸಿದ್ದಲಿಂಗಯ್ಯ ಅವರು ಅನಂತ್ಕುಮಾರ್ ಹಗಡೆ ಅವರ ದಲಿತ ವಿರೋಧಿ ಹಾಗೂ ಜಾತ್ಯಾತೀತವಾದಿ ವಿರೋಧಿ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿ, ಅನಂತ್ಕುಮಾರ್ ಹೆಗಡೆ ವಿರುದ್ಧ ಸೂಕ್ತ ಕ್ರಮ ಕೂಗೊಳ್ಳಲು ಮನವಿ ಮಾಡಿದರು ಮತ್ತು ದಲಿತರ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ತಿದ್ದುಪಡಿಯನ್ನು ತರದಂತೆ ಹಾಗೂ ಸುಪ್ರಿಂ ತೀರ್ಪಿನ ವಿರುದ್ಧ ಕೇಂದ್ರ ಹೋರಾಡುವಂತೆ ಮನವಿ ಮಾಡಿದರು.
ಸಿದ್ದಲಿಂಗಯ್ಯ ಅವರು ಅಂಬೇಡ್ಕರ್ ಅವರ ಚಿತ್ರಪಟ ಹಾಗೂ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಪುಸ್ತಕವನ್ನು ಅಮಿತ್ ಶಾ ಅವರಿಗೆ ಉಡುಗೊರೆಯಾಗಿ ನೀಡಿದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ














Click it and Unblock the Notifications