ನ.18ಕ್ಕೆ ಕೆ.ಎಸ್.ನ.ಟ್ರಸ್ಟ್ ನಿಂದ ಕವಿಪತ್ನಿ ದಿನಾಚರಣೆ: ವಿಭಿನ್ನ ಕಾರ್ಯಕ್ರಮ
ಕನ್ನಡ ಭಾಷೆಯ ಸೊಗಡನ್ನು ಪರಿಚಯಿಸಿದ, ಅದರ ಹಿರಿಮೆಯನ್ನು ಉತ್ತುಂಗಕ್ಕೇರಿಸಿದ ಹಲವು ಕವಿ, ಸಾಹಿತಿಯರು ಕರ್ನಾಟಕದ ಮಣ್ಣಲ್ಲಿ ತಮ್ಮ ಅಮೂಲ್ಯ ಬದುಕ್ನು ಸವೆಸಿ ಹೋಗಿದ್ದಾರೆ. ಕನ್ನಡ ಭಾಷಾ ಸಂಪತ್ತನ್ನು ಶ್ರೀಮಂತವಾಗಿಸುತ್ತಿರುವ ಕವಿಗಳು ಈಗಲೂ ಹಲವರಿದ್ದಾರೆ. ಆದರೆ ಆ ಎಲ್ಲ ಕವಿಗಳಿಗೆ ಬೆನ್ನೆಲುಬಾಗಿ ನಿಂತು, ಅಡಿಗಡಿಗೆ ಪ್ರೋತ್ಸಾಹ ನೀಡಿ, ಅವರ ಸಾಧನೆಯ ಪಾಲುದಾರರಾದ ಎಷ್ಟೋ ಕವಿಯರ ಪತ್ನಿಯರ ಪರಿಚಯ ಮಾತ್ರ ಯಾರಿಗೂ ಇಲ್ಲ!
ಪ್ರಸಿದ್ಧ ಕವಿಗಳ ಸಾಹಿತ್ಯ ಬದುಕಿಗೆ ಮಾರ್ಗದರ್ಶಿಗಳಾದ, ಸ್ಫೂರ್ತಿಯಾದ ಕವಿಪತ್ನಿಯರಿಗೆ ಗೌರವ ನೀಡುವ ವಿನೂತ ನಾರ್ಯಕ್ರಮವೊಂದನ್ನು ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ಆರಂಭಿಸಿದೆ. ಕವಿಪತ್ನಿಯರಿಗೆ ಪ್ರತಿವರ್ಷ, ವೆಂಕಮ್ಮ ಕೆ.ಎಸ್.ನರಸಿಂಹಸ್ವಾಮಿ ನೆನಪಿನ 'ನಿನ್ನೊಲುಮೆಯಿಂದಲೇ' ಗೌರವವನ್ನು ನೀಡಿ ಸನ್ಮಾನಿಸುವ ಯೊಜನೆ ಹಮ್ಮಿಕೊಳ್ಳಲಾಗಿದೆ. ದಾಂಪತ್ಯ ಕವಿ.ಕೆ.ಎಸ್.ನ. ಅವರ ಪತ್ನಿ ವೆಂಕಮ್ಮ ಅವರ ಜನ್ಮದಿನದಂದು ಈ ಗೌರವ ಪ್ರದಾನ ಕಾರ್ಯಕ್ರಮವಿರುತ್ತದೆ. ಈ ಗೌರವವನ್ನು ಈ ಬಾರಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ, ಕವಿ ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮಾ ಚಂದ್ರಶೇಖರ ಕಂಬಾರರಿಗೆ ನೀಡಲಾಗುತ್ತಿದೆ.

ನವೆಂಬರ್ 18 ರಂದು, ಶನಿವಾರ ಸಂಜೆ 5:30 ಕ್ಕೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಎನ್ ಎನ್ ಮಲ್ಟಿಮೀಡಿಯಾ ಹಾಲ್ ನಲ್ಲಿ 'ನಿನ್ನೊಲುಮೆಯಿಂದಲೇ...' ಗೌರವ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್(ರಿ.) ಅಧ್ಯಕ್ಷರಾದ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ವಿಮರ್ಶಕಿ ಎಂ.ಎಸ್.ಆಶಾದೇವಿ, ಎಂ.ವಿ.ವೆಂಕಟೇಶಮೂರ್ತಿ ಉಪಸ್ಥಿತರಿರುತ್ತಾರೆ.

ಕೆ.ಎಸ್.ನರಸಿಂಹಸ್ವಾಮಿ ಅವರ ಮೊಮ್ಮಗಳಾದ ಡಾ.ಮೇಖಲಾ ವೆಂಕಟೇಶ್ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ಅನುಶ್ರೀ, ಹೇಮಾ ಎಂಬುವವರು ಕೆ.ಎಸ್.ನ. ಅವರ ಪದ್ಯಗಳನ್ನು ಹಾಡಲಿದ್ದಾರೆ.
ದಾಂಪತ್ಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಬದುಕಿಗೆ ಸ್ಫೂರ್ತಿಯಾದ, ಅವರ ಬಹುಪಾಲು ಕವನಗಳಲ್ಲಿ ಬರುವ ಪಾತ್ರವಾದ ಅವರ ಪತ್ನಿ ವೆಂಕಮ್ಮ ಅವರ ಜನ್ಮದಿನದ ನಿಮಿತ್ತ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ











Click it and Unblock the Notifications