Amul vs Nandini: ಮೆಟ್ರೋ ನಿಲ್ದಾಣಗಳಲ್ಲಿ 'ಅಮುಲ್' ಮಳಿಗೆ ತೆರವಿಗೆ ಹೆಚ್ಚಾಯ್ತು ಆಗ್ರಹ..
ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ಸರ್ಕಾರ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ 'ಅಮೂಲ್' ಹಾಲಿ ಮಳಿಗೆ (ಕಿಯೋಸ್ಕ್) ತೆರೆಯಲು ಅನುಮತಿ ನೀಡಿದೆ. ಇದರಿಂದ ಸ್ಥಳೀಯ ''ನಂದಿನಿ'' ಹಾಲಿನ ಬ್ರ್ಯಾಂಡ್ಗೆ ಹೊಡೆತ ಬೀಳುವ ಜೊತೆಗೆ ರೈತರಿಗೆ ಅನ್ಯಾಯವಾಗಲಿದೆ ಎಂದು ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಆಮ್ ಆದ್ಮಿ ಪಕ್ಷವು ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೆಟ್ರೋ ನಿಲ್ದಾಣಗಳಲ್ಲಿ 'ಅಮುಲ್' ಮಾರಾಟಕ್ಕೆ ಅವಕಾಶ ಬೇಡ ಎಂದು ಒತ್ತಾಯಿಸಿದೆ.
ಕರ್ನಾಟಕ ರಾಜ್ಯದ ರೈತರುಗಳ ಹಾಗೂ ಸಮಸ್ತ ಕನ್ನಡಿಗರ ಹೆಮ್ಮೆಯ ನಂದಿನಿ ಉತ್ಪನ್ನಗಳಿಗೆ ಸೆಡ್ಡು ಹೊಡೆಯಲು ಹಿಂಭಾಗಲಿನಿಂದ ಪ್ರವೇಶ ಮಾಡುತ್ತಿರುವ ಅನ್ಯ ರಾಜ್ಯದ ಅಮುಲ್ ಹಾಲು ಉತ್ಪನ್ನಗಳನ್ನು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಟ್ಟಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕನ್ನಡಿಗರ ಆಕ್ರೋಶಕ್ಕೆ ತುತ್ತಾಗುವ ಮೊದಲೇ ಮೆಟ್ರೋ ನಿಗಮದವರು ಕೂಡಲೇ ಅಮುಲ್ ಉತ್ಪನ್ನಗಳನ್ನು ತೆರವುಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಹೇಳಿದರು.

1 ಕೋಟಿ ಲೀಟರ್ ಹಾಲು ಮಾರಾಟ: ಸಿಎಂಗೆ ಎಎಪಿ ಪ್ರಶ್ನೆ
ಮುಖ್ಯಮಂತ್ರಿ ಸಿದ್ದರಾಮಯ್ಯ 1 ಕೋಟಿ ಲೀಟರ್ ನಂದಿನಿ ಹಾಲಿನ ಮಾರಾಟವನ್ನು ಹೆಚ್ಚಳ ಮಾಡುತ್ತೇವೆಂದು ಒಂದು ಕಡೆ ಹೇಳಿದರೆ ಮತ್ತೊಂದು ಕಡೆ ಹಿಂಬಾಗಿಲಿನಿಂದ ಅನ್ಯ ರಾಜ್ಯದ ಹಾಲು ಹಾಗೂ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ. ಅನವಶ್ಯಕ ಪೈಪೋಟಿಗೆ ಕಾರಣವಾಗಿರುವುದು ಇವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿ ಎಂದು ಅವರು ದೂರಿದರು.
ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದ ರೈತರಗಳು ಮುಂದಿನ ದಿವಸಗಳಲ್ಲಿ ರಾಜ್ಯದ ಬಡ ರೈತರು ತಾವು ಪ್ರತಿ ದಿವಸ ಉತ್ಪಾದಿಸುವ ಹಾಲಿನ ಸಮೇತ ಬೀದಿಗೆ ಬೀಳುವ ಪರಿಸ್ಥಿತಿಗೆ ತಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ದೂಷಿಸಿದರು.

ಬೆಂಗಳೂರು ನಮ್ಮ ಮೆಟ್ರೋ ಅಧಿಕಾರಿಗಳು ತಮ್ಮ ವ್ಯಾಪಾರಿ ಬುದ್ಧಿಯನ್ನು ಬದಿಗೊತ್ತಿ ಕನ್ನಡಿಗರ ಹಾಗೂ ರಾಜ್ಯದ ರೈತರುಗಳ ಅಸ್ಮಿತೆಯನ್ನು ಪ್ರಶ್ನಿಸುವಂತಹ ಇಂತಹ ಕುಕೃತ್ಯಗಳಿಗೆ ಕೈ ಹಾಕಿದಲ್ಲಿ ಆಮ್ ಆದ್ಮಿ ಪಕ್ಷ ರಾಜ್ಯದ ರೈತರುಗಳ ಸಮೇತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅನಿಲ್ ನಾಚಪ್ಪ ಅವರು ಎಚ್ಚರಿಕೆ ನೀಡಿದರು.
ಡಿಕೆ ಶಿವಕುಮಾರ್ ಹೇಳಿದ್ದೇನು?
'ಅಮುಲ್' ಮಳಿಗೆಗೆ ವಿರುದ್ಧದ ಆಕ್ಷೇಪ ಕುರಿತು ಮಾತನಾಡಿದ ಡಿಕೆ ಶಿವಕುಮಾರ್ ಅವರು, ಕೇವಲ ಎರಡು ಕಡೆ 'ಅಮುಲ್' ಮಳಿಗೆಗೆ ಅವಕಾಶ ನೀಡಲಾಗಿದೆ. ಉಳಿದಂತೆ ಎಂಟು ಕಡೆಗಳಲ್ಲಿ ನಂದಿನ ಬ್ರ್ಯಾಂಡ್ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹೀಗಿದ್ದರೂ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications