ವಿಧಾನ ಸಭೆ ಉಪಸಭಾಧ್ಯಕ್ಷರಾಗಿ ಆನಂದ್ ಮಾಮನಿ ಆಯ್ಕೆ
ಬೆಂಗಳೂರು, ಮಾರ್ಚ್ 24: ಕರ್ನಾಟಕ ವಿಧಾನ ಸಭೆಯ ಉಪಸಭಾಧ್ಯಕ್ಷರಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಧ್ವನಿಮತದ ಮೂಲಕ ಉಪಸಭಾಧ್ಯಕ್ಷರ ಸ್ಥಾನಕ್ಕೆ ಆನಂದ್ ಮಾಮನಿ ಅವರ ಹೆಸರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದರು, ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅನುಮೋದಿಸಿದರು.
ನೂತನ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಆನಂದ್ ಮಾಮನಿಯವರನ್ನು ಸಭಾನಾಯಕ, ಸಿಎಂ ಯಡಿಯೂರಪ್ಪನವರು ಉಪಸಭಾಧ್ಯಕ್ಷರ ಪೀಠಕ್ಕೆ ಕರೆತಂದರು.

ನಂತರ ಮಾತನಾಡಿದ ನೂತನ ಉಪಸಭಾಧ್ಯಕ್ಷ ಆನಂದ್ ಮಾಮನಿ, ಕರ್ನಾಟಕ ವಿಧಾನ ಸಭೆಯ ಉಪಸಭಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಕ್ಷೇತ್ರದ ಆರಾಧ್ಯ ದೇವತೆ ರೇಣುಕಾ ಎಲ್ಲಮ್ಮ, ಮನೆ ದೇವರಾದ ಕಲ್ಲಿಕಟ್ಟಿ ಬಸವೇಶ್ವರ ಹಾಗೂ ತಮ್ಮ ತಂದೆಯವರಾದ ಚಂದ್ರಶೇಖರ ಮಾಮನಿಯವರನ್ನು ಸ್ಮರಿಸಿದರು.
ತಮಮ್ಮ ಅವಿರೋಧ ಆಯ್ಕೆಗೆ ಸಹಕಾರ ನೀಡಿದ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿಯ ಎಲ್ಲ ಶಾಸಕರು, ಪ್ರತಿಪಕ್ಷದ ಪ್ರಮುಖ ನಾಯಕರಿಗೆ ಆನಂದ್ ಮಾಮನಿ ಧನ್ಯವಾದ ಸಲ್ಲಿಸಿದರು.

ಈ ಹಿಂದೆ ಆನಂದ್ ಮಾನಿಯವರ ತಂದೆ ಚಂದ್ರಶೇಖರ ಮಾಮನಿ ಕೂಡ ವಿಧಾನ ಸಭೆ ಉಪಸಭಾಧ್ಯಕ್ಷರಾಗಿದ್ದರು ಎನ್ನುವುದು ವಿಶೇಷ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications