ಟೋಲ್ ದರ ಇಳಿಕೆ ಮಾಡಿ, ಅನಂತ್ ಕುಮಾರ್ ಪತ್ರ
ಬೆಂಗಳೂರು, ಮೇ 7 : ದೇವನಹಳ್ಳಿ ಟೋಲ್ ದರವನ್ನು ಕಡಿಮೆ ಮಾಡುಲು ತ್ವರಿತ ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಂಸದ ಅನಂತ್ ಕುಮಾರ್ ಕೇಂದ್ರ ಭೂ ಸಾರಿಗೆ ಸಚಿವ ಆಸ್ಕರ್ ಫರ್ನಾಂಡೀಸ್ ಅವರಿಗೆ ಪತ್ರ ಬರೆದಿದ್ದಾರೆ.
ನವಯುಗ ಟೋಲ್ ಕಂಪನಿ ಏಕಾಏಕಿ ಟೋಲ್ ದರವನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹಾಕಿದೆ. ದೇವನಹಳ್ಳಿ ಟೋಲ್ ಗೇಟ್ ಸುತ್ತಮುತ್ತಲಿನ ಜನರು ಸರ್ವೀಸ್ ರಸ್ತೆಗಳಿಲ್ಲದೆ ಪರದಾಡುತ್ತಿದ್ದಾರೆ ಎಂದು ಅನಂತ್ ಕುಮಾರ್ ಪತ್ರದಲ್ಲಿ ವಿವರಿಸಿದ್ದಾರೆ. [ಟೋಲ್ ದರ ಕೇಂದ್ರದತ್ತ ಕೈ ತೋರಿಸಿದ ಸರ್ಕಾರ]

ಟೋಲ್ ಶುಲ್ಕ ಹೆಚ್ಚಳವಾಗಿರುವುದರಿಂದ ದೇವನಹಳ್ಳಿಯ ಸುತ್ತಮುತ್ತಲಿನ ಗ್ರಾಮಗಳ ಜನರು ತಮ್ಮ ಬೇರೆಡೆ ಪ್ರಯಾಣ ಮಾಡಬೇಕೆಂದರೆ, ಟೋಲ್ ಪಾವತಿ ಮಾಡಿ ರಾಷ್ಟ್ರೀಯ ಹೆದ್ದಾರಿ 7ರ ಮೂಲಕ ಸಂಚರಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. [ಟೋಲ್ ದರ ಎಷ್ಟು ಹೆಚ್ಚಾಗಿದೆ]
22 ಕಿ.ಮೀ ಮಾರ್ಗದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಒಂದು ಬಾರಿ ಪ್ರಯಾಣಿಸಲು ಕಾರು, ಜೀಪು, ಹಗುರ ವಾಹನಗಳು 75 ರೂ., ಲಘು ವಾಣಿಜ್ಯ ವಾಹನ ಹಾಗೂ ಮಿನಿ ಬಸ್ಸುಗಳು 120 ರೂ., ಬಸ್, ಲಾರಿ ಹಾಗೂ ಎರಡು ಆ್ಯಕ್ಸಲ್ ವಾಹನಗಳು 235, ಮೂರರಿಂದ ಆರು ಆ್ಯಕ್ಸಲ್ ವಾಹನಗಳು 380 ರೂ. ಹಾಗೂ ಜೆಸಿಬಿಯಂತಹ ಬೃಹತ್ ಗಾತ್ರದ ವಾಹನಗಳು 470 ರೂ. ಶುಲ್ಕ ಪಾವತಿ ಮಾಡಬೇಕಾಗಿದೆ.
ಏಕಾಏಕಿ ಟೋಲ್ ದರವನ್ನು ಇಷ್ಟು ಹೆಚ್ಚಳ ಮಾಡಿದರೆ ಸಾರ್ವಜನಿಕರ ಮೇಲೆ ಹೊರೆ ವಿಧಿಸಿದಂತೆ ಆಗುತ್ತದೆ. ಟೋಲ್ ದರ ಹೆಚ್ಚಳವಾಗಿರುವುದರಿಂದ ಸಾರ್ವಜನಿಕರು ಸಂಚರಿಸುವ ಬಿಎಂಟಿಸಿ ಬಸ್ಸಿನ ಪ್ರಯಾಣ ದರವೂ ಹೆಚ್ಚಳವಾಗುತ್ತದೆ ಎಂದು ಅನಂತ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಗಮನಿಸಿ ಕೂಡಲೇ ಮದ್ಯಪ್ರವೇಶಿಸಿ ಟೋಲ್ ದರವನ್ನು ಕಡಿಮೆ ಮಾಡುವುದು ಮತ್ತು ದೇವನಹಳ್ಳಿ ಸುತ್ತಮುತ್ತಲಿನ ಜನರಿಗೆ ಉಪಯೋಗವಾಗುವಂತೆ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications