ದೇವೇಗೌಡ-ಚಂದ್ರಬಾಬು ನಾಯ್ಡು ಭೇಟಿ: ಮೈತ್ರಿಯದ್ದೇ ಮಾತು
ಬೆಂಗಳೂರು, ನವೆಂಬರ್ 08: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರು ನಾಯ್ಡು ಅವರಿಗೆ ಸ್ವಾಗತ ಕೋರಿದ್ದಾರೆ.
ತೆಲಂಗಾಣ ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಸಮೀಪದಲ್ಲಿರುವ ಕಾರಣ ಕಾಂಗ್ರೆಸ್ ಜೊತೆ ಮೈತ್ರಿ ಮತ್ತು ತೆಲಂಗಾಣ ರಾಜ್ಯದಲ್ಲಿ ಟಿಡಿಪಿ ಪರ ಕುಮಾರಸ್ವಾಮಿ ಮತ್ತು ದೇವೇಗೌಡ ಅವರು ಟಿಡಿಪಿ ಪರ ಪ್ರಚಾರ ಮಾಡುವ ಬಗ್ಗೆ ಚರ್ಚಿಸಲು ಚಂದ್ರಬಾಬು ನಾಯ್ಡು ಅವರು ಆಗಮಿಸಿದ್ದಾರೆ.
ಸಂಜೆ 3:30 ರ ಸುಮಾರಿಗೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚಂದ್ರಬಾಬು ನಾಯ್ಡು ಅವರು ಪದ್ಮನಾಭ ನಗರದ ದೇವೇಗೌಡ ಅವರ ನಿವಾಸಕ್ಕೆ ಬಂದಿದ್ದಾರೆ.

ಎನ್ಡಿಎ ಜೊತೆ ಸಂಪೂರ್ಣವಾಗಿ ನಂಟು ಕಡಿದುಕೊಂಡು ಎದುರು-ಬದುರಾಗಿರುವ ಟಿಡಿಪಿಯು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದೆ. ಅಲ್ಲದೆ ಕಾಂಗ್ರೆಸ್ ಬೆಂಬಲದೊಂದಿಗೆ ತೃತೀಯ ರಂಗವನ್ನು ರಚಿಸುವ ಯೋಜನೆ ಚಂದ್ರಬಾಬು ನಾಯ್ಡು ಅವರಿಗಿದೆ ಎನ್ನಲಾಗಿದೆ. ಹಾಗಾಗಿ ಅವರು ದೇವೇಗೌಡ ಅವರನ್ನು ಭೇಟಿ ಆಗಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೆ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದರು. ಟಿಡಿಪಿಯು ಕಾಂಗ್ರೆಸ್ ಜೊತೆ ಕೈಜೋಡಿಸುತ್ತಿರುವುದಕ್ಕೆ ಆಂಧ್ರಪ್ರದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications