ಪರಪ್ಪನ ಅಗ್ರಹಾರದಲ್ಲಿ ಮತ್ತೆ ಶುರು ವರ್ಗಾವಣೆ ಪರ್ವ!
ಬೆಂಗಳೂರು, ಜುಲೈ 20: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಪರಪ್ಪನ ಅಗ್ರಹಾರದ ಅಧೀಕ್ಷಕಿ ಯಾಗಿದ್ದ ಡಾ.ಆರ್ ಅನಿತಾ ಅವರನ್ನು ಇಂದು(ಜುಲೈ 20) ಧಾರವಾಡಕ್ಕೆ ವರ್ಗಾವಣೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿದ್ದ ಕೃಷ್ಣ ಕುಮಾರ್ ಅವರನ್ನು ಕಲಬುರ್ಗಿಗೆ ವರ್ಗಾವಣೆ ಮಾಡಲಾಗಿದೆ.

ಕಲಬುರ್ಗಿ ಕಾರಾಗೃಹದ ಮುಖ್ಯ ಅಧೀಕ್ಷಕ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರದ ಜೈಲು ಮುಖ್ಯ ಅಧೀಕ್ಷಕರಾಗಿ ನೇಮಕ ಮಾಡಲಾಗಿದೆ.ಪರಪ್ಪನ ಅಗ್ರಹಾರದಲ್ಲಿ ಅಕ್ರಮ ನಡೆಯುತ್ತಿದೆ, ತಮಿಳುನಾಡಿನ ಶಶಿಕಲಾ ನಟರಾಜನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ, ಅದಕ್ಕೆಂದು ಶಶಿಕಲಾ ಶಶಿಕಲಾ ನಟರಾಜನ್ 2 ಕೋಟಿ ರೂ.ಲಂಚ ನೀಡಿದ್ದಾರೆಂದು ವರದಿ ನೀಡಿದ್ದ ಡಿಐಜಿ(ಕಾರಾಗೃಹ) ಡಿ.ರೂಪಾ ಅವರ ವರದಿಯಿಂದಾಗಿ ಇರಿಸು ಮುರಿಸುಂಟಾಗಿ ಜುಲೈ 17 ರಂದು ರೂಪಾ ಡಿ. ಮತ್ತು ಡಿಜಿಪಿ ಸತ್ಯನಾರಾಯಣರಾವ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
ಈ ಸಂದರ್ಭದಲ್ಲೆ ಕೃಷ್ಣ ಕುಮಾರ್ ಅವರನ್ನೂ ವರ್ಗಾವಣೆ ಮಾಡಿದ್ದ ಸರ್ಕಾರ, ಅವರಿಗೆ ಯಾವುದೇ ಸ್ಥಳ ನಿಯುಕ್ತಿಗೊಳಿಸಿರಲಿಲ್ಲ. ಇದೀಗ ಅವರನ್ನು ಕಲಬುರ್ಗಿ ಕಾರಗೃಹ ಮುಖ್ಯ ಅಧೀಕ್ಷಕರಾಗಿ ವರ್ಗಾವಣೆ ಮಾಡಿದೆ.
ಹಾಗೆಯೇ, ಪರಪ್ಪನ ಅಗ್ರಹಾರದ ಅವ್ಯವಹಾರ ಆರೋಪದಲ್ಲಿ ಇಲ್ಲಿನ ಅಧೀಕ್ಷಕಿ ಡಾ.ಆರ್ ಅನಿತಾ ಅವರ ಹೆಸರೂ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಬೇಕೆಂದು ಇಲ್ಲಿನ ಖೈದಿಗಳೇ ಒತ್ತಾಯಿಸಿದ್ದರು. ಆದ್ದರಿಂದಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಧಾರವಾಡ ಜೈಲಿನ ಅಧೀಕ್ಷಕ ಪಿ.ಎಸ್. ರಮೇಶ್ ಅವರನ್ನು ಅನಿತಾ ಅವರ ಸ್ಥಾನಕ್ಕೆ ವರ್ಗಾವಣೆ ಮಾಡಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications