ವಿಜಯದ ಸಂಕೇತ ತೋರಿಸಿದ ಅಮೂಲ್ಯ ಲಿಯೋನಾ
ಬೆಂಗಳೂರು, ಫೆಬ್ರವರಿ 21: ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶದ್ರೋಹದ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ಲಿಯೋನಾ ಜೈಲಿಗೆ ಕರೆದೊಯ್ಯುವ ವೇಳೆ ವಿಜಯದ ಸಂಕೇತ ತೋರಿಸಿದ್ದಾಳೆ.
ಅಮೂಲ್ಯ ವಿರುದ್ಧ ಉಪ್ಪಾರಪೇಟೆ ಠಾಣೆ ಪೊಲೀಸರು ಆಕೆಯ ಹೇಳಿಕೆಯ ವಿಡಿಯೋ ಆಧಾರದಲ್ಲಿ ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲಿಸಿದ್ದರು. ಆಕೆಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ಐದನೇ ಎಸಿಎಂಎಂ ನ್ಯಾಯಾಲಯ ಆಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯಾಯಾಂಗ ಬಂಧನಕ್ಕೆ ಒಳಗಾದ ಅಮೂಲ್ಯಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುವ ವೇಳೆ ವಿಜಯದ ಸಂಕೇತವನ್ನು ತೋರಿಸಿದ್ದಾಳೆ. ಅಮೂಲ್ಯಳನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಿದ್ದಾಳೆ ಎಂದೆನಿಸುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ಹೇಳಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಯ ಕಾರ್ಯಕ್ರಮ ಆಯೋಜಿಸಿದ್ದ ಹಾಗೂ ಅಮೂಲ್ಯ ಲಿಯೋನಾಗೆ ಭಾಷಣ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಹಾಗೂ ಅನೇಕರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.
ಅಮೂಲ್ಯ ಅವರು ಏಕೆ ಈ ರೀತಿ ಮಾತನಾಡಿದ್ದಾರೆಂದು ಗೊತ್ತಾಗುತ್ತಿಲ್ಲ. ಒಳ್ಳೆ ರೀತಿಯಲ್ಲಿ ಶಾಂತಿಯುತವಾಗಿ ಸಾವಿರಾರು ಸಂಖ್ಯೆಯ ಜನರಿಂದ ಪ್ರತಿಭಟನೆ ನಡೆಯುತ್ತಿತ್ತು. ಯಾವುದೇ ಕಾನೂನನ್ನು ಉಲ್ಲಂಘನೆ ಮಾಡದೆ, ಸಿಎಎ ಮತ್ತು ಎನ್ಆರ್ಸಿ ಹೇಗೆ ಸಂವಿಧಾನ ವಿರೋಧಿಗಳಾಗಿವೆ ಎಂದು ಹೋರಾಟ ಮಾಡುತ್ತಿದ್ದೆವು. ನಾನಂತೂ ಅಮೂಲ್ಯಗೆ ಆಹ್ವಾನ ನೀಡಿಲ್ಲ. ಆಕೆ ಮಾತಿಗೆ ನಿಂತಿದ್ದು ನನಗೇ ತಿಳಿದಿರಲಿಲ್ಲ. ಆಕೆ ಪರಿಚಯವಿರುವ ಯುವತಿ. ಈ ಘಟನೆ ಬಗ್ಗೆ ನಾನೇ ದೂರು ನೀಡಿದ್ದೇನೆ. ಇದರ ಹಿಂದೆ ಯಾರದ್ದಾದರೂ ಕೈವಾಡ ಇದೆಯೇ ಅಥವಾ ಆಕೆಯೇ ಹೀಗೆ ಮಾಡಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳಬೇಕಿದೆ ಎಂದು ಇಮ್ರಾನ್ ಪಾಷಾ ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications