ತನ್ನ ಉಳಿತಾಯದ ಹಣವನ್ನು ಕೊರೊನಾ ಪರಿಹಾರಕ್ಕೆ ನೀಡಿದ ವಿದ್ಯಾರ್ಥಿನಿ
ಬೆಂಗಳೂರು, ಮಾರ್ಚ್ 23: ತಾನು ಉಳಿತಾಯ ಮಾಡಿದ ಹಣವನ್ನು ಕೊರೊನಾ ವೈರಸ್ ತಡೆಗೆ ಬಳಸಿಕೊಳ್ಳುವಂತೆ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬರು ಸರ್ಕಾರಕ್ಕೆ ನೀಡಿದ್ದಾರೆ. ವಿದ್ಯಾರ್ಥಿನಿಯ ಈ ಕೆಲಸ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
ಅಮೂಲ್ಯ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾದಿಂದ ರಾಜ್ಯದಲ್ಲಿ ಆಗುತ್ತಿರುವ ಪರಿಸ್ಥಿತಿಯನ್ನು ಗಮನಿಸಿದ ಅಮೂಲ್ಯ ತನ್ನ ಕೈಲಾದ ನೆರವು ನೀಡಬೇಕು ಎಂದು ಮುಂದೆ ಬಂದಿದ್ದಾರೆ. 1 ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.
ಕೋವಿಡ್19ಗಾಗಿ ಕ್ರಮ: ಫುಲ್ ಶಟ್ ಡೌನ್, 30 ಫೀವರ್ ಕ್ಲಿನಿಕ್ ಸ್ಥಾಪನೆ
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ''ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅಮೂಲ್ಯ ತಾನು ಉಳಿತಾಯ ಮಾಡಿದ್ದ 1 ಲಕ್ಷ ರೂಪಾಯಿಗಳನ್ನು COVID19 ಪರಿಹಾರಕ್ಕೆ ನೀಡಿದ್ದಾರೆ. ಆಕೆಯ ನಿಸ್ವಾರ್ಥತೆ, ಮಾನವೀಯತೆ, ದಯೆ ನಿಜವಾಗಿಯೂ ಬೆರಗುಗೊಳಿಸುವಂತದ್ದು. ನಿಮ್ಮ ಕೊಡುಗೆಯನ್ನು ಸ್ವೀಕರಿಸಿದ್ದಕ್ಕಾಗಿ ನಾವು ಆಭಾರಿಯಾಗಿದ್ದೇವೆ.'' ಎಂದು ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಅಮೂಲ್ಯ ಹಣ ನೀಡಿದ್ದಾರೆ. ಈ ವೇಳೆ ಆರೋಗ್ಯ ಸಚಿವ ಶ್ರೀರಾಮುಲು, ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಜೊತೆಗಿದ್ದರು.
ಕೊರೊನಾ ಭಯ: ಅಧಿವೇಶನ ಮುಂದೂಡಲು ಶಾಸಕರ ಆಗ್ರಹ
''ನಾವೆಲ್ಲರೂ ದಯವಿಟ್ಟು ಮನೆಯಲ್ಲಿಯೇ ಇದ್ದು, ಈ ರೋಗದ ವಿರುದ್ದ ಒಟ್ಟಾಗಿ ಹೋರಾಡೋಣ'' ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.