ಅನಂತ್ ಕುಮಾರ್ ಅಂತಿಮ ದರ್ಶನ : ಸ್ಥಳ ಪರಿಶೀಲಿಸಿದ ಪರಮೇಶ್ವರ

ಬೆಂಗಳೂರು, ನವೆಂಬರ್ 12 : ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು.

ಅನಂತ್ ಕುಮಾರ್ ಅವರ ಪಾರ್ಥಿವ ಶರೀರಿವನ್ನು ಅಂತಿಮ ದರ್ಶನಕ್ಕಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಡಲಾಗುತ್ತದೆ. ಕೇಂದ್ರ ಸಚಿವರು ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನಕ್ಕಾಗಿ ಆಗಮಿಸಲಿದ್ದಾರೆ.

ಗೃಹ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ನ್ಯಾಷನಲ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಭದ್ರತೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.

Ananth Kumar last rites : G Parameshwar inspects spot

ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, 'ಅನಂತ್ ಕುಮಾರ್ ಅವರ ದರ್ಶನಕ್ಕೆ ಸಾರ್ವಜನಿಕರು, ಗಣ್ಯರು ಅವಕಾಶ ಮಾಡಿಕೊಡಲು ಬಿಬಿಎಂಪಿ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ' ಎಂದರು.

'ಕೇಂದ್ರ ಗೃಹ ಸಚಿವರು, ಉಪ ರಾಷ್ಟ್ರಪತಿ, ಹಲವು ಕೇಂದ್ರ ಸಚಿವರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ನೀಡಲು ಪರಿಶೀಲನೆ ನಡೆಸಲಾಗಿದೆ' ಎಂದು ಪರಮೇಶ್ವರ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+