ಬೆಂಗಳೂರು: ತಾಯಿ ಮಲಗಿದ್ದಾರೆ ಎಂದು ಆಕೆಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ
ತನ್ನ ಅಮ್ಮ ಕೋಪಗೊಂಡಿದ್ದರಿಂದ ನನ್ನ ಜೊತೆ ಮಾತನಾಡುತ್ತಿಲ್ಲ. ಹೀಗಾಗಿ ಮಲಗಿದ್ದಾರೆ ಎಂದು ತಿಳಿದ ಬಾಲಕ ಸುಮ್ಮನೆ ಎರಡು ದಿನ ಅದೇ ಮನೆಯಲ್ಲಿ ಕಾಲು ಕಳೆದಿದ್ದಾನೆ.
ಬೆಂಗಳೂರು, ಮಾರ್ಚ್ 02: ರಾಜಧಾನಿಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ 11 ವರ್ಷದ ಬಾಲಕ ತನ್ನ ಮೃತ ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಘಟನೆ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಬಾಲಕನಿಗೆ ತನ್ನ ತಾಯಿ ಸತ್ತಿರುವುದು ತಿಳಿದಿರಲಿಲ್ಲ.
ತನ್ನ ಅಮ್ಮ ಕೋಪಗೊಂಡಿದ್ದರಿಂದ ನನ್ನ ಜೊತೆ ಮಾತನಾಡುತ್ತಿಲ್ಲ. ಹೀಗಾಗಿ ಮಲಗಿದ್ದಾರೆ ಎಂದು ತಿಳಿದ ಬಾಲಕ ಸುಮ್ಮನೆ ಎರಡು ದಿನ ಅದೇ ಮನೆಯಲ್ಲಿ ಕಾಲು ಕಳೆದಿದ್ದಾನೆ. 44 ವರ್ಷ ಅಣ್ಣಮ್ಮ ಅವರು ಫೆ.26 ರಂದು ಶುಗರ್ ಹಾಗೂ ರಕ್ತದೊತ್ತಡ ಕಡಿಮೆಯಾಗಿ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದರು. ಆಕೆ ಮಲಗಿದ್ದಾಗಲೇ ಮೃತಪಟ್ಟಿದ್ದರಿಂದ ತಾಯಿ ಇಡೀ ಹೊತ್ತು ಮಲಗಿದ್ದಾರೆ ಎಂದು ಮಗ ಭಾವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಣ್ಣಮ್ಮ ಅವರ ಪತಿ ಒಂದು ವರ್ಷದ ಹಿಂದೆ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಆರ್.ಟಿ.ನಗರ ಠಾಣೆ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಗಂಗಮ್ಮ ದೇವಸ್ಥಾನ ಬಳಿ ಇರುವ ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರ ವಾಸಿಸುತ್ತಿದ್ದರು. ಈ ಎರಡು ದಿನ ಬಾಲಕ ಮನೆಯಿಂದ ಹೊರಗೆ ಬಂದು ಹೊರಗೆ ತನ್ನ ಸ್ನೇಹಿತರೊಂದಿಗೆ ಆಟವಾಡಿ ಮನೆಗೆ ಹಿಂತಿರುಗುತ್ತಿದ್ದನು. ತನ್ನ ಸ್ನೇಹಿತನ ಮನೆಯಲ್ಲಿ ಊಟ ಮಾಡುತ್ತಿದ್ದರು.
ಎರಡು ದಿನ ಈ ರೀತಿ ಮಾಡುತ್ತಿದ್ದ ಬಾಲಕ, ಫೆ. 28 ರಂದು ತನ್ನ ತಾಯಿ ಅಣ್ಣಮ್ಮ ತನ್ನೊಂದಿಗೆ ಎರಡು ದಿನದಿಂದ ಮಾತನಾಡದಿರುವ ಬಗ್ಗೆ ತಂದೆಯ ಸ್ನೇಹಿತರಿಗೆ ತಿಳಿಸಿದ್ದಾನೆ. ಏನೋ ಆಗಿದೆ ಎಂದು ತಿಳಿದ ಅವರು ತಕ್ಷಣ ಮನೆಗೆ ಬಂದು ಪರಿಶೀಲಿಸಿದಾಗ ಅಣ್ಣಮ್ಮ ಮೃತಪಟ್ಟಿರುವುದು ಗೊತ್ತಾಗಿದೆ. ಆರ್.ಟಿ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications