ಮಗು ಸ್ಥಿತಿ ಚಿಂತಾಜನಕ: ಅನೇಸ್ತೇಶಿಯಾ ಎಡವಟ್ಟು?

ಗುರಪ್ಪನಪಾಳ್ಯ ನಿವಾಸಿ ಮುದಾಸಿರ್ ಪಾಷಾ ಹಾಗೂ ಬಸೀರಾ ದಂಪತಿಯ ಮೂರೂವರೆ ವರ್ಷದ ಹೆಣ್ಣು ಮಗು ಮರಿಯಮ್ ಕೌಸರ್ ಡಿ. 13ರಂದು ಆಟವಾಡುವಾಗ ಬಿದ್ದು ಎಡಗೈ ಮೂಳೆ ಮುರಿದಿತ್ತು. ಅದಾಗುತ್ತಿದ್ದಂತೆ ಮಗುವನ್ನು ನಗರದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅಸ್ವಸ್ಥಗೊಂಡ ಮಗುವನ್ನು, ಜಯನಗರದ ಮಾಲತಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಈ ನಡುವೆ ಸಂಜಯ್ ಗಾಂಧಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ವೇಳೆ ಅತಿಯಾಗಿ ಅರಿವಳಿಕೆ ನೀಡಿದ್ದರಿಂದ ಮಗು ಕೋಮಾ ಸ್ಥಿತಿಗೆ ತಲುಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. 'ಡಿ. 16ರಂದು ಮಗುವನ್ನು ಪರೀಕ್ಷಿಸಿದ ವೈದ್ಯರು ಮೂಳೆ ಜರುಗಿದ್ದು, ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ಹೇಳಿದರು. ಆದಿನ ಬೆಳಗ್ಗೆ 8.30ರ ಸುಮಾರಿಗೆ ತುರ್ತು ನಿಗಾ ಘಟಕಕ್ಕೆ ಮಗುವನ್ನು ಕರೆದೊಯ್ದ ವೈದ್ಯರು ಸಂಜೆ 3.30ರವರೆಗೆ ಮಗುವನ್ನು ತೋರಿಸಲಿಲ್ಲ.
ಈ ಬಗ್ಗೆ ಪ್ರಶ್ನಿಸಿದಾಗ ಅರಿವಳಿಕೆ ನೀಡಿರುವುದರಿಂದ ಮಗು ನಿದ್ರಿಸುತ್ತಿದೆ ಎಂದಿದ್ದರು. ಸಂಜೆ ಐಸಿಯುಗೆ ಸ್ಥಳಾಂತರಿಸಿದ ಬಳಿಕ ಮಗು ಕೈಕಾಲು ಒದರುತ್ತ ಅಸ್ವಸ್ಥಗೊಂಡಿತು. ಮೂರು ದಿನವಾದರೂ ಮಗುವಿನ ಸ್ಥಿತಿ ಸುಧಾರಿಸಲಿಲ್ಲ' ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.
'ಬಳಿಕ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ ಅಲ್ಲಿ ಮಗುವಿಗೆ ಕೃತಕ ಉಸಿರಾಟ ವ್ಯವಸ್ಥೆ ಅಗತ್ಯವಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಇಲ್ಲ' ಎಂದು ವೈದ್ಯರು ಹೇಳಿದರು. ನಂತರ ಜಯನಗರದ ಮಾಲತಿ ಮಣಿಪಾಲ್ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಯಿತು. ಒಂದು ವಾರದಿಂದ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ' ಎಂದು ಪೋಷಕರು ನೊಂದು ನುಡಿದಿದ್ದಾರೆ.
ಅನೇಸ್ತೇಶಿಯಾ ರಗಳೆ ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಯಡವಟ್ಟು ಪ್ರಸಂಗಗಳು ಅನೇಕವು ಜರುಗಿವೆ. ಕೆಲ ಸಂದರ್ಭದಗಳಲ್ಲಿ ರೋಗಿಯ ಪ್ರಾಣ ಸಂಚಕಾರವೂ ಆಗಿದೆ. ಕಳೆದೊಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಇಂತಹ ನಾಲ್ಕು ಪ್ರಕರಣಗಳು ಘಟಿಸಿವೆ. (ಹೆಚ್ಚಿನ ಅರವಳಿಕೆ ಚುಚ್ಚುಮದ್ದಿಗೆ ಮತ್ತೊಂದು ಸಾವು )
ಆದರೆ ತಜ್ಞರು anaesthesia overdose ಅನ್ನು ಸಾರಾಸಗಟಾಗಿ ತಿರಸ್ಕರಿಸುತ್ತಾರೆ. ಅಧಿಕ ಪ್ರಮಾಣದಲ್ಲಿ ಅನೇಸ್ತೇಶಿಯಾವನ್ನು ನೀಡಿದ್ದರಿಂದಲೇ ಯಡವಟ್ಟಾಗಿದೆ ಎಂದು ನಿಖರವಾಗಿ ಬೊಟ್ಟುಮಾಡಿ ತೋರಿಸಲಾಗುವುದಿಲ್ಲ. (ಬೆಂಗಳೂರು : ವೈದ್ಯನ ನಿರ್ಲಕ್ಷ್ಯದಿಂದ ಮಗು ಸಾವು)
ಈ ಬಗ್ಗೆ Indian Society of Anaesthesiologistsನ ಬೆಂಗಳೂರು ಘಟಕದ ಕಾರ್ಯದರ್ಶಿ ಡಾ. ಶ್ರೀಗಣೇಶ್ ಕೆ ಅವರು ಹೀಗೆ ಹೇಳುತ್ತಾರೆ: ಸುರಕ್ಷಿತ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಅನೇಸ್ತೇಶಿಯಾ ನೀಡದರೆ ಅದು ಸುರಕ್ಷಿತವಾಗಿರುತ್ತದೆ. ಅನೇಸ್ತೇಶಿಯಾದಿಂದ ಸಾವು ಸಂಭವಿಸುವುದು ವಿರಳ.
'ರೋಗಿಯ ದೇಹದ ತೋಕವನ್ನು ಗಮನದಲ್ಲಿಟ್ಟುಕೊಂಡು ಅನೇಸ್ತೇಶಿಯಾ ಪ್ರಮಾಣವನ್ನು ನಿರ್ಧರಿಸಲಾಗುತ್ತದೆ. 10 ಕೆಜಿ ತೂಗುವ ಮಗುವಿಗೆ ಶಸ್ತ್ರಚಿಕಿತ್ಸೆ ವೇಳೆ 50 ಎಂಜಿ ಅನೇಸ್ತೇಶಿಯಾ ಔಷಧ ನೀಡಲಾಗುತ್ತದೆ. ರೋಗಿಗೆ ಮಧುಮೇಹ, ಅಧಿಕ ರಕ್ತದೊತ್ತಡದಿಂದ ಆರೋಗ್ಯ ವ್ಯತಿರಿಕ್ತವಾಗಿದ್ದರೆ ಅನೇಸ್ತೇಶಿಯಾ ಪ್ರಮಾಣವನ್ನು ಕಡಿಮೆ ಮಾಡಲಾಗುತ್ತದೆ'
ನಗರದಲ್ಲಿ ಒಂದು ದಿನಕ್ಕೆ 500ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳು ನಡೆಯುತ್ತಿರುತ್ತವೆ. ನಗರದಲ್ಲಿ 1,200ಕ್ಕೂ ಹೆಚ್ಚು ಅನೇಸ್ತೇಶಿಯಾ ತಜ್ಞರು ಇದ್ದಾರೆ. ನಿಜಕ್ಕು ಅನೇಸ್ತೇಶಿಯಾವನ್ನು ಅಧಿಕ ಪ್ರಮಾಣದಲ್ಲಿ ನೀಡುವ ಪ್ರಸಂಗಗಳು ಇದ್ದಿದ್ದರೆ ಈ ವೇಳೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಇಂತಹವು ನಡೆಯಬೇಕಿತ್ತು. ಆದರೆ ಒಂದೋ ಎರಡೂ ನಡೆದಿವೆಯಷ್ಟೇ. ಇದು ಜನರ ತಪ್ಪು ಗ್ರಹಿಕೆ. ಉಸಿರಾಟದ ತೊಂದರೆಯಿರುವವರಿಗೆ ಶಸ್ತ್ರಚಿಕಿತ್ಸೆ ಮಾಡಿದಾಗ ಇಂತಹ ತೊಂದರೆಗಳು ಕಾಣಿಸಿಕೊಳ್ಳುತ್ತವೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications