ರಾತ್ರಿಯ ವೇಳೆ ಕಳ್ಳರಂತೆ ಕಾರಿನಲ್ಲಿ ಬಂದು ಹೆತ್ತ ತಾಯಿಯನ್ನು ಬಿಟ್ಟು ಹೋದ ಮಗಳು-ಅಳಿಯ: ರಾತ್ರಿಯಿಡೀ ಚಳಿಗೆ ನಡುಗಿತು ವೃದ್ಧ ಜೀವ!
ಆನೇಕಲ್ ಜನವರಿ 6: ರಾತ್ರಿಯ ವೇಳೆ ಕಳ್ಳರಂತೆ ಕಾರಿನಲ್ಲಿ ಬಂದು ಹೆತ್ತ ತಾಯಿಯನ್ನು ನಡುರಸ್ತೆಯಲ್ಲಿ ಮಗಳೊಬ್ಬಳು ಬಿಟ್ಟು ಹೋದ ಕರುಣಾಜನಕ ಘಟನೆ ಬೆಂಗಳೂರಿನ ಆನೇಕಲ್ನಲ್ಲಿ ನಡೆದಿದೆ.
ಆನೇಕಲ್ನ ಸರ್ಜಾಪುರದ ವಿ. ಕಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸ್ಥಳದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 80 ವರ್ಷದ ವೃದ್ಧೆಯನ್ನು ಕಾರಿನಲ್ಲಿ ಬಂದ ಮಗಳು ಹಾಗೂ ಅಳಿಯ ದೇವಸ್ಥಾನದ ಬಳಿ ಕಿಚಿತ್ತು ಕರುಣೆ ತೋರದೆ ಮಲಗಿಸಿ ಹೋಗಿದ್ದಾರೆ. ಬೆಳಗಾಗುವವರೆಗೂ ಚಳಿಗೆ ವೃದ್ಧೆ ನಡುಗಿಹೋಗಿದ್ದಾಳೆ. ಕುಳಿತುಕೊಳ್ಳಲು ಆಗದ ವೃದ್ಧೆಯನ್ನು ಸ್ಥಳೀಯ ಗ್ರಾಮಸ್ಥರು ರಕ್ಷಣೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಅನಿಲ್ ಕುಮಾರ್, 'ಬೆಳಿಗ್ಗೆ ನಾವು ನೋಡಿದಾಗ ವೃದ್ದೆ ದೇವಸ್ಥಾನದ ಬಳಿ ಮಲಗಿದ್ದರು. ಚಳಿಗೆ ಅವರು ತುಂಬಾ ನಡುಗುತ್ತಿದ್ದರು. ನಾವು ಅವರನ್ನು ಮಾತನಾಡಿಸಿದಾಗ ಅವರು ತನ್ನ ಮಗಳು ಆಶಾ ರಾಶಿ ಅಳಿಯ ಮಂಜುನಾಥ್ ನನ್ನನ್ನು ಕಾರಿನಲ್ಲಿ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದಾರೆ. ನನ್ನನ್ನು ರಾತ್ರಿಯಲ್ಲಿ ಮಗಳು ಅಳಿಯ ಥಳಿಸಿದ್ದಾರೆ. ಅವರು ದೊಮ್ಮಸಂದ್ರದಲ್ಲಿ ವಾಸವಾಗಿದ್ದೇವೆ. ಮಗಳು ಕೆಲಸಕ್ಕೆ ಹೋಗುತ್ತಾಳೆ. ಕಾಲಿಗೆ ಏಟಾಗಿದೆ ನೋಡಿ ಎಂದು ವೃದ್ಧೆ ಕಣ್ಣೀರು ಹಾಕಿದ್ದಾರೆ' ಎಂದು ಅವರು ಹೇಳಿದರು.
ಕೂಡಲೆ ಗ್ರಾಮಸ್ಥರು ಅಜ್ಜಿಗೆ ಊಟ, ನೀರು ಕೊಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ವೃದ್ಧೆಯ ಆರೋಗ್ಯ ಉತ್ತಮವಾಗಿದ್ದು ಆಶ್ರಮಕ್ಕೆ ಆಕೆಯನ್ನು ಕರೆದೊಯ್ಯಲಾಗಿದೆ ಎಂದು ಅನಿಲ್ ಕುಮಾರ್ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಪಾಪಿ ಮಗಳ ದುಷ್ಕ್ರತ್ಯ ಸೆರೆಯಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications