ಅನಂತ್ ಕುಮಾರ್ ಅವರದ್ದು ಅದ್ಭುತವಾದ ನೆನಪಿನ ಶಕ್ತಿ: ಕಟೀಲ್
ಬೆಂಗಳೂರು, ಸೆಪ್ಟೆಂಬರ್ 22, 2022: ಅನಂತ್ ಕುಮಾರ್ ಅವರಲ್ಲಿ ಅದ್ಭುತವಾದ ನೆನಪಿನಶಕ್ತಿ ಇತ್ತು. ಎಷ್ಟೋ ವರ್ಷಗಳ ಹಿಂದೆ ನೋಡಿದ ಕಾರ್ಯಕರ್ತರ ಹೆಸರನ್ನು ನೆನಪಿನಲ್ಲಿಟ್ಟುಕೊಂಡು ಕರೆಯುತ್ತಿದ್ದರು.ಇಂದಿನ ರಾಜಕಾರಣಿಗಳಲ್ಲಿ ಪ್ರಧಾನಿ ಮೋದಿ ಬಿಟ್ಟರೆ ಈ ಅದ್ಭುತವಾದ ನೆನಪಿನ ಶಕ್ತಿ ಇದ್ದಿದ್ದು ಅನಂತ್ ಕುಮಾರ್ ಗೆ ಮಾತ್ರ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದರು.
ದಿವಂಗತ ಅನಂತಕುಮಾರ್ ಅವರ 63 ನೇ ಜನ್ಮದಿನಾಚರಣೆಯ ಅಂಗವಾಗಿ ಅನಂತ ಪ್ರೇರಣಾ ಕೇಂದ್ರ, ಅದಮ್ಯಚೇತನ, ಅನಂತ ಕುಮಾರ್ ಪ್ರತಿಷ್ಠಾನ ಆಯೋಜಿಸಿದ '1987-1997ರ ದಶಮಾನದಲ್ಲಿ ಅನಂತಕುಮಾರ್ ಒಡನಾಡಿಗಳಾಗಿದ್ದ ಪ್ರಮುಖ ಕಾರ್ಯಕರ್ತರ ಸಮಾವೇಶ' ವಿವಿ ಪುರಂ ಕಾಲೇಜಿನ ಎದುರಿನಲ್ಲಿರುವ ಕರ್ನಾಟಕ ಜೈನ್ ಭವನದಲ್ಲಿ ಬಹಳ ಅದ್ಭುತವಾಗಿ ನಡೆಯಿತು. ಇನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಮಾಜಿ ವಿಧಾನಸಭಾಧ್ಯಕ್ಷರಾದ ಡಿ.ಎಚ್ .ಶಂಕರಮೂರ್ತಿ, ವಿಶೇಷ ಅಹ್ವಾನಿತರಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು, ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತ ಕುಮಾರ್ ಉಪಸ್ಥಿತರಿದ್ದರು.
ಇನ್ನು ಈ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಕುರಿತು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡ ಭಾ.ಜ.ಪ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ "ನಾನು ರಾಜಕೀಯಕ್ಕೆ ಪ್ರವೇಶ ಮಾಡಿದ ಮೇಲೆ ಅನಂತ್ ಕುಮಾರ್ ಅವರಿಂದ ಸಾಕಷ್ಟು ವಿಚಾರಗಳನ್ನು ಕಲಿತುಕೊಂಡೆ. ಅವರ ಆಚಾರ-ವಿಚಾರಗಳು ನನ್ನ ಮೇಲೆ ನನ್ನ ಸಾಕಷ್ಟು ಪ್ರಭಾವ ಬೀರಿದೆ. ಭಾಷಣ, ಇನ್ನೀತರ ವಿಚಾರಗಳ ಕುರಿತು ನಿರಂತರವಾಗಿ ಮಾರ್ಗದರ್ಶನ ಮಾಡಿದರು.

ಗಲಾಟೆಗಳಿಲ್ಲದೇ ಅಧಿವೇಶನ ನಡೆಸಿದರು
ಹಾಗೇ ಅವರಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸುವ ಹೃದಯ ಶ್ರೀಮಂತಿಕೆ ಇದ್ದಿತ್ತು.ಇನ್ನು ಸಂಸದೀಯ ಮಂತ್ರಿಯಾಗಿದ್ದ ಕಾಲಘಟ್ಟದಲ್ಲಿ ಯಾವುದೇ ಗಲಾಟೆಗಳಿಲ್ಲದೇ ಅಧಿವೇಶನ ನಡೆಸಿದರು. ಇವರು ಸಂಸದೀಯ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅತೀ ಹೆಚ್ಚು ಬಿಲ್ ಪಾಸ್ ಆಗಿತ್ತು. ಸಮಸ್ಯೆಗಳಿದ್ದಾಗ ಸರ್ಕಾರವನ್ನು ನಡೆಸುವಷ್ಟು ಮಾನಸಿಕವಾಗಿ ಗಟ್ಟಿಯಾಗಿದ್ದರು" ಎಂದು ಹೇಳಿದರು.

ಸ್ನೇಹದಲ್ಲಿ ಯಾವುದೇ ಮುಚ್ಚುಮರೆಯಿರಲಿಲ್ಲ
ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು "ಅನಂತ್ ಕುಮಾರ್ ಅವರು ಭಾರತೀಯ ಜನತಾ ಪಾರ್ಟಿಗೆ ಬಂದು ಸೇರಿದಂತ ಸಂದರ್ಭದಲ್ಲಿ ನಾವ್ಯಾರು ಅಧಿಕಾರಕ್ಕೆ ಬರ್ತಿವಿ ಎಂಬ ಕಲ್ಪನೆ ಕೂಡ ಮಾಡಿರಲಿಲ್ಲ. ಇವತ್ತು ರಾಜ್ಯದಲ್ಲಿ ಸಂಘಟನೆಯ ಮುಖಾಂತರ ಬೆಳೆದು ಸರ್ಕಾರ ಬಂದಿರುವುದಕ್ಕೆ ಮತ್ತು ಕೇಂದ್ರದಲ್ಲಿ 25 ಜನ ಸಂಸದರು ಹೋಗಿ ಅಧಿಕಾರ ತಂದಿರುವುದಕ್ಕೆ ಆಗಿನ ಅನಂತ್ ಕುಮಾರ್ ಅವರ ಶ್ರಮ ಅತೀ ಹೆಚ್ಚು ಎಂದು ನಾನು ಖುಷಿಯಿಂದ ಹೇಳುತ್ತೇನೆ. ಅವರ ಸ್ನೇಹದಲ್ಲಿ ಯಾವುದೇ ಮುಚ್ಚುಮರೆಯಿರಲಿಲ್ಲ. ಕೇಂದ್ರದ ಪ್ರತಿಯೊಬ್ಬ ನಾಯಕರ ಜೊತೆಗೆ ನಮ್ಮ ಸಾಮಾನ್ಯ ಕಾರ್ಯಕರ್ತರ ಕೊಂಡಿಯಾಗಿ ಕೆಲಸ ಮಾಡಿಕೊಡುತ್ತಿದ್ದರು. ಸೋಲೆ ಇಲ್ಲದ ಸರದಾರ ಎಂದು ಅನಂತ್ ಕುಮಾರ್ ಅವರನ್ನು ಕರೆಯಬಹುದು" ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಪಕ್ಷ ಮುನ್ನೆಡಸುವ ಕನಸು ಇತ್ತು
ಇನ್ನು ಅನಂತ್ ಕುಮಾರ್ ಬಗ್ಗೆ ಮಾತನಾಡಿದ ಮಾಜಿ ವಿಧಾನಸಭಾಧ್ಯಕ್ಷರಾದ ಡಿ.ಎಚ್ .ಶಂಕರಮೂರ್ತಿ, ಅನಂತ್ ಕುಮಾರ್ ಸವಾಲುಗಳನ್ನು ಎದುರಿಸುತ್ತಿದ್ದ ರೀತಿ ಇಂದಿನ ಯುವಕರಿಗೆ ಸ್ಪೂರ್ತಿದಾಯಕವಾದದ್ದು. ಪಕ್ಷವನ್ನು ಬೆಳೆಸುವ ಹಾಗೂ ಮುನ್ನೆಡಸುವ ಕನಸು, ಗುರಿ ಅವರಲ್ಲಿತ್ತು. ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಕೂಡ ಅನಂತ್ ಕುಮಾರಲ್ಲಿತ್ತು" ಎಂದರು.

ಸಂಘಟನೆ ಅನಂತ್ ಕುಮಾರ್ರಿಂದ ಕಲಿಯಬೇಕು
ನಾಯಕತ್ವಕ್ಕೆ ನಿಜವಾದ ಅರ್ಥವೆಂದರೆ ಅದು ಅನಂತ್ ಕುಮಾರ್. ಪಕ್ಷದ ಸಂಘಟನೆಯಲ್ಲಿ ಆರ್ಥಿಕ ವ್ಯವಸ್ಥೆಯನ್ನು ಹೇಗೆ ಅದ್ಭುತವಾಗಿ ಸರಿದೂಗಿಸಿಕೊಂಡು ಹೋಗಬಹುದು ಎಂಬುದನ್ನು ಅನಂತ್ ಕುಮಾರ್ ಅವರಿಂದ ಕಲಿಯಬಹುದಾಗಿತ್ತು. ಅವರು ಜವ್ದಾರಿಯುತ ಸ್ಥಾನದಲ್ಲಿದ್ದರು ಪಕ್ಷದ ಸಂಘಟನೆಗೋಸ್ಕರ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅನಂತ್ ಕುಮಾರ್ ಅವರಿಂದ ಕಲಿಯಬಹುದಾಗಿತ್ತು ಎಂದು ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ ಹೇಳಿದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications