ಬೀದಿ ನಾಯಿ ಜಗಳಕ್ಕೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅಮಾನತು !
ಬೆಂಗಳೂರು, ಡಿ. 23: ಬೀದಿ ನಾಯಿ ಜಗಳದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸೇವೆಯಿಂದ ವಜಾ ಆಗಿದ್ದಾರೆ. ಬೀದಿ ನಾಯಿಗಳಿಗೆ ಅನ್ನ ಹಾಕುವುದನ್ನು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಮೃತಹಳ್ಳಿ ಪೊಲೀಸ್ ಠಾಣೆ ಎಎಸ್ಐ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.
ಏನಿದು ಘಟನೆ: ಯಲಹಂಕ ನ್ಯೂಟೌನ್ ಪೊಲೀಸ್ ಕ್ವಾಟ್ರಸ್ನಲ್ಲಿರುವ ಬಿ.ಎಚ್. ಚಂದ್ರಶೇಖರ್ ಯಲಹಂಕ ನ್ಯೂ ಟೌನ್ ಸಮೀಪ ನಿಂತಿದ್ದರು. ಈ ವೇಳೆ ಮಹಿಳೆಯೊಬ್ಬಳು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಬೀದಿ ನಾಯಿಗಳಿಗೆ ಊಟ ಹಾಕುವುದನ್ನು ಪ್ರಶ್ನಿಸಿದ ಚಂದ್ರಶೇಖರ್ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನು ಗಮನಿಸಿದ ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ದೂರನ್ನಾಧರಿಸಿ ಮುಖ್ಯ ಪೇದೆ ವಿರುದ್ಧ ಬೆದರಿಕೆ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮಹಿಳೆ ನೀಡಿರುವ ದೂರಿನ ಪ್ರಕಾರ, ಆಕೆ ಮನೆಯಿಂದ ಹೊರ ಬಂದು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಸಮೀಪದಲ್ಲಿ ಚಂದ್ರಶೇಖರ್ ನಿಂತಿದ್ದರು. ರಾತ್ರಿಯಾಗಿದ್ದ ರಿಂದ ಮೊಬೈಲ್ ಟಾರ್ಚ್ ಹಾಕಿ ಆ ವ್ಯಕ್ತಿ ಮಹಿಳೆಯ ದೇಹದ ಮೇಲೆ ಬಿಟ್ಟಿದ್ದಾನೆ. ಅಲ್ಲದೇ ಬೀದಿ ನಾಯಿಗಳಿಗೆ ಊಟ ಹಾಕುವುದರ ಬಗ್ಗೆ ಚಂದ್ರಶೇಖರ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾನು ಪೊಲೀಸ್ ಆಗಿದ್ದು, ನನ್ನನ್ನು ನೀನು ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.
ಇದೇ ವೇಳೆ ಸಮೀಪ ಬಂದ ವ್ಯಕ್ತಿಗೆ ಪೊಲೀಸ್ ವರ್ತನೆ ರೆಕಾರ್ಡ್ ಮಾಡಿಕೊಳ್ಳುವಂತೆ ಮಹಿಳೆ ಸೂಚಿಸಿದ್ದು, ಅದರಂತೆ ರೆಕಾರ್ಡ್ ಮಾಡಿಕೊಂಡಿದ್ದಾಗಿ ವಿವರಿಸಲಾಗಿದೆ. ವಿಡಿಯೋ ಮಾಡಿಕೊಂಡ ಬಳಿಕ ಅದನ್ನು ಡಿಲೀಟ್ ಮಡುವಂತೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಪರಿ ಪರಿ ಬೇಡಿಕೊಂಡಿದ್ದಾರೆ.
ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹಾಕಿ ಘಟನೆ ಬಗ್ಗೆ ವಿವರಿಸಿದ್ದು, ಇದು ವೈರಲ್ ಆಗುತ್ತಿದ್ದಂತೆ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅವರನ್ನು ಅಮಾನತು ಮಾಡಿ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ. ನಾಯಿಗಳಿಗೆ ಊಟ ಹಾಕಿದ್ದನ್ನು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವಿಚಾರದಲ್ಲಿ ಪೊಲೀಸ್ ಅಮಾನತಿಗೆ ಒಳಗಾಗಿದ್ದಾರೆ.
Recommended Video
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications