ಘೋರ ರೈಲು ದುರಂತಕ್ಕೆ ಕಂಬನಿ ಮಿಡಿದ ಎಚ್ ಡಿ ಕುಮಾರಸ್ವಾಮಿ
ಅಮೃತಸರ, ಅಕ್ಟೋಬರ್ 20: ಶುಕ್ರವಾರದಂದು ಪಂಜಾಬ್ ನಲ್ಲಿ ರಾವಣ ಪ್ರತಿಕೃತಿ ದಹನದ ವೇಳೆ ಜರುಗಿದ ಘೋರ ರೈಲು ದುರಂತಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಂಭ್ರಮ ಆಚರಣೆಯಲ್ಲಿದ್ದ ಜನರ ಮೇಲೆ ರೈಲು ಹರಿದ ಪರಿಣಾಮ ಹಲವಾರು ಮಂದಿ ಸಾವಿಗೀಡಾಗಿದ್ದರೆ. ಇದು ನನಗೆ ತೀವ್ರ ಆಘಾತವನ್ನುಂಟುಮಾಡಿದೆ. ಈ ಘಟನೆಯಿಂದ ನಾನು ನೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ನನ್ನ ಸಂತಾಪಗಳು ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ಸಾವಿಗೀಡಾದವರ ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಪಂಜಾಬಿನ ಅಮೃತಸರ ರೈಲ್ವೇ ನಿಲ್ದಾಣದ ಸಮೀಪ ಧೋಬಿ ಘಾಟ್ ಪ್ರದೇಶದಲ್ಲಿ ರಾವಣನ ಪ್ರತಿಕೃತಿ ದಹನದ ಸಂದರ್ಭದಲ್ಲಿ ಸಂಭವಿಸಿದ ಘೋರ ರೈಲು ದುರಂತದಲ್ಲಿ 61 ಜನ ಮೃತರಾಗಿದ್ದರು.












Click it and Unblock the Notifications