ಕರ್ನಾಟಕದಲ್ಲಿ ದುರಾಡಳಿತದಿಂದ ಬೇಸತ್ತ ಜನರಿಗೆ ಕಾಂಗ್ರೆಸ್ ಮೇಲೆ ಒಲವು: ಶಶಿ ತರೂರ್ ವಿಶ್ವಾಸ
ಬೆಂಗಳೂರು, ಏಪ್ರಿಲ್ 09: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕಳೆದ ನಾಲ್ಕು ವರ್ಷಗಳನ್ನು ರಾಜ್ಯದ ಜನರು ದುರಾಡಳಿತವನ್ನು ನೋಡಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಪರ್ಯಾಯವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ತಿಳಿಸಿದರು.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದುರಾಡಳಿತ ಇದ್ದಾಗ ಜನರು ಅಭಿವೃದ್ಧಿ ನೋಡಲು ಹೇಗೆ ಸಾಧ್ಯ. ಜನರು ಅನಿವಾರ್ಯವಾಗಿ ಪರ್ಯಾಯ ಸರ್ಕಾರ ಬೇಕು ಎಂದು ನಿಶ್ಚಯಿಸಿದ್ದಾರೆ ಎಂದರು.

ಈ ಹಿಂದಿನ 4 ವರ್ಷಗಳಲ್ಲಿ ಕರ್ನಾಟಕದ ಜನರು ದುರಾಡಳಿತ ನೋಡಿದ್ದಾರೆ. ಈ ಮೂಲಕ ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ನೋಡಲು ಬಯಸಿದ್ದಾರೆ. ಬಿಜೆಪಿ ಸರ್ಕಾರದಿಂದ ಜನರ ಅಗತ್ಯತೆಗಳನ್ನು ಈಡೇರಿಸಲಾಗಿಲ್ಲ. ಜನರ ಅಗತ್ಯಗಳನ್ನು ಈಡೇರಿಸಲು ಕಾಂಗ್ರೆಸ್ ಈಗಾಗಲೇ ನಿರ್ದಿಷ್ಟ ಭರವಸೆಗಳನ್ನು ನೀಡಿದೆ ಎಂದು ಅವರು ಹೇಳಿದರು.
ಕಳೆದ 3-4 ವರ್ಷಗಳಿಂದ ರಾಜ್ಯದಲ್ಲಿ ಐಟಿ ಹೂಡಿಕೆ ಕುಸಿಯುತ್ತಿದೆ ಎಂದು ಅವರು ಆರೋಪಿಸಿದರು. ಬಹಳ ಶಕ್ತಿ ಸಾಮರ್ಥ್ಯದ ಬೆಂಗಳೂರಿಗೆ ಕೆಲವು ವರ್ಷಗಳ ಹಿಂದೆ ಐಟಿ ಹೂಡಿಕೆಗೆ ಹೆಚ್ಚು ಒಲವು ತೋರಿದ ನಗರವಾಗಿತ್ತು. ಆದರೆ ಕಳೆದ 3-4 ವರ್ಷಗಳಿಂದ ಹೂಡಿಕೆಗಳು ಕುಸಿಯುತ್ತಿದೆ. ಇದು ಕಳವಳಕಾಯಿ ಸಂಗತಿ ಎಂದು ಅವರು ವಿಷಾಧಿಸಿದರು.
ಕಾಂಗ್ರೆಸ್ನಿಂದ 58 ಸ್ಥಾನದ ಹೆಸರು ಪ್ರಕಟ ಬಾಕಿ
ಹಿಂಡೆನ್ಬರ್ಗ್-ಅದಾನಿ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯ ಅಗತ್ಯವಿಲ್ಲ ಎಂದು ಶರದ್ ಪವಾರ್ ಹೇಳಿಕೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು. ಆಡಳಿತ ಪಕ್ಷವು ಶೇಕಡಾ 50 ರಷ್ಟು ಬಹುಮತ ಹೊಂದಿದೆ. ಎನ್ಸಿಪಿ ಮುಖ್ಯಸ್ಥರ ತರ್ಕವನ್ನು ಅರ್ಥಮಾಡಿಕೊಳ್ಳಬಹುದು ಎಂದರು.
ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆ ಭಾನುವಾರ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕರ್ನಾಟಕ ಚುನಾವಣೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಗೆ ಕುರಿತು ವರಿಷ್ಠರ ಸಭೆ ನಡೆಯಲಿದೆ.
ಈ ಸಭೆಯಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಇನ್ನೂ 58 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದು ಬಾಕಿ ಇದೆ.
ಕಾಂಗ್ರೆಸ್ ಮಾರ್ಚ್ 25 ರಂದು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರಿತ್ತು.

ಸ್ಥಳೀಯರಲ್ಲಿ ಭಿನ್ನಾಭಿಪ್ರಾಯ: ಕೋಲಾರದಿಂದ ಹಿಂದೆ ಸರಿದ ಸಿದ್ದು
ಕರ್ನಾಟಕದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13 ರಂದು ಮತ ಎಣಿಕೆ ಜರುಗಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಕನಕಪುರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಮನಸ್ಸು ಮಾಡಿದ್ದಾರೆ. ಆದರೆ ಅದು ಕ್ಷೇತ್ರದ ಸ್ಥಳೀಯ ಮುಖಂಡರ ನಡುವೆ ಭಿನ್ನಾಭಿಪ್ರಾಯ ಮೂಡಿಸಿತು. ಹೀಗಾಗಿ ಆ ನಿರ್ಧಾರ ಕೂ ಬಿಡುವಂತೆ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಕೋಲಾರ ಗೋಲ್ಡ್ ಫೀಲ್ಡ್ ಕ್ಷೇತ್ರದಿಂದ ಎಂ ರೂಪಕಲಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಕರ್ನಾಟಕದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿ (ಎಸ್) ಪ್ರಚಾರ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ಗೆ ಬಹುಮತ ಸಿಗಲಿದೆ, ಬಿಜೆಪಿ ಮತ್ತು ಜೆಡಿಎಸ್ ಮೂಲೆಗುಂಪಾಗಲಿವೆ ಎಂದು ಅವರು ಭವಿಷ್ಯ ನುಡಿದರು.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ











Click it and Unblock the Notifications