ಆನೇಕಲ್: ₹5,00,00,000ಗೂ ಅಧಿಕ ಹಣದ ಜೊತೆ ಸೇಟು ಪರಾರಿ, ಮಹಿಳೆಯರ ಕಣ್ಣೀರು
ಆನೇಕಲ್, ಆಗಸ್ಟ್, 16: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇನ್ನು ವಂಚಕರ ಜಾಲಗಳಿಗೆ ಸಿಲುಕಬೇಡಿ ಅಂತಲೂ ಪೊಲೀಸರು ಆಗಾಗ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿರುತ್ತಾರೆ. ಆದರೂ ಹಲವು ಜನರು ಯಾವುದೇ ಮೂಲಾಧಾರಗಳಿಲ್ಲದವರ ಬಳಿ ನಂಬಿ ಚೀಟಿಗೆ ಹಣ ಹಾಕಿ ಮೋಸಕ್ಕೆ ಸಿಲುಕಿರುವ ಘಟನೆಗಳು ನಡೆದಿವೆ. ಅಂತಹದ್ದೇ ಒಂದು ಘಟನೆ ಇದೀಗ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ.
ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ 5,00,00,000 ರೂಪಾಯಿ ಹೆಚ್ಚು ಹಣ ವಂಚಿಸಿ ಮಾಲೀಕ ಪರಾರಿ ಆಗಿರುವ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ. ಚಿನ್ನ ಕೊಡುತ್ತೇನೆಂದು ಹಣ ಕಟ್ಟಿಸಿಕೊಂಡ ಸೇಟು ವಂಚನೆ ಮಾಡಿದ್ದಾನೆ. ಇನ್ನೂ ಈ ಚೀಟಿಗಾಗಿಯೇ ಲಕ್ಷಾಂತರ ರೂಪಾಯಿ ಸಾಲ ಮಾಡಿ ಮಹಿಳೆಯರು ಕಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆದರೆ ಇದೀಗ ಚಿನ್ನ ಅಡವಿಟ್ಟು ಮನೆ ಖಾಲಿ ಮಾಡಿಕೊಂಡು ಸೇಟು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮುನಾರಾಮ್ ಎಂಬ ರಾಜಸ್ಥಾನಿ ಮೂಲದ ಮಾರ್ವಾಡಿ ಆನಂದ್ ಜ್ಯುವೆಲರ್ಸ್ ಅಂಡ್ ಕೇಸರ್ ಬ್ಯಾಂಕರ್ಸ್ನ ಮಾಲೀಕನಾಗಿದ್ದು, 10 ವರ್ಷಕ್ಕೂ ಹೆಚ್ಚು ದಿನದಿಂದ ಇಲ್ಲೇ ವಾಸ ಮಾಡುತ್ತಿದ್ದ ಎಂದು ತಿಳಿದಬಂದಿದೆ. ಅಲ್ಲದೆ, ಇವನು 100ಕ್ಕೂ ಹೆಚ್ಚು ಜನರಿಂದ ವರಮಹಾಲಕ್ಷಮಿ ಹಬ್ಬಕ್ಕೆಂದು ಚೀಟಿ ಹಾಕಿಸಿಕೊಂಡು ಚಿನ್ನ ಅಡ ಇಟ್ಟುಕೊಂಡಿದ್ದ.
ಇನ್ನು ನಾಳೆಯೇ ಅಂದರೆ (ಆಗಸ್ಟ್ 16 ಶುಕ್ರವಾರ) ವರಮಹಾಲಕ್ಷ್ಮಿ ಹಬ್ಬವಿದ್ದು, ಈ ಹಿನ್ನೆಲೆ ಚೀಟಿ ಹಾಕಿದ್ದ ಮಹಿಳೆಯರು ಚಿನ್ನ ಬಿಡಿಸಿಕೊಂಡು ಬರಲು ಹೋದಾಗ ಈ ವಂಚನೆ ಬೆಳಕಿಗೆ ಬಂದಿದೆ. ಇನ್ನು ಚಿನ್ನದ ಅಂಗಡಿ ಮಾಲೀಕ ಅಂಗಡಿ ಹಾಗೂ ಮನೆ ಖಾಲಿ ಮಾಡಿಕೊಂಡು ಪರಾರಿ ಆಗಿದ್ದು, ಇದನ್ನು ಕಂಡು ಆತಂಕಕ್ಕೊಳಗಾದ ಗ್ರಾಮಸ್ಥರು ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಲು ಹೋಗಿದ್ದಾರೆ.
ಸೇಟುನಿಂದ ವಂಚನೆಗೊಳಗಾದವರು ಸೂರ್ಯ ನಗರ ಪೊಲೀಸ್ ಠಾಣೆಗೆ ಬಂದಿದ್ದಾರೆ. ಇನ್ನು ವರಮಹಾಲಕ್ಷ್ಮೀ ಹಬ್ಬಕ್ಕೆಂದು ಹಣ ಕಟ್ಟಿದವರು ಇದೀಗ ಕಣ್ಣೀರಿಡುತ್ತಿದ್ದಾರೆ. ಇನ್ನು ಘಟನೆ ಕುರಿತು ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸೇಟು ಬಳಿ ಅಡವಿಟ್ಟು ಹಣ ಕಳೆದುಕೊಂಡವರ ಪಾಡಂತೂ ಇದೀಗ ವರಮಹಾಲಕ್ಷ್ಮಿ ಹಬ್ಬದ ಬದಲು ಕಣ್ಣೀರಲ್ಲಿ ಕೈತೊಳೆಯುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications