KGF Babu : ಐಟಿ ದಾಳಿ ಬೆನ್ನಲ್ಲೇ ಕೆಜಿಎಫ್ ಬಾಬುಗೆ ಮತ್ತೊಂದು ಶಾಕ್: ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
ಐಟಿ ದಾಳಿಯ ಬೆನ್ನಲ್ಲೇ ಸಾವಿರಾರು ಕೋಟಿಯ ಒಡೆಯ ಕಾಂಗ್ರೆಸ್ನ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದಾಳಿ ವೇಳೆ ಮನೆಯಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾದ ಹಿನ್ನಲೆಯಲ್ಲಿ ಅವರ ವಿರುದ್ಧ ಬೆಂಗಳೂರು ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ಚುನಾವಣೆ ಸಮೀಪವಾಗುತ್ತಿರುವ ಹಿನ್ನಲೆಯಲ್ಲಿ ಐಟಿ ಅಧಿಕಾರಿಗಳು ದಾಳಿಗೆ ಇಳಿದಿದ್ದಾರೆ. ಹಲವು ದಿನಗಳಿಂದ ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೆಲವು ರಾಜಕೀಯ ಮುಂಖಡರ ಮನೆ, ಕಚೇರಿಗಳ ಮೇಲೆ ದಾಳಿ ನಡೆಯುತ್ತಿದೆ. ಬುಧವಾರ ಬೆಂಗಳೂರಿನಲ್ಲಿರುವ ಕೆಜಿಎಫ್ ಬಾಬು ನಿವಾಸದ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಐಟಿ ದಾಳಿ ಸಂದರ್ಭದಲ್ಲಿ ಕೆಜಿಎಫ್ ಬಾಬು ಮನೆಯ ಮೊದಲ ಮಹಡಿಯ ಕೊಠಡಿಯಲ್ಲಿ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು ಎಂದು ಹೇಳಲಾಗಿದೆ. ಎಲ್ಲಾ ವೋಟರ್ ಐಡಿಗಳಿಗೆ ಹೆಚ್ಡಿಎಫ್ಸಿ ಬ್ಯಾಂಕ್ನ 5000 ರುಪಾಯಿ ಮೌಲ್ಯದ ಚೆಕ್ಗಳನ್ನು ಲಗತ್ತಿಸಲಾಗಿತ್ತು. ನೆಲ ಮಹಡಿಯಲ್ಲಿ 26 ಬ್ಯಾಗ್ಗಳಲ್ಲಿ ಸೀರೆಗಳನ್ನು ಸಂಗ್ರಹಿಸಿ ಇಡಲಾಗಿತ್ತು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮುದ್ರಣ ಪ್ರತಿಗಳು ಮತ್ತು 481 ದುಬಾರಿ ಬೆಲೆಯ ಸೂಟ್ಗಳು ಕೂಡ ಪತ್ತೆಯಾಗಿದ್ದವು.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ
ದಾಳಿ ವೇಳೆ ಮನೆಯಲ್ಲಿ ಇಷ್ಟೆಲ್ಲಾ ಪತ್ತೆಯಾಗಿರುವುದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಶಿವಾಜಿನಗರದ ಚುನಾವಣಾ ಉಸ್ತುವಾರಿ ಅಧಿಕಾರಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೆಜಿಎಫ್ ಬಾಬು ವಿರುದ್ಧ ದೂರು ನೀಡಿದ್ದಾರೆ. ಕೆಜಿಎಫ್ ಬಾಬು ವಿರುದ್ಧ ಜನ ಪ್ರತಿನಿಧಿ 1951 1989 ಕಾಯ್ದೆ ಅಡಿ ಕೇಸ್ ದಾಖಲಾಗಿದೆ.
ಕೆಜಿಎಫ್ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಉತ್ಸಾಹದಲ್ಲಿದ್ದರು. ಟಿಕೆಟ್ ಘೋಷಣೆಯಾಗುವ ಮುನ್ನವೇ ತಾನೇ ಕಾಂಗ್ರೆಸ್ ಅಭ್ಯರ್ಥಿ ಎನ್ನುವಂತೆ ಬಿಂಬಿಸಿಕೊಂಡಿದ್ದ ಅವರು ಕ್ಷೇತ್ರದಲ್ಲಿ ಪ್ರಚಾರ ಕೂಡ ಮಾಡುತ್ತಿದ್ದರು. ಆದರೆ, ಕಾಂಗ್ರೆಸ್ ಹೈ ಕಮಾಂಡ್ ಕೆಜಿಎಫ್ ಬಾಬು ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಕೆಜಿಎಫ್ ಬಾಬು ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ.
ಕೆಜಿಎಫ್ ಬಾಬು ಅವರ ಪತ್ನಿ 37 ವರ್ಷದ ಶಾಝಿಯಾ ತರನ್ನುಮ್ ಅವರು 2023ರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.1,622 ಕೋಟಿ ರುಪಾಯಿ ಆಸ್ತಿ ಹೊಂದಿರುವುದಾಗಿ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications